‌ವಿಜಯಪುರ | ಕವನಗಳು ಕನ್ನಡದ ಕಳೆಯನ್ನು ಹೆಚ್ಚಿಸುತ್ತವೆ: ತಹಶೀಲ್ದಾರ್ ಅಮರವಾಡಗಿ

Date:

ಕವನಗಳು ಕನ್ನಡದ ಕಳೆಯನ್ನು ಹೆಚ್ಚಿಸುತ್ತವೆ. ನೊಂದವರ ಪಾಲಿನ ಆಶಾಧ್ವನಿಯಾಗಿ ಇರಬೇಕೆಂದು ನಿಡಗುಂದಿ ತಾಲೂಕು ತಹಶೀಲ್ದಾರ್ ಎ ಬಿ ಅಮರವಾಡಗಿ ಅಭಿಪ್ರಾಯ ವ್ಯಕ್ತಪಡಿಸಿದರು.‌

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜವಾಹರ ನವೋದಯ ವಿದ್ಯಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ನಿಡಗುಂದಿ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕವನ ವಾಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಕವನಗಳನ್ನು ರಚನೆ ಮಾಡಿದರೆ ಸತ್ತಂತಿರುವವರನ್ನು ಬಡಿದೆಬ್ಬಿಸುವಂತಿರಬೇಕು. ಓದುವವರ ಮನಸ್ಸನ್ನು ಸೊರೆಗೊಳ್ಳುವಂತೆ ಇರಬೇಕು. ಮುಖ್ಯವಾಗಿ ಸಮಾಜಮುಖಿ ಮೌಲ್ಯವನ್ನು ಎತ್ತಿ ತೋರಿಸುವಂತಿರಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯ ವಿ ಶಾಂತಿ ಮುಖ್ಯ ಅತಿಥಿಯಾಗಿ ಮಾತನಾಡಿ, “ಮಕ್ಕಳು ಮಾತೃಭಾಷೆಯಲ್ಲಿ ಪಾಂಡಿತ್ಯ ಪಡೆಯಬೇಕು. ಮಾತು ವೈರಿಗಳ ಮುಂದೆ ಗತ್ತಿನಂತೀರಬೇಕು. ಹೆದರಿಸುವವರ ಮುಂದೆ ಕತ್ತಿಯಂತಿರಬೇಕು. ಆತ್ಮೀಯರ ಮುಂದೆ ಮುತ್ತಿನಂತಿರಬೇಕು. ಹಿರಿಯರ ಮುಂದೆ ಹತ್ತಿಯಂತಿರಬೇಕು. ಕವನಗಳ ಅರ್ಥ ಎಲ್ಲರಿಗೂ ತಿಳಿಯುವ ಹಾಗಿರಬೇಕು” ಎಂದರು.

ಮುಖ್ಯ ಅತಿಥಿ ಗ್ರಾಮೀಣ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸಿದ್ರಾಮಪ್ಪ ನಾಗಠಾಣ ಮಾತನಾಡಿ, “ಕನ್ನಡ ಅನ್ನದ ಭಾಷೆಯಾಗಿದೆ. ಆಡಳಿತ ಭಾಷೆಯಾಗಿದೆ. ಜಾನಪದ ಕವಿಗಳು ವಿದ್ಯಾಭ್ಯಾಸ ಮಾಡದಿದ್ದರೂ ಅನುಭವ ಜ್ಞಾನ ಅಪಾರವಾಗಿತ್ತು” ಎಂದರು.

ಅಧ್ಯಕ್ಷತೆ ವಹಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, “ಕವನ ರಚಿಸುವುದು ಅತ್ಯಂತ ಕ್ಲಿಷ್ಟಕರವಾಗಿದೆ. ಪ್ರತಿಭಾವಂತರು ಸಾಹಿತ್ಯ ಆಸಕ್ತರು ಕವನ ರಚಿಸುವಲ್ಲಿ ಕ್ರೀಯಾಶೀಲತೆ ಹೊಂದಿರುತ್ತಾರೆ. ಹಾಗೂ ಜಾನಪದ, ಸಾಂಸ್ಕೃತಿಕ, ಸಾಹಿತ್ಯಿಕ, ಚಟುವಟಿಕೆಗಳಿಂದ ಮಕ್ಕಳಲ್ಲಿರುವ ಸೂಕ್ತವಾದ ಪ್ರತಿಭೆಯನ್ನು ಗುರುತಿಸಿ ಅವರಿಗೂ ಕವನ ಬರೆಯುವ ಹವ್ಯಾಸ ಬೆಳೆಸಲು ಸ್ಪೂರ್ತಿ ನೀಡಿದಂತಾಗುತ್ತದೆ” ಎಂದರು.

ನಿಡಗುಂದಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಂಗಮೇಶ ಕೆಂಬಾವಿ ಪ್ರಾಸ್ತಾವಿಕವಾಗಿ ಮಾತನಾಡಿ, “ಕನ್ನಡ ಸಾಹಿತ್ಯ ಪರಿಷತ್ತು ಗ್ರಾಮ, ಹೋಬಳಿ, ಹಾಗೂ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಮಕ್ಕಳಿಗೆ ಉಪಯುಕ್ತವಾಗುವಂತಹ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಹೆಮ್ಮೆಯ ವಿಷಯ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಲಂ ನಿವಾಸಿಗಳ ನಿವೇಶನ ಅಭಿವೃದ್ಧಿಪಡಿಸಲು ಅಧಿಕಾರಿಗಳ ನಿರ್ಲಕ್ಷ್ಯ; ಜಿಲ್ಲಾಧಿಕಾರಿ ಕಿಡಿ

ಉಪ ಪ್ರಾಂಶುಪಾಲ ಡಿ ಪಿ ತ್ಯಾಡಿ, ರಾಜೇಸಾಬ ಶಿವನಗುತ್ತಿ, ಎಮ್ ಎಸ್ ಮೂಕಾರ್ತಿಹಾಳ, ಆರ್ ಎ ನದಾಫ‌, ಯಮನೂರಪ್ಪ ಗಂಗಶೆಟ್ಟಿ, ನಬಿರಸೂಲ ಬಾಣಕರ, ನಿಡಗುಂದಿ ಕಸಾಪ ಪದಾಧಿಕಾರಿಗಳಾದ ನಜೀರ ಗುಳೇದ, ಸಲೀಮ ದಡೇದ, ಸಂತೋಷ ಮಾಮನಿ, ಮಮತಾ ಪಟ್ಟಣಶೆಟ್ಟಿ, ಎಂ ಎಂ ಮುಲ್ಲಾ, ಸುರೇಶ ಸಣ್ಣಮನಿ, ರಾಜು ತೊರಗಲಮಠ, ಮಲ್ಲಯ್ಯಾ ಬೂದಿಹಾಳಮಠ, ಎಸ್ ಎಂ ಕಮತಗಿ, ಗಂಗಾಧರ ಕಾಳಗಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...