ದಲಿತ ವಿದ್ಯಾರ್ಥಿ ಪರಿಷತ್ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಹಲವು ಹೋರಾಟದ ಮೂಲಕ ಸರ್ಕಾರಕ್ಕೆ ಮನವಿ ಮಾಡುತ್ತಾ ಬಂದಿದೆ. ರಾಜ್ಯದಲ್ಲಿ ನೇಮಕಾತಿ ಪ್ರಕ್ರಿಯೆಗಳು ವಿಳಂಬವಾಗುತ್ತಿರುವುದರಿಂದ ಲಕ್ಷಾಂತರ ಯುವಕರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ಅವರ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ ಎಂದು ದವಿಪ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ ಬೇಸರ ವ್ಯಕ್ತಪಡಿಸಿದರು.
ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ, ಯುವಕರಿಗೆ ಉದ್ಯೋಗ ಭದ್ರತೆ ಒದಗಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಅವರಯ, “ಇತ್ತೀಚಿನ ದಿನಗಳಲ್ಲಿ ಸರ್ಕಾರವು ಬಹುತೇಕ ಇಲಾಖೆಗಳಲ್ಲಿ ಖಾಯಂ ಹುದ್ದೆಗಳನ್ನು ಭರ್ತಿ ಮಾಡುವ ಬದಲಿಗೆ ‘ಒಳ ಗುತ್ತಿಗೆ’ ಅಥವಾ ‘ಹೊರಗುತ್ತಿಗೆ’ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಇದರಿಂದ ಯುವಕರಿಗೆ ಉದ್ಯೋಗ ಭದ್ರತೆ ಇಲ್ಲದಂತಾಗಿದೆ ಮತ್ತು ಇದು ಯುವಜನರ ಬದುಕಿನ ಜೊತೆ ಆಟವಾಡಿದಂತಾಗಿದೆ. ದಯವಿಟ್ಟು ಈ ಪದ್ಧತಿಯನ್ನು ಕೈಬಿಟ್ಟು, ಸಂವಿಧಾನಬದ್ಧವಾಗಿ ನೇರ ಮತ್ತು ಖಾಯಂ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು” ಎಂದು ಮನವಿ ಮಾಡಿದರು.
“ಕೋವಿಡ್ ಕಾರಣದಿಂದ ಮತ್ತು ಒಳಮೀಸಲಾತಿ ಜಾರಿಯಿಂದಾಗಿ ಪರೀಕ್ಷೆಗಳು ಸರಿಯಾದ ಸಮಯಕ್ಕೆ ನಡೆಯದ ಕಾರಣ ಲಕ್ಷಾಂತರ ಅಭ್ಯರ್ಥಿಗಳು ವಯೋಮಿತಿ ಮೀರಿದ್ದಾರೆ. ಇವರಿಗೆ ನ್ಯಾಯ ಒದಗಿಸಲು ಕನಿಷ್ಠ 5 ವರ್ಷಗಳ ವಯೋಮಿತಿ ಸಡಿಲಿಕೆ ಅತೀ ಅಗತ್ಯವಾಗಿದೆ. ಈ ಬಗ್ಗೆ ನಿಮ್ಮ ಸರ್ಕಾರ ವಯೋಮಿತಿ ಸಡಿಲಗೊಳಿಸಿರುವುದು ಸಕಾರಾತ್ಮಕ ಸ್ಪಂದನೆ. ಆದ್ರೆ ಬಹು ದಿನಗಳ ದಲಿತ ಸಮುದಾಯದ ಒಳಮೀಸಲಾತಿ ಜಾರಿಗೆ ಸರ್ಕಾರದ ವಿಳಂಬ ನೀತಿ ಅನುಸರಿಸುತ್ತಿರುವದು ನಿರಾಶೆ ಮೂಡಿಸಿದೆ. ಕೊಡಲೇ ಪೂರ್ಣ ಪ್ರಮಾಣದಲ್ಲಿ ಒಳಮೀಸಲಾತಿ ಜಾರಿ ಮಾಡಿ ಅಂದರಂತೆ ನೇಮಕಾತಿ ಅಧಿಸೂಚನೆ ಹೊರಡಿಸಬೇಕು” ಎಂದು ಒತ್ತಾಯಿಸಿದರು.
ಇದನ್ನೂ ಓದಿ: ವಿಜಯಪುರ | ಫೆ.23ರಿಂದ ಉಚಿತ ಹೈಪೋಥೈರಾಯ್ಡಿಸಮ್ ತಪಾಸಣೆ!
ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್ ನ ಜಿಲ್ಲಾ ಸಹ ಸಂಚಾಲಕ ಮಹಾದೇವ ಚಲವಾದಿ, ದಾವೂದ್ ನಾಯ್ಕೋಡಿ, ಹುಚ್ಚಪ್ಪ ಭಾವಿಮನಿ, ಸಿದ್ದು ಸಿಂಗೆ, ಮಹೇಶ ಕೊಳ್ಳಿ, ವಿನೋದ್, ಸಂದೇಶ, ಮಂಜು ಬಿಸನಾಳ, ವಿರೇಶ, ದಾನೇಶ್, ಮಂಜುನಾಥ್, ಪ್ರಕಾಶ ಹಾಗೂ ಇನ್ನಿತರು ಉಪಸ್ಥಿತರಿದ್ದರು.





