ವಿಜಯಪುರ | SSLC ಪರೀಕ್ಷೆ: ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಪಂ ಸಿಇಒ ಭೇಟಿ, ಪರಿಶೀಲನೆ

Date:

ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ SSLC ಪರೀಕ್ಷಾ ಕೇಂದ್ರಗಳಿಗೆ ಹಾಗೂ ಜಿಲ್ಲಾ ಪಂಚಾಯತಿಯ ಮಿನಿ ಸಭಾಭವನದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವಿ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಇಲಾಖೆಯ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳು ಉಂಟಾಗದಂತೆ ಕಟ್ಟು-ನಿಟ್ಟಾಗಿ ನಡೆಸುವುದು. ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ ಅಧಿಕಾರಿಗಳು ಹಾಗೂ ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ವಿಜಯಪುರ ನಗರದ ಹೇಮರೆಡ್ಡಿ ಮಲ್ಲಮ್ಮ ಪ್ರೌಢ ಶಾಲೆ, ಪಿಡಿಜೆ ಪ್ರೌಢಶಾಲೆ, ಬಾಲಕರ ಮತ್ತು ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿದರು. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೊಠಡಿ ಮೇಲ್ವಿಚಾರಕರ ನೇಮಕ, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ, ಗಾಳಿ ಹಾಗೂ ಪ್ರಥಮ ಚಿಕಿತ್ಸಾ ವ್ಯವಸ್ಥೆಗಳು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಭಯ ಮುಕ್ತರಾಗಿ ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಕ್ರಮವಹಿಸಬೇಕು ಎಂದರು.

ಇದನ್ನೂ ಓದಿ: ವಿಜಯಪುರ | ಪವಿತ್ರ ರಂಜಾನ್‌: ಬೆಲೆ ಏರಿಕೆ ಬಿಸಿ ಮಧ್ಯೆಯೂ ಕಳೆಗಟ್ಟಿದ ಮಾರುಕಟ್ಟೆಗಳು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿ ಸಿ. ಬಿ. ಕುಂಬಾರ, ಎಸ್‌ಎಸ್‌ಎಲ್‌ಸಿ ಜಿಲ್ಲಾ ನೋಡಲ್ ಅಧಿಕಾರಿ ಟಿ. ಎಸ್. ಕೊಲ್ದಾರ, ವೆಬ್ ಕಾಸ್ಟಿಂಗ್ ಕೇಂದ್ರದ ಮುಖ್ಯಸ್ಥರಾದ ರೇಣುಕಾ ಕಲಬುರ್ಗಿ, ಜಿಲ್ಲೆಯ ಎಲ್ಲಾ ವಲಯಗಳ ಮುಖ್ಯಸ್ಥರು ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ವೀಕ್ಷಕರು, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...

ವಿಜಯಪುರ | KPSನಡಿ ಗ್ರಾಮೀಣ ಶಾಲೆಗಳನ್ನು ಮುಚ್ಚುವುದು ಖಂಡನೀಯ: ಹಿರಿಯ ಸಾಹಿತಿ ಹ.ಮ. ಪೂಜಾರ

ರಾಜ್ಯದಲ್ಲಿ 'ಗ್ರಾಮೀಣ ಭಾಗದ ಶಾಲೆಗಳನ್ನು ಮುಚ್ಚುವುದನ್ನು ನಾವು ಖಂಡಿಸುತ್ತೇವೆ. ಎಲ್ಲೆಲ್ಲಿ ಶಾಲೆಗಳನ್ನು...