ವಿಜಯಪುರ | ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅನನ್ಯ: ಎಸ್‌ಪಿ ಲಕ್ಷ್ಮಣ ನಿಂಬರಗಿ

Date:

ದೇಶ ಕಾಯುವ ಸೈನಿಕರು, ಅನ್ನ ನೀಡುವ ರೈತರು ದೇಶಕ್ಕೆ ಎಷ್ಟು ಮುಖ್ಯವೋ ಅದೇ ರೀತಿ ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅನನ್ಯವಾದುದು. ಜೈ ಜವಾನ್‌ ಜೈ ಕಿಸಾನ್‌ ಎನ್ನುವಂತೆ ʼಜೈ ಶಿಕ್ಷಕʼ ಎನ್ನೋಣ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.

ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಾಲಕರನ್ನು ಹೊರತುಪಡಿಸಿದರೆ ಮಕ್ಕಳು ಶಿಕ್ಷಕರ ಹತ್ತಿರವೇ ಹೆಚ್ಚು ಬೆಳೆಯುತ್ತವೆ. ಹೀಗಾಗಿ ಭಾವಿ ಶಿಕ್ಷಕರಾಗಿ ಹೊರಹೊಮ್ಮುವ ಬಿ.ಎಡ್. ವಿದ್ಯಾರ್ಥಿಗಳು ಮಗುವಿನ ಸರ್ವತೋಮುಖ ಬೆಳವಣಿಗೆಗಾಗಿ ನಿರಂತರ ಶ್ರಮಿಸಬೇಕು. ರಾಜ್ಯದಲ್ಲಿ ಶಿಕ್ಷಣವು ಅತ್ಯುನ್ನತ ಸ್ಥಾನದಲ್ಲಿರಲು ಬಿಎಲ್‌ಡಿಇ ಸಂಸ್ಥೆಯೂ ಮಹತ್ವದ ಕೊಡುಗೆ ನೀಡಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಎಲ್‌ಡಿಇ ಸಂಸ್ಥೆಯ ಆಡಳಿತಾಧಿಕಾರಿ ಐ ಎಸ್ ಕಾಳಪ್ಪನವರ ಮಾತನಾಡಿ, “ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರವಾಗಿದ್ದು, ಬಯಸಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಉತ್ತಮ ಶಿಸ್ತು, ಆರೋಗ್ಯ, ಪ್ರಯತ್ನ ಮತ್ತು ಕರ್ತವ್ಯಶೀಲ ಗುಣಗಳನ್ನು ಅಳವಡಿಸಿಕೊಂಡು ಆದರ್ಶ ಶಿಕ್ಷಕರಾಗಿ ಬೆಳೆಯಬೇಕು” ಎಂದರು.

ಆಡಳಿತಾಧಿಕಾರಿ ಪ್ರೊ. ವಿ ಎಸ್ ಬಗಲಿ ಮಾತನಾಡಿ, “ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯವು ಶಿಕ್ಷಕರನ್ನು ತಯಾರಿಸುವ ಒಂದು ಅತ್ಯುತ್ತಮ ಕಾರ್ಖಾನೆಯಾಗಿದ್ದು, ಇಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಉತ್ತಮ ಕೌಶಲ್ಯಭರಿತ ಶಿಕ್ಷಕರಾಗಿ ಹೊರಹೊಮ್ಮಬೇಕು” ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯೆ ಡಾ. ಭಾರತಿ ವೈ ಖಾಸನೀಸ ಅವರು ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಪ್ರವೀಣ ಹೊಸಮನಿ, ಐಶ್ವರ್ಯ ಜೋಶಿ ಮತ್ತು ಸಂಗಡಿಗರು ಸಂಸ್ಥಾಪನಾ ಗೀತೆ ಹಾಡಿದರು.

ಇದನ್ನೂ ಓದಿ: ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ಈ ಸಂದರ್ಭದಲ್ಲಿ ಡಾ. ಎಂ ಎಸ್ ಹಿರೇಮಠ, ಡಾ. ಜ್ಯೋತಿ ಪಟ್ಟಣಶೆಟ್ಟಿ, ಡಾ. ಬಿ ಎಸ್ ಹಿರೇಮಠ, ಎಸ್ ಎಸ್ ಪಾಟೀಲ, ಡಾ. ಎಸ್ ಪಿ ಶೇಗುಣಸಿ, ಎಂ ಪಿ ಕುಪ್ಪಿ, ಸುರೇಶ ಬಗಲಿ, ಸುಜಾತಾ ದೇಸಾಯಿ, ಎ ಎಸ್ ಬರಡ್ಡಿ, ವಿದ್ಯಾ ಭಮಗೊಂಡ, ಸಹಾಯಕ ಪ್ರಾಧ್ಯಾಪಕ ಪಿ.ಡಿ.ಮುಲ್ತಾನಿ, ಎಸ್. ಎಸ್. ಪಾಟೀಲ, ಮಹಾವಿದ್ಯಾಲಯದ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಮತ್ತು ಸಹಪ್ರಾಧ್ಯಾಪಕ ಡಾ. ಎಂ. ಬಿ. ಕೋರಿ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...

ವಿಜಯಪುರ | KPSನಡಿ ಗ್ರಾಮೀಣ ಶಾಲೆಗಳನ್ನು ಮುಚ್ಚುವುದು ಖಂಡನೀಯ: ಹಿರಿಯ ಸಾಹಿತಿ ಹ.ಮ. ಪೂಜಾರ

ರಾಜ್ಯದಲ್ಲಿ 'ಗ್ರಾಮೀಣ ಭಾಗದ ಶಾಲೆಗಳನ್ನು ಮುಚ್ಚುವುದನ್ನು ನಾವು ಖಂಡಿಸುತ್ತೇವೆ. ಎಲ್ಲೆಲ್ಲಿ ಶಾಲೆಗಳನ್ನು...