ವಿಜಯಪುರ | ಜ್ವಲಂತ ಸಮಸ್ಯೆಗಳ ವಿರುದ್ಧ ಸಹಿ ಸಂಗ್ರಹ ಅಭಿಯಾನ

Date:

ಕೇಂದ್ರ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದು ಒಂದು ದಶಕವೇ ಆಗುತ್ತಿದೆ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ ಮುಂತಾದ ವಿಷಯಗಳನ್ನು ಬಿಟ್ಟು ಬಿಜೆಪಿ ಸರ್ಕಾರವು ಈಗ ವಿಕಸಿತ ಭಾರತದ ಬಗ್ಗೆ ಭಾರೀ ಪ್ರಚಾರ ಮಾಡುತ್ತಿದೆ ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ ಭಗವಾನ್‌ ರೆಡ್ಡಿ ಟೀಕಿಸಿದರು.

ವಿಜಯಪುರದ ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದಿಂದ ನಗರದ ಗಾಂಧಿ ವ್ರತ್ತದಲ್ಲಿ ನಡೆದ ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದರು.

“ಅಮೆರಿಕಾ, ಜಪಾನ್, ಇಂಗ್ಲೆಂಡ್‌ಗಳಂತೆ ಭಾರತವೂ ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿ ಸದ್ಯದಲ್ಲೇ ಸೇರುತ್ತದೆಂದು ಮೋದಿಯವರು ಭಾಷಣ ಬಿಗಿಯುತ್ತಾರೆ. ಆದರೆ ವಾಸ್ತವ ಪರಿಸ್ಥಿತಿ ಏನು? ಅಭಿವೃದ್ಧಿ ಆಗಿದೆ ಎಂದರೆ ಯಾರ ಅಭಿವೃದ್ಧಿ ಎಂಬ ಪ್ರಶ್ನೆ ಕೇಳಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಣ, ಆರೋಗ್ಯ ರಂಗಗಳು ಖಾಸಗೀಕರಣಗೊಂಡು ಜನರ ಕೈಗೆ ಎಟುಕದಂತಾಗಿವೆ. ವಿದ್ಯಾವಂತರಿಗೂ ಉದ್ಯೋಗಗಳು ದೊರಕುತ್ತಿಲ್ಲ. ಕೈಗಾರಿಕೆಗಳು ನಗರದ ಸುತ್ತಮುತ್ತಲಿನ ಭೂಮಿ ಪಡೆದು, ರಿಯಾಯಿತಿ ದರದಲ್ಲಿ ನೀರು, ವಿದ್ಯುತ್, ತೆರಿಗೆ ವಿನಾಯಿತಿ ಪಡೆದರೂ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಕೆಲಸ ಕೊಡುತ್ತಿಲ್ಲ. ಇತ್ತೀಚೆಗೆ ಮೈಸೂರಿನ ಕಡಕೊಳ ಸಮೀಪದ ಯುವ ರೈತನೊಬ್ಬ ಕಚೇರಿ ಕಚೇರಿ ಅಲೆದು ಹತಾಶೆಯಿಂದ ಅತ್ಯಹತ್ಯೆ ಮಾಡಿಕೊಂಡ ದಾರುಣ ಘಟನೆ ವರದಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರೈತರು ಬದುಕು ಸಂಕಷ್ಟಮಯವಾಗಿದೆ. ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ವಾಗ್ದಾನ ನೀಡಿದ್ದ ಕೇಂದ್ರ ಸರ್ಕಾರ ಎರಡು ವರ್ಷಗಳ ನಂತರವೂ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯದ ಬಗರ್ ಹುಕುಂ ರೈತರ ಭೂಮಿಗೆ ಹಕ್ಕುಪತ್ರ ಇಲ್ಲದೆ ಸತತವಾಗಿ ಹೋರಾಡುತ್ತಿದ್ದಾರೆ. ಅರಣ್ಯನಾಶ, ಹವಾಮಾನ ಬದಲಾವಣೆಯ ಕಾರಣಗಳಿಂದ ಮಳೆ ಅನಿಶ್ಚಿತವಾಗಿದೆ. ಹಾಗಿದ್ದರೂ ಕೂಡ ಕೇಂದ್ರ ಸರ್ಕಾರವು ಅರಣ್ಯ ಸಂರಕ್ಷಣಾ ಕಾಯಿದೆಯನ್ನು ದುರ್ಬಲಗೊಳಿಸಿ, ಗಣಿಗಾರಿಕೆ, ಅಭಿವೃದ್ಧಿ ಯೋಜನೆಗಳಿಗೆ ಅರಣ್ಯಗಳಲ್ಲಿ ಅನುಮತಿ ನೀಡಲು ಮುಂದಾಗಿದೆ. ಆದರೆ, ಅದೇ ಕಾಡುಗಳಲ್ಲಿ ಶತಮಾನಗಳಿಂದ ವಾಸಿಸುವ ಯಾವುದೇ ನಾಗರಿಕ ಸೌಲಭ್ಯಗಳನ್ನು ಪಡೆಯದ ಆದಿವಾಸಿಗಳನ್ನು ಬಲವಂತವಾಗಿ ಹೊರಹಾಕಲಾಗುತ್ತಿದೆ. ಅಲ್ಲಿ ಐಷಾರಾಮಿ ಜಂಗಲ್ ರೆಸಾರ್ಟ್‌ಗಳು ತಲೆ ಎತ್ತಿವೆ. ಕೈಗಾರಿಕಾ ಮಾಲೀಕರಿಗೆ ಅನುಕೂಲವಾಗುವಂತೆ ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತರಲಾಗುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮನಲ್ಲ, ಭಾರತೀಯ ರಾಮ: ವಿಶ್ವನಾಥ್

ಪಕ್ಷದ ಜಿಲ್ಲಾ ಸಂಘಟನಾ ಸಮಿತಿ ಸದಸ್ಯ ಮಲ್ಲಿಕಾರ್ಜುನ ಎಚ್ ಟಿ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ ಎಚ್ ಟಿ, ಸದಸ್ಯರುಗಳಾದ ಶಿವಬಾಳಮ್ಮ ಕೊಂಡಗೊಳ್ಳಿ, ಸುರೇಖಾ ಕಡಪಟ್ಟಿ, ಶಿವಾನಂದ, ದ್ಯಾಮಣ್ಣ ಬಿರಾದಾರ, ಅರ್ಪಿತಾ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...