ವಿಜಯಪುರ | ರಾಣಿ ಚನ್ನಮ್ಮ, ವೀರ ರಾಯಣ್ಣನ ದೇಶಪ್ರೇಮ ಎಲ್ಲರಿಗೂ ಸ್ಪೂರ್ತಿ: ಮಾಜಿ ಶಾಸಕ ಶಿವಪುತ್ರಪ್ಪ ದೇಸಾಯಿ

Date:

ಕಿತ್ತೂರು ರಾಣಿ ಚನ್ನಮ್ಮ ಹಾಗೂ ವೀರ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ನಮಗೆಲ್ಲರಿಗೂ ಸ್ಪೂರ್ತಿ. ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ತಾಯ್ನಾಡಿಗಾಗಿ ಹೋರಾಡಿ ಇತಿಹಾಸ ಪುರುಷರಾಗಿ ಅಜರಾಮರಾಗಿದ್ದಾರೆ ಎಂದು ಮಾಜಿ ಶಾಸಕ ಶಿವಪುತ್ರಪ್ಪ ದೇಸಾಯಿ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಜಯಪುರ ಜಿಲ್ಲೆ, ತಾಲೂಕು ಹಾಗೂ ನಗರ ಘಟಕದ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರ ಸಂಸ್ಥಾನದ ಕೊಡುಗೆ ಕುರಿತು ನಡೆದ ಚಿಂತನ ಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

“ಇಂದಿನ ಯುವಜನರು ಮತ್ತು ಮಕ್ಕಳು ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಸ್ವಾಭಿಮಾನ ಹಾಗೂ ಸಾಹಸ ಗುಣಗಳನ್ನು ಅಳವಡಿಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯ ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಪೋಲೀಸ ವರಿಷ್ಠಾಧಿಕಾರಿ ಸುಭಾಷ ಗುಡಿಮನಿ ಮಾತನಾಡಿ, “ದೇಶದಲ್ಲಿ ಇತಿಹಾಸ ಸೃಷ್ಟಿಸಿದ ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣನ ಸ್ವಾಭಿಮಾನಕ್ಕೆ ದೇಶಾಭಿಮಾನಿಗಳು ಪ್ರೇರಣೆಗೊಂಡಿದ್ದಾರೆ. ನಮ್ಮ ನಾಡಿನ ಉಳಿವಿಗಾಗಿ ಅವರ ತ್ಯಾಗ ಅಮರ. ಚನ್ನಮ್ಮ ಬಾಲ್ಯದಲ್ಲಿಯೇ ಯುದ್ಧದ ಕಲೆಗಳನ್ನು ಕರಗತಮಾಡಿಕೊಂಡಿದ್ದರೆ, ಸಂಗೊಳ್ಳಿ ರಾಯಣ್ಣ ಹುಟ್ಟಿನಿಂದಲೇ ಸಾಹಸಿಯಾಗಿದ್ದರು. ಹಾಗಾಗಿ ಬ್ರಿಟಿಷರ ವಿರುದ್ಧ ಹೋರಾಡಿ ವೀರ ಶೂರ ಎನಿಸಿಕೊಂಡರು” ಎಂದರು.

ಬ್ರಿಟಿಷರ ವಿರುದ್ಧ ರಾಣಿ ಚನ್ನಮ್ಮ ಹೋರಾಟದ ಕುರಿತು ಉಪನ್ಯಾಸ ನೀಡಿದ ಪ್ರತಿಭಾ ಪಾಟಿಲ್ ಮಾತನಾಡಿ‌, “ದತ್ತು ಪುತ್ರ ನಿರಾಕರಣೆ ಮಾಡಿದ ಬ್ರಿಟಿಷರ ವಿರುದ್ಧ ಹೋರಾಟ ಪ್ರಾರಂಭಿಸಿದ ಕಿತ್ತೂರು ಸಂಸ್ಥಾನ ದೇಶದಲ್ಲಿಯೇ ಮೊದಲಿನದು. ರಾಜ್ಯ ನನ್ನದು, ರಾಜ್ಯ ನೀತಿಗಳು ನಮ್ಮವು ಅದನ್ನು ಪ್ರಶ್ನಿಸಲು ನೀನಾರು? ಎಂದು ಕಿತ್ತೂರು ಸಂಸ್ಥಾನ ಕಪ್ಪ ಕೊಡುವುದನ್ನು ನಿರಾಕರಿಸುತ್ತದೆ. ಬ್ರಿಟಿಷರ ಮೂರು ಸಾವಿರ ಸೈನಿಕರ ಎದುರು ಚನ್ನಮ್ಮಳ ಎರಡು ನೂರು ಸೈನಿಕರು ಬ್ರಿಟಿಷರನ್ನು ಸದೆಬಡಿದರು” ಎಂದು ಹೇಳಿದರು.

ಶರಣ ಚಿಂತಕ ಮೌನೇಶ್ವರ ಮೇಟಿ ಕಿತ್ತೂರು ಸಂಸ್ಥಾನದಲ್ಲಿ ಸಂಗೊಳ್ಳಿ ರಾಯಣ್ಣನ ಪಾತ್ರ ಕುರಿತು ಉಪನ್ಯಾಸ ನೀಡುತ್ತಾ, “ಬ್ರಿಟಿಷರನ್ನು ಸೋಲಿಸಿದ ಕೀರ್ತಿ ಚನ್ನಮ್ಮಳಿಗೆ ಸಲ್ಲುತ್ತದೆ. 1857ರ ಸಿಪಾಯಿ ದಂಗೆಗೂ ಮೊದಲು ಕಿತ್ತೂರಿನಲ್ಲಿ ಹೋರಾಟ ಪ್ರಾರಂಭವಾಗಿತ್ತು. ಬ್ರಿಟಿಷರು ಕೇಳಿದ ಕಪ್ಪ ಕಾಣಿಕೆಯನ್ನು ನೀಡುವುದನ್ನು ನಿರಾಕರಿಸಿದರು” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಗ್ರಾಮೀಣ ಸೊಗಡಿನ ರಂಗಕಲೆ ಮುಖ್ಯವಾಹಿನಿಗೆ ಬರಲಿ: ಗ್ರಾ.ಪಂ ಸದಸ್ಯ ವೆಂಕಟರಂಗಯ್ಯ

ಪ ಪೂ ಕವಲಗಿ ಇಂಡಿ ಮಠದ ರೂಪಾನಂದ ಮಹಾಸ್ವಾಮಿ ಮಾತನಾಡಿ, “ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾದ್ಯಂತ ಉತ್ತಮ ಉಪನ್ಯಾಸ ಕಾರ್ಯಕ್ರಮ ಮಾಡುವುದರ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರ ಬೆಳೆಸುವತ್ತ ಗಮನ ನೀಡಬೇಕು” ಎಂದು ಕೋರಿದರು.

ವೇದಿಕೆಯ ಮೇಲೆ ಕಾಶಿಮ್ ಪಟೇಲ‌, ಪಾಟೀಲ ಸುನಂದಾ ವಾಲಿಕಾರ, ಅನಸೂಯ ಜಾಧವ, ಮಲ್ಲಪ್ಪ ನ್ಯಾಮನ್ನವರ, ಲಲಿತಾ ಬಿರಾದಾರ, ಅಭಿಷೇಕ ಚಕ್ರವರ್ತಿ, ಸಿದ್ರಾಮಯ್ಯ ಲಕ್ಕುಂಡಿಮಠ, ಅಬ್ದುಲ್ ರಜಾಕ ಮುಲ್ಲಾ, ರಾಜೇಸಾಬ ಶಿವನಗುತ್ತಿ, ಅರ್ಜುನ ಶಿರೂರ, ಸುನಂದಾ ಕೋರಿ, ಶೋಭಾ ಹರಿಜನ,
ಎಸ್ ಎಲ್ ಇಂಗಳೇಶ್ವರ, ಕೆ ಸುನಂದಾ ಸೇರಿದಂತೆ ಬಹತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...