ವಿಜಯಪುರ | ಕನಿಷ್ಟ ಕೂಲಿ ಜಾರಿಗೆ CITU ಒತ್ತಾಯ

Date:

ಉದ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ರಾಜ್ಯ ಸರ್ಕಾರ ಕನಿಷ್ಟ ವೇತನ ಕರಡು ಅಧಿಸೂಚನೆಯನ್ಸ್ ಪ್ರಕಟಿಸಿದೆ. ಇದರಲ್ಲಿ ಕಾರ್ಮಿಕ ಸಂಘಟನೆಗಳು ಮಾಲೀಕರ ಸಂಘಟನೆಗಳು ಆಕ್ಷೇಪಣೆಗಳನ್ನು ಹಾಗೂ ಸಲಹೆಗಳನ್ನು ನೀಡಿರುತ್ತಾರೆ. ಇದರ ಭಾಗವಾಗಿ ಎರಡು ಸುತ್ತು ಚರ್ಚೆ ನಡೆದಿರುತ್ತದೆ, ಅದೇ ರೀತಿ ಕನಿಷ್ಟ ಕೂಲಿಯನ್ನು ಜಾರಿಗೆ ಮಾಡಬೇಕು ಎಂದು CITU ವಿಜಯಪುರ ಜಿಲ್ಲಾ ಸಂಚಾಲಕ ಲಕ್ಷ್ಮಣ ಹಂದ್ರಾಳ ಒತ್ತಾಯಿಸಿದರು.

ನಗರದ ಕಾರ್ಮಿಕ ಇಲಾಖೆಯ ಮುಂದೆ ಪ್ರತಿಭಟನೆ ಮಾಡಿ, ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಈ ವೇಳೆ ಸುರೇಶ್ ಜಿಬಿಯವರು ಮಾತನಾಡಿ, “ಕನಿಷ್ಠ ವೇತನ ಪರಿಷ್ಕರಣೆಯಾಗಿರುವುದಿಲ್ಲ. ಕಾರ್ಮಿಕರ ಬೇಡಿಕೆಯ ಸಲುವಾಗಿ ದೇಶಾದ್ಯಂತ ಹೋರಾಟ ಮಾಡಲಾಗುತ್ತದೆ. ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಸರ್ಕಾರಗಳು ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತವೆ, ಇವುಗಳನ್ನು ಜಾರಿಯಾಗದಂತೆ ತಡೆಯಬೇಕು” ಎಂದು ಕರೆಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಟ್ಟಡ ಕಾರ್ಮಿಕ ಸಂಘಟನೆಯ ಸಂಚಾಲಕ ಈರಣ್ಣ ಬೆಳ್ಳುಂಡಗಿ ಮಾತನಾಡಿ, “ಕಟ್ಟಡ ಕಾರ್ಮಿಕ ಕಾನೂನು 1996 ಹಾಗೂ ಸೇಸ್ ಕಾನೂನುಗಳನ್ನು ಮರು ಸ್ಥಾಪಿಸಿ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕರ ಬದುಕನ್ನು ರಕ್ಷಿಸಬೇಕು. ದೇಶದಲ್ಲಿ ಏಳು ಕೋಟಿಗಿಂತ ಅಧಿಕ ಕಟ್ಟಡ ಕಾರ್ಮಿಕರಿದ್ದಾರೆ. ನಾಲ್ಕು ಲೇಬರ್ ಕೋಡ್ ಗಳಿಂದ ಬಿಒಸಿಡಬ್ಲ್ಯೂ ಅಡಿಯಲ್ಲಿ ಕಾರ್ಮಿಕರು ಪಡೆಯುತ್ತಿದ್ದ ರಕ್ಷಣೆ ಹಾಗೂ ಸೌಲಭ್ಯಗಳ ಮೇಲೆ ಸಾಕಷ್ಟು ಅಡ್ಡ ಪರಿಣಾಮ ಬೀರಲಿವೆ. ಎಲ್ಲ ಸಂಘಟಿತ ಅನಂಘಟಿತ ಕಾರ್ಮಿಕರಿಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಇವತ್ತಿನ ಗ್ರಾಹಕ ಬೆಲೆ ಸೂಚ್ಯಂಕ, ಮನೆ ಬಾಡಿಗೆ ಹಾಗೂ ಇತರೆ ಖರ್ಚುಗಳ ಆಧಾರದಲ್ಲಿ ರಾಜ್ಯದ ಕಾರ್ಮಿಕ ಸಂಘಟನೆಗಳು ನೀಡಿರುವ ಸಲಹೆಗಳನ್ನು ಪರಿಗಣಿಸಬೇಕು” ಎಂದರು.

ಇದನ್ನೂ ಓದಿ: ವಿಜಯಪುರ | ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣಕ್ಕೆ ಅರ್ಜಿ ಆಹ್ವಾನ

ಗ್ರಾಮ ಪಂಚಾಯಿತಿ ನೌಕರರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಾಲ್ ಅಹಮದ್ ಶೇಕ್ ಮಾತನಾಡಿದರು.

ಈ ವೇಳೆ ಸುಮಂಗಲಾ ಶೆಟ್ಟಿ,ಕಟ್ಟಡ ಕಾರ್ಮಿಕರ ಸಹ ಸಂಚಾಲಕರಾದ ಸಿದ್ದು ಅಂಗಡಿ, ಸಂಗಪ್ಪ ಕಪಾಲಿ, ಸುರೇಖಾ ವಾರೆ,ಮಹಾನಂದ ಚೌಹಾಣ್, ನೈನಜ್ ಮುಲ್ಲಾ, ರೇಣುಕಾ ನುಣಗಾರ್, ಮಹಾದೇವಿ ಸಾಶೆಟ್ಟಿ, ಮೋದಿನ್ ಸಾಬ್ ಮಮದಾಪುರ್, ಪರಶುರಾಮ್ ಬೆನಕಟ್ಟಿ, ಶಿವಾನಂದ ಅಣಿಮಿ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...