ವಿಜಯಪುರ | ಇಂದಿನಿಂದ ಸ್ಯಾಂಡಲ್ ಸೋಪ್ ಮೇಳ

Date:

ವಿಜಯಪುರ ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ಇಂದಿನಿಂದ (ಜ.11) ಜನವರಿ 20ರವರೆಗೆ ಮೈಸೂರು ಸ್ಯಾಂಡಲ್ ಸೋಪ್ ಮೇಳ ಆಯೋಜಿಸಲಾಗಿದೆ ಎಂದು ಕರ್ನಾಟಕ ಸಾಬೂನು ಮತ್ತು ಡಿಟರ್ಜೆಂಟ್ ನಿಗಮದ ಶಾಖಾ ವ್ಯವಸ್ಥಾಪಕಿ ಸುಷ್ಮಾ ಆರ್ ತಿಳಿಸಿದರು.

ವಿಜಯಪುರ ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಂದಿನಿಂದ 20ರವರೆಗೆ ಪ್ರತಿದಿನ ಬೆಳಗ್ಗೆ 9:30 ರಿಂದ ರಾತ್ರಿ 9 ರವರೆಗೆ ಶ್ರೀಗಂಧ ಎಣ್ಣೆ, ಅಗರಬತ್ತಿ, ವಿವಿಧ ಬಗೆಯ ಸೋಪ್, ಸೌಂದರ್ಯ ವರ್ಧಕ, ಸ್ಯಾಂಡಲ್ ಧೂಪ್, ಹರ್ಬಲ್ ಹ್ಯಾಂಡ್ ವಾಷ್, ಬೇಬಿ ಸೋಪ್, ವಾಷಿಂಗ್ ಬಾರ್ ಸಾಬೂನು ಸೇರಿದಂತೆ 50ಕ್ಕೂ ಹೆಚ್ಚು ಉತ್ಕೃಷ್ಟ ದರ್ಜಿಯ ಉತ್ಪನ್ನಗಳನ್ನು ಶೇ 10 ರಿಂದ 15ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ಸೋಪ್ ಮೇಳದಲ್ಲಿ ಮೈಸೂರು ಅರಮನೆಯ ದರ್ಬಾರ್ ಹಾಲ್ ಸೆಟ್ ವಿಶೇಷ ಆಕರ್ಷಣೆಯಾಗಿದೆ” ಎಂದು ತಿಳಿಸಿದರು.

ನಿಗಮದ ಪ್ರಧಾನ ವ್ಯವಸ್ಥಾಪಕ ಎಂ ಗಂಗಪ್ಪ ಮಾತನಾಡಿ, ರಾಸಾಯನಿಕ ವಸ್ತುಗಳ ಬಳಕೆ ಇಲ್ಲ, ವಸ್ತುಗಳನ್ನು ಬಳಸುವ ಗ್ರಾಹಕರಿಗೆ ಯಾವುದೇ ಅಡ್ಡ ಪರಿಣಾಮ ಉಂಟಾಗದಂತೆ ನೈಸರ್ಗಿಕವಾಗಿ ಉತ್ಪಾದನೆ ಮಾಡಲಾಗುತ್ತದೆ. ಜೊತೆಗೆ ಗುಣಮಟ್ಟ ಕಾಯ್ದುಕೊಳ್ಳಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ಸ್ಯಾಂಡಲ್ ಸೋಪ್ ಹಾಗೂ ಇತರೆ ಉತ್ಪನ್ನಗಳಿಗೆ ಹಲವಾರು ಪ್ರಶಸ್ತಿ ಬಂದಿವೆ. ಬಾಗೋಳಿಕ ಮಾನ್ಯತೆ ಕೂಡ ಲಭಿಸಿದೆ. ಬಹುರಾಷ್ಟ್ರೀಯ ಸಂಸ್ಥೆಗಳ ತೀವ್ರ ಪೈಪೋಟಿಯ ನಡುವೆಯೂ ಸಂಸ್ಥೆಯು ಹೆಚ್ಚಿನ ವಹಿವಾಟನ್ನು ಹೊಂದಿದ್ದು, ವರ್ಷದಿಂದ ವರ್ಷಕ್ಕೆ ಪ್ರಗತಿಯತ್ತ ಸಾಗುತ್ತಿದೆ. ಸಂಸ್ಥೆಯ ಉತ್ಪನ್ನಗಳನ್ನು 25 ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತಿದೆ.

ಇದನ್ನೂ ಓದಿ: ವಿಜಯಪುರ | ವಿಜಯ ಪತಾಕೆ ಹಾರಿಸಿದ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ

2023-24ನೇ ಸಾಲಿನಲ್ಲಿ ₹1571 ಕೋಟಿ ವಹಿವಾಟು ನಡೆಸಿ ಅಂದಾಜು 362 ಕೋಟಿ ದಾಖಲೆ ಲಾಭಗಳಿಸಿದೆ. 2024-25ರಲ್ಲಿ ₹1787 ಕೋಟಿ, ಶೇ 14ರಷ್ಟು ಪ್ರಗತಿಯೊಂದಿಗೆ 451 ಕೋಟಿ ಲಾಭಗಳಿಸಿದೆ. 2025-26 ರಲ್ಲಿ ಡಿಸೆಂಬರ್ ವರೆಗೆ 1484 ಕೋಟಿ ವಹಿವಾಟು ನಡೆಸಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...