ವಿಜಯಪುರ | ಅಕ್ಕಮಹಾದೇವಿ ವಿವಿ: ವಸತಿ ಶುಲ್ಕ ರದ್ದುಗೊಳಿಸಿ, ದಾಖಲಾತಿ ನೀಡಲು ಆಗ್ರಹಿಸಿ ದವಿಪ ಪ್ರತಿಭಟನೆ

Date:

2022ರ ಶೈಕ್ಷಣಿಕ ಸಾಲಿನಲ್ಲಿ ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಪದವಿ ವ್ಯಾಸಂಗಕ್ಕೆ ಸೇರಿದ ವಿದ್ಯಾರ್ಥಿನಿಯರ ವಸತಿ ಶುಲ್ಕ ರದ್ದುಗೊಳಿಸಿ ನಿರಾಕ್ಷೇಪಣಾ ಪತ್ರ (NOC) ಹಾಗೂ ಮಾರ್ಕ್ಸ್ ಕಾರ್ಡ್ ನೀಡುವಂತೆ ಆಗ್ರಹಿಸಿ‌ ದವಿಪ (ದಲಿತ ವಿದ್ಯಾರ್ಥಿ ಪರಿಷತ್) ಪ್ರತಿಭಟನೆ ನಡೆಸಿತು.

ವಿಶ್ವವಿದ್ಯಾಲಯ ಮುಖ್ಯ ದ್ವಾರದ ಬಳಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ, “2022 ರಲ್ಲಿ ಪದವಿ ವ್ಯಾಸಂಗಕ್ಕೆ ದಾಖಲಾದ ವಿದಾರ್ಥಿನಿಯರು ವಿಶ್ವ ವಿದ್ಯಾಲಯದ ವಸತಿ ನಿಲಯಕ್ಕೆ ದಾಖಲಾಗುವ ಸಂದರ್ಭದಲ್ಲಿ ವಿಶ್ವ ವಿದ್ಯಾಲಯದ ಆಡಳಿತಾಧಿಕಾರಿಗಳು ಕೇವಲ 100 ರೂಪಾಯಿ ಮಾತ್ರ ಶುಲ್ಕವಿದೆ ಎಂದು ಹೇಳಿ, ವಿದ್ಯಾರ್ಥಿಗಳಿಗೆ ವಸತಿ ನಿಲಯಕ್ಕೆ ಪ್ರವೇಶ ನೀಡಿರುತ್ತಾರೆ. ನಂತರ ಎರಡು ವರ್ಷಗಳಿಂದ ಯಾವುದೇ ಶುಲ್ಕ ಕೇಳದೇ ಕಳೆದ ವರ್ಷ ಮೇ ತಿಂಗಳಲ್ಲಿ ಏಕಾಏಕಿ ಕಳೆದ ಮೂರು ವರ್ಷದ ಶುಲ್ಕವನ್ನು ಒಟ್ಟಿಗೆ ತುಂಬಬೇಕೇಂದು ವಿದ್ಯಾರ್ಥಿನಿಯರಿಗೆ ಒತ್ತಾಯಿಸಿ ದಿನ ನಿತ್ಯ ಮಾನಸಿಕ ಕಿರುಕುಳ ನೀಡುತ್ತಿದ್ದರು. ಇದನ್ನು ಖಂಡಿಸಿ ಕಳೆದ ವರ್ಷ ಜೂನ್ ತಿಂಗಳಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಸದರಿ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಅಂದು ವಿವಿ ಆಡಳಿತ ಮಂಡಳಿ ಭರವಸೆಯನ್ನೂ ನೀಡಿತ್ತು. ಇಲ್ಲಿಯವರೆಗೆ ಸದರಿ ಸಮಸ್ಯೆಯನ್ನು ಬಗೆಹರಿಸದೆ ಜೀವಂತವಾಗಿ ಇಟ್ಟ ಪರಿಣಾಮವಾಗಿ ಅದೆಷ್ಟು ಬಡ ವಿದ್ಯಾರ್ಥಿನಿಯರು ತಮ್ಮ ಮುಂದಿನ ಶಿಕ್ಷಣ ಮೊಟಕುಗೊಳಿಸಿ ಮನೆಯಲ್ಲಿ ಇರಬೇಕಾದ ಪರಿಸ್ಥಿತಿ ಉಂಟಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ದವಿಪ ಸಹ ಸಂಚಾಲಕ ಮಹಾದೇವ ಚಲವಾದಿ, “ಅನೇಕ ವಿದ್ಯಾರ್ಥಿನಿಯರು ವಿಶ್ವ ವಿದ್ಯಾಲಯದಲ್ಲಿ ಪದವಿ ವ್ಯಾಸಂಗ ಮುಗಿಸಿದರೂ ಅವರ ವಿದ್ಯಾಲಯದ ವಸತಿ ನಿಲಯದ ಶುಲ್ಕ ನೀಡಿಲ್ಲ ಎಂದೇಳಿ, ಇಲ್ಲಿಯವರೆಗೆ ವಿದ್ಯಾರ್ಥಿನಿರಿಗೆ ಶೈಕ್ಷಣಿಕ ದಾಖಲೆಗಳಾದ ಮಾರ್ಕ್ ಕಾರ್ಡ್ಸ್ ಮತ್ತು NOC ನೀಡಿಲ್ಲ. ಇದರ ಪರಿಣಾಮ ಬಡ ವಿದ್ಯಾರ್ಥಿನಿಯರಿಗೆ ಮುಂದಿನ ಶಿಕ್ಷಣ ಮುಂದುವರಿಸಲು ಆಗುತ್ತಿಲ್ಲ. ಯಾರೋ ಮಾಡಿದ ತಪ್ಪಿಗೆ ಇವತ್ತು ಬಡ ವಿದ್ಯಾರ್ಥಿನಿಯರು ಕಷ್ಟ ಅನುಭವಿಸುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಮಹಿಳೆಯರ ಅವಕಾಶ ವಂಚನೆ ಇಂದಿಗೂ ಮುಂದುವರೆದಿದೆ: ಪ್ರೊ. ಬಿ ಕೆ ರವಿ

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ವಿಶ್ವ ವಿದ್ಯಾಲಯದ ಕುಲಪತಿಗಳು ಮನವಿ ಸ್ವೀಕರಿಸಿ, ಕೊಡಲೇ ವಿದ್ಯಾರ್ಥಿನಿಯರ ಮುಂದಿನ ಶೈಕ್ಷಣಿಕ ಅಭಿವೃದ್ಧಿಗೆ ಬೇಕಾದ ದಾಖಲಾತಿ ನೀಡುವ ಜೊತೆಗೆ ವಿದ್ಯಾರ್ಥಿನಿಯರ ವಸತಿ ಶುಲ್ಕವನ್ನು ಮನ್ನಾ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರ ಪರಿಣಾಮ ವಿಧ್ಯಾರ್ಥಿನಿಯರಿಗೆ ನಿರಾಕ್ಷೇಪಣಾ ಪತ್ರವನ್ನು ವಿಶ್ವ ವಿದ್ಯಾಲಯದ ಅಧಿಕಾರಿಗಳು ನೀಡಿದರು.

ಈ ವೇಳೆ ಪ್ರತಿಭಟನೆಯಲ್ಲಿ ಪರಿಷತ್ ಮುಖಂಡರಾದ ಪ್ರೇಮಾ ಕೊಳ್ಳಿ, ದಾವೂದ್ ನಾಯ್ಕೋಡಿ, ಹುಚ್ಚಪ್ಪ ಭಾವಿಮನಿ, ವಿರೇಶ, ಭಾಗ್ಯಶ್ರೀ ನಾಯ್ಕ, ಸೋನಿ ವಡ್ಡರ, ಸಂಜನಾ ಪವಾರ್, ಶೃತಿ ತಳವಾರ, ಯಶೋದಾ ಕಾಂಬಳೆ ಇನ್ನಿತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...