ವಿಜಯಪುರ | ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ವಿದ್ಯಾರ್ಥಿ ಯುವಜನರ ಮೇಲಿದೆ: ಡಿವಿಪಿ ಮುಖಂಡ

Date:

ಕೋಮುವಾದಿಗಳ ಕಪಿಮುಷ್ಟಿಯಲ್ಲಿರುವ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ವಿದ್ಯಾರ್ಥಿ ಯುವಜನರ ಮೇಲಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಹೇಳಿದರು.

ವಿಜಯಪುರ ನಗರದ ನೌಭಾಗ್ ಪ್ರಥಮ ದರ್ಜೆ ಕಾಲೇಜಿನಲ್ಲಿರುವ ಮೆಟ್ರಿಕ್ ನಂತರದ ಎಸ್‌ಸಿ/ಎಸ್‌ಟಿ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ಸಂವಿಧಾನ ಸಮರ್ಪಣಾ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಪ್ರಸ್ತುತ ದಿನದಲ್ಲಿ ಭಾರತದ ಪ್ರತಿಯೊಬ್ಬ ಪ್ರಜೆಯೂ ಮರೆಯದ ದಿನ ಸಂವಿಧಾನದ ದಿನವಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತು. ಆದರೆ ಸಮಾನತೆ ಸಿಕ್ಕಿರಲಿಲ್ಲ. ಅದೂ ಸಿಕ್ಕಿದ್ದು ಬಾಬಾಸಾಹೇಬರು ಬರೆದ ಸಂವಿದಾನದ ಮೂಲಕ. ಅದಕ್ಕಾಗಿ ನಾವು ಈ ದಿನವನ್ನು ಪ್ರಜಾಪ್ರಭುತ್ವದ ಸಮಾನತೆಯ ದಿನವೆಂದು ಆಚರಿಸಬೇಕಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಬಾಸಾಹೇಬರು ಸಂವಿಧಾನಾತ್ಮಕವಾಗಿ ಎಲ್ಲವನ್ನೂ ಕೊಟ್ಟಿದ್ದಾರೆ. ಆದರೆ ಕೋಮುವಾದಿಗಳ ದುರುದ್ದೇಶದಿಂದ ಶೋಷಿತ ಜನರಿಗೆ ಸಂವಿಧಾನದ ಆಶಯಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಸಂವಿಧಾನವನ್ನು ಜಾರಿ ಮಾಡುತ್ತಿಲ್ಲ. ಅದಕ್ಕಾಗಿ ಪ್ರತಿಯೊಬ್ಬರೂ ಸಂವಿಧಾನವನ್ನು ಓದಬೇಕು. ಸಂವಿಧಾನ ಜಾರಿಯಾಗುವ ಜಾಗದಲ್ಲಿ ನಾವಿರಬೇಕು” ಎಂದರು.

ಅತಿಥಿ ಸಂಗಮೇಶ್ ಗೌರವರ್ ಮಾತನಾಡಿ, “ಪ್ರಸ್ತುತದಲ್ಲಿ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಶಿಕ್ಷಣ ಸಂವಿಧಾನದ ಮೂಲಕವೇ ಹೊರತು ಮತ್ಯಾವ ಅವಶೇಷಗಳಿಂದ ಅಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಂವಿಧಾನ ದಿನ; ಪೀಠಿಕೆ ಓದುವ ಮೂಲಕ ಆಚರಣೆ

ಕಾರ್ಯಕ್ರಮದ ನಿರೂಪಣೆ ಮಾಡಿದ ವಸತಿ ನಿಲಯದ ಮೇಲ್ವಿಚಾರಕ ಅಶೋಕ್ ಕಲಶೆಟ್ಟಿ ಮಾತನಾಡಿ, “ಸಮಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಅಪಾರವಾಗಿದೆ” ಎಂದು ತಿಳಿ ಹೇಳಿದರು.

ಈ ಸಂದರ್ಭದಲ್ಲಿ ಆನಂದ ಮುದೂರ, ಸತೀಶ್ ಅಂಜುಟಗಿ, ಸಾಲೋಟಗಿ, ಋಷಿಕೇಶ್ ಕಟ್ಟಿ, ಸಚಿನ್ ಚಲವಾದಿ, ಶರಣು, ಸಂಜು, ವಿಕಾಸ, ರಾವಣ, ನವೀನ್ ಸೇರಿದಂತೆ ಬಹುತೇಕ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...