ವಿಜಯಪುರ | ಮಹಿಳೆಯರ ಅವಕಾಶ ವಂಚನೆ ಇಂದಿಗೂ ಮುಂದುವರೆದಿದೆ: ಪ್ರೊ. ಬಿ ಕೆ ರವಿ

Date:

ಮಹಿಳೆಯರು ಇಂದಿಗೂ ಎಲ್ಲಾ ಕ್ಷೇತ್ರದಲ್ಲಿಯೂ ಅವಕಾಶ ವಂಚಿತರಾಗಿದ್ದಾರೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿಕೆ ರವಿ ಹೇಳಿದರು.

ವಿಜಯಪುರ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

“ಮಾಧ್ಯಮ ವಿಭಾಗಗಳ ಹೋಲಿಕೆ ಮಾಡಿದಾಗ ವಿಜಯಪುರ ಮಹಿಳಾ ವಿಶ್ವವಿದ್ಯಾಲಯದ ಮಾಧ್ಯಮ ವಿಭಾಗ ಉನ್ನತ ಸ್ಥಾನದಲ್ಲಿದೆ. ಗ್ರಾಮೀಣ ಮತ್ತು ಕನ್ನಡ ಮಧ್ಯಮದ ಮಹಿಳೆಯರಿಗೆ ಬೆಳೆಯಲು ಹೆಚ್ಚಿನ ಅವಕಾಶಗಳು ದೊರೆಯಬೇಕು. ದೇಶವ್ಯಾಪಿಯಾಗಿ ಬೆಳೆಯುತ್ತಿರುವ ಪತ್ರಿಕೋದ್ಯಮ ಕ್ಷೇತ್ರ ಅಂತರರಾಷ್ಟ್ರೀಯ ಮಟ್ಟದಲ್ಲೂ ಪ್ರಭಾವ ಬೀಳಲಿ ಎನ್ನುವುದು ಎಲ್ಲರ ಆಶಯ. ಮನೆಯ ಜವಾಬ್ದಾರಿಗಳ ನಡುವೆ ಶಿಕ್ಷಣ ಮುಂದುವರಿಸುವುದು ಗ್ರಾಮೀಣ ಮಹಿಳೆಯರಿಗೆ ಸವಾಲಾಗಿದ್ದು, ಅವರಿಗೆ ಹೆಚ್ಚಿನ ಸೌಲಭ್ಯ ಮತ್ತು ಬೆಂಬಲ ಅಗತ್ಯವಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳೆಯರ ಪ್ರಶ್ನೆಗಳು, ಅವರ ಹೋರಾಟಗಳು ಮತ್ತು ಸಮಾಜದ ಬದಲಾವಣೆಯ ಅಗತ್ಯವನ್ನು ಸ್ಪಚ್ಟವಾಗಿ ಹೇಳಿರುವ ಅನುಪಮಾ ನಿರಂಜನ ಅವರ ಲೇಖನಗಳು ಮಹಿಳಾ ಜಾಗೃತಿಗೆ ಮಹತ್ವದ ಪ್ರೇರಣೆಯಾಗಿವೆ. ಮಹಿಳೆಯರು ವರದಿಗಾರಿಕೆಗೆ ಮಾತ್ರ ಸೀಮಿತವಾಗದೆ ಸಾಹಿತ್ಯ–ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ತಮ್ಮ ಸ್ಥಾನವನ್ನು ಬಲಪಡಿಸಬೇಕು ಅಷ್ಟೇ ಅಲ್ಲದೇ ಅವಕಾಶವಂಚಿತ ಮಹಿಳೆಯರ ಸ್ಥಿತಿ ಇನ್ನೂ ಮುಂದುವರಿದಿರುವುದು ವಿಷಾದನೀಯವಾಗಿದ್ದು, ಮಹಿಳಾ ಸಬಲೀಕರಣಕ್ಕೆ ಪತ್ರಿಕೋದ್ಯಮ ವಿಭಾಗಗಳು ಬಲವಾದ ವೇದಿಕೆಯಾಗಬೇಕು. ಮಾಧ್ಯಮದಲ್ಲಿ ಪರಿಣತಿ ಹೊಂದಿದವರು ಉತ್ತಮ ಪತ್ರಿಕೋದ್ಯಮ ಶಿಕ್ಷಕರಾಗಬಹುದು ಎಂದರು. ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ನೀಡುತ್ತಿರುವ ಗುಣಮಟ್ಟದ ಶಿಕ್ಷಣ, ಸಮೃದ್ಧ ಮತ್ತು ಸುಸಜ್ಜಿತ ಸ್ಟುಡಿಯೋ ವಾತಾವರಣ ಮತ್ತು ವಿದ್ಯಾರ್ಥಿ–ಕೇಂದ್ರೀಕೃತ ಕೆಲಸಗಳು ಪ್ರಶಂಸನೀಯವೆAದರು. ಗುರಿ ಸ್ಪಷ್ಟವಾಗಿದ್ದರೆ ಸಾಧನೆ ಸುಲಭವಾಗುತ್ತದೆ” ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.

ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಾತನಾಡಿ, “ಬಿಕೆ ರವಿ ಸರ್ ಅವರ ಕಾರ್ಯಕ್ಷೇತ್ರದ ನಿಷ್ಠೆ ಮತ್ತು ಸಮಾಜಮುಖಿ ಸಂಶೋಧನೆಗಳು ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರೇರಣೆಯಾಗಿವೆ. ಮಾಧ್ಯಮ ನೈತಿಕತೆ, ಜವಾಬ್ದಾರಿ ಮತ್ತು ವೃತ್ತಿಪರ ಮೌಲ್ಯಗಳನ್ನು ಅವರು ಸ್ಪಷ್ಟವಾಗಿ ಹೆಸರು ಪಡಿಸಿದ್ದಾರೆ. ಅಷ್ಟೇ ಅಲ್ಲದೇ ಅವರ ಮಾರ್ಗದರ್ಶನದಲ್ಲಿ ಅನೇಕ ವಿದ್ಯಾರ್ಥಿಗಳು ಗುಣಮಟ್ಟದ ಪತ್ರಿಕೋದ್ಯಮದತ್ತ ಪ್ರೇರಿತರಾಗಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದೆ” ಎಂದರು.

ಇದನ್ನೂ ಓದಿ: ವಿಜಯಪುರ | ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಗೌಡಪ್ಪ ಬಡಿಗೇರ ಮನವಿ

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೊಲಾರ, ಡಾ. ಸಂದೀಪ್, ಸಂಶೋದನಾ ವಿದ್ಯಾರ್ಥಿನಿಯರಾದ ಪವಿತ್ರಾ ಕಂಬಾರ, ಜಯಶ್ರೀ ತಳವಾರ ಮತ್ತು ವಿವಿಧ ವಿಭಾಗಗಳ ವಿದ್ಯಾರ್ಥಿನಿಯರು, ಪ್ರಾಧ್ಯಾಪಕರು ಹಾಗೂ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಮುಖ್ಯ: ಡಾ. ಅರುಣ ಇನಾಮದಾರ

ಸಂಶೋಧನಾ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ...

ವಿಜಯಪುರ | ರಾಜಿ-ಸಂಧಾನದಿಂದ ಹಣ-ಸಮಯ ಉಳಿತಾಯ: ನ್ಯಾ. ಹರೀಶ ಎ

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ...