ವಿಜಯಪುರ | ಅಂಬೇಡ್ಕರ್‌ ನಿಗಮದಲ್ಲಿ ಅಕ್ರಮ; ಆರೋಪಿಗಳ ಖಾತೆ ಫ್ರೀಜ್‌ ಮಾಡಿಸಿ ₹27.55ಲಕ್ಷ ವಶಕ್ಕೆ

Date:

ವಿಜಯಪುರ ಜಿಲ್ಲೆಯಲ್ಲಿ ಡಾ. ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಭೂಒಡೆತನ ಯೋಜನೆಯಡಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ₹27.55ಲಕ್ಷ ಗಳನ್ನು ಫ್ರೀಜ್ ಮಾಡಿಸಿ ಸರ್ಕಾರಕ್ಕೆ ಮರಳಿಸಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “2018-19ರಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಭೂಮಿ ಒದಗಿಸುವ ಭೂ ಒಡೆತನ ಯೋಜನೆಯಲ್ಲಿ ಮೂವರು ಅಧಿಕಾರಿಗಳು ಸೇರಿದಂತೆ ಒಟ್ಟು ಆರು ಜನರು ಕೂಡಿಕೊಂಡು ಅಕ್ರಮ ಎಸೆಗಿದ್ದರು. ಒಟ್ಟು 11 ಜನ ನಕಲಿ ಫಲಾನುಭವಿಗಳ ಹೆಸರಲ್ಲಿ ರಾಜ್ಯ ಸರ್ಕಾರಕ್ಕೆ ಮೋಸ ಮಾಡಲಾಗಿತ್ತು. ಫಲಾನುಭವಿಗಳಿಗೆ ಹಂಚಿಕೆ ಮಾಡಲು ಸುಮಾರು 11 ಎಕರೆ ಭೂಮಿ ಖರೀದಿ ಮಾಡಲಾಗಿದೆ ಎಂದು ಹೇಳಿ ಬರೋಬ್ಬರಿ 75.9 ಲಕ್ಷ ರೂ ಹಣವನ್ನು ದುರುಪಯೋಗ ಮಾಡಿದ್ದರು. ಈ ಭೂ ಖರೀದಿ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತರ್ಲೆ ಹಾಗೂ ತಾಲೂಕು ಅಭಿವೃದ್ಧಿ ಅಧಿಕಾರಿಗಳಾದ ಎಸ್ ಎಸ್ ಮಣಗಿರಿ (ನಿವೃತ್ತ ) ಹಾಗೂ ಎಂ ಟಿ ಮುಧೋಳ (ನಿಧನ ಹೊಂದಿದ್ದಾರೆ) ವಿರುದ್ಧ 2024ರಲ್ಲಿ ಜಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇವರಿಗೆ ಇನ್ನೂ ಮೂವರು ಸಹ ಸಾತ್ ನೀಡಿದ್ದರು. ಮೊದಲಿಗೆ ಸರ್ಕಾರದ ಅನುದಾನವನ್ನು ನಕಲಿ ಫಲಾನುಭವಿಗಳಿಗೆ ವರ್ಗಾವಣೆ ಮಾಡಿ, ನಂತರ ಹಣವನ್ನು ಅವರೇ ವಿತ್ ಡ್ರಾ ಮಾಡಿಕೊಂಡಿದ್ದರು” ಎಂದು ಹೇಳಿದರು.

“2018ರ ಡಿಸೆಂಬರ್ ನಲ್ಲಿ ಮೊದಲ ಹಂತದಲ್ಲಿ 37.95 ಲಕ್ಷ ರೂಗಳ ಚೆಕ್, 2019ರ ಜನವರಿಯಲ್ಲಿ ಎರಡನೇ ಹಂತದಲ್ಲಿ 3.79 ಲಕ್ಷ ಹಾಗೂ ಮೂರನೇ ಹಂತದಲ್ಲಿ 34.15 ಲಕ್ಷ ರೂ ಬ್ಯಾಂಕ್ ಖಾತೆಯಿಂದ ಆರ್ ಟಿ ಜಿ ಎಸ್ ಮಾಡಿ ಹಣವನ್ನು ಲೂಟಿ ಮಾಡಿದ್ದರು. ಈ ಪ್ರಕರಣದಲ್ಲಿ ಲೋಕಾಯುಕ್ತ ಹಾಗೂ ಜಾರಿ ನಿರ್ದೇಶನಾಲಯ ಸಹ ತನಿಖೆ ಮಾಡುತ್ತಿವೆ. ಆರ್ ಟಿ ಜಿ ಎಸ್ ಮೂಲಕ ಹಣ ವರ್ಗಾವಣೆ ಮಾಡಿಕೊಂಡ ಸಂಬಂಧ ಸೈಬರ್ ಕ್ರೈಂ ಪೊಲೀಸರು ಕೂಡ ತನಿಖೆ ಕೈಗೊಂಡಿದ್ದಾರೆ. ಇದೀಗ ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿಸಿ ₹27.55 ಲಕ್ಷ ಸರ್ಕಾರಕ್ಕೆ ಮರಳಿಸಲು ಆದೇಶ ಮಾಡುವಂತೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ನಗರದ ವ್ಯಾಪಾರಿಯೊಬ್ಬರಿಗೆ ಟ್ರೇಡಿಂಗ್ ಹೆಸರಲ್ಲಿ 2.04 ಲಕ್ಷ ಹಣ ಹಾಕಿಸಿಕೊಂಡು ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿಸಿ, ದೂರುದಾರರ ಖಾತೆಗೆ ಜಮಾ ಮಾಡಿಸಲಾಗಿತ್ತು. ಈಗ ಮತ್ತೆ 65.64 ಲಕ್ಷ ರೂಗಳನ್ನು ದೂರುದಾರರ ಖಾತೆಗೆ ಜಮಾ ಮಾಡಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳಿಂದ ಒಟ್ಟಾರೆ 1.35 ಕೋಟಿ ರೂಗಳನ್ನು ದೂರುದಾರರಿಗೆ ಮರಳಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ವಿಜಯಪುರ | ಜ.25ರಂದು ರಾಷ್ಟೀಯ ಮತದಾರರ ದಿನಾಚರಣೆ

ಜಿಲ್ಲೆಯ ವೈದ್ಯರೊಬ್ಬರನ್ನು ಡಿವೊರ್ಸ್ ಮ್ಯಾಟ್ರಿಮೋನಿ ಮೂಲಕ ಪರಿಚಯ ಮಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹಾಗೂ ಕ್ರಿಪ್ಟೋ ಟ್ರೇಡಿಂಗ್ ಮಾಡಿ ಲಾಭ ಮಾಡಿ ಸಾಲ ತೀರಿಸುವುದಾಗಿ ಹೇಳಿ 2.15 ಕೋಟಿ ರೂ ವಂಚನೆ ಮಾಡಿರುವ ಬಗ್ಗೆ ಪ್ರಕರಣದ ದಾಖಲಾಗಿತ್ತು. ಈ ಪ್ರಕರಣದಲ್ಲೂ ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿಸಿ, 25.11 ಲಕ್ಷ ರೂಗಳನ್ನು ದೂರುದಾರರಿಗೆ ಮರಳಿಸಲಾಗಿದೆ ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...