ವಿಜಯಪುರ | ಕನಕದಾಸನಾದ ತಿಮ್ಮಪ್ಪ ನಾಯಕ: ಮುಖ್ಯ ಶಿಕ್ಷಕ ಖಾಜಿ

Date:

ಕನಕದಾಸರು ನಾಡು ಕಂಡ ಸಂತ ಶ್ರೇಷ್ಠರಲ್ಲೊಬ್ಬರಾಗಿದ್ದು, ಅವರ ಆದರ್ಶಗಳು ಎಲ್ಲರಿಗೂ ಅನುಕರಣೀಯ ಎಂದು ನಾಲತವಾಡ ಸರ್ಕಾರಿ ಉರ್ದು ಶಾಲೆಯ ಮುಖ್ಯ ಶಿಕ್ಷಕ ಎ ಎಚ್ ಖಾಜಿ ಹೇಳಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಉರ್ದು ಶಾಲೆಯಲ್ಲಿ ಜರಗಿದ ಕನಕದಾಸರ ಜಯಂತಿ ಅಂಗವಾಗಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

“ದೇವಸ್ಥಾನ ನಿರ್ಮಾಣಕ್ಕಾಗಿ ಭೂಮಿಯನ್ನು ಅಗೆಯುತ್ತಿರುವ ಸಂದರ್ಭದಲ್ಲಿ ಏಳು ಕೊಪ್ಪರಿಗೆಯಷ್ಟು ಬಂಗಾರ ದೊರಕಿತು. ತಿಮ್ಮಪ್ಪ ನಾಯಕ ಕಾಗಿನೆಲೆಯಲ್ಲಿ ಆದಿಕೇಶವ ದೇವಸ್ಥಾನ ನಿರ್ಮಾಣ ಮಾಡಿ, ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು, ಉಳಿದುದ್ದನ್ನು ಬಡಬಗ್ಗರಿಗೆ ಹಂಚಿದ. ಈ ಉದಾರ ಗುಣದಿಂದ ಜನರು ತಿಮ್ಮಪ್ಪ ನಾಯಕನನ್ನು ʼಕನಕʼ ಎಂದು ಕರೆದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಂಡತಿ ಸುಜ್ಞಾನ ವಧೂಟಿ ಹಾಗೂ ತಾಯಿಯ ಮರಣದಿಂದ ದುಃಖದ ಕೂಪಕ್ಕೆ ತಳ್ಳಲ್ಪಟ್ಟ ಕನಕನಿಗೆ ಭಗವಂತ ಕನಸಿನಲ್ಲಿ ಬಂದು ದಾಸನಾಗುವಂತೆ ಸೂಚಿಸಿದ್ದರೂ ಸ್ವೀಕರಿಸಲಿಲ್ಲ. ಶಿಗ್ಗಾಂವಿಯ ಮೇಲೆ ಪರಕೀಯರ ದಾಳಿ ನಡೆದಾಗ ಆತನಿಗೆ ಯುದ್ಧ ಮಾಡುವ ಸನ್ನಿವೇಶ ಎದುರಾಗಿ, ಅಪಾರವಾದ ಗಾಯಕ್ಕೆ ತುತ್ತಾದನು. ಈ ವೇಳೆ ಭಗವಂತನ ದರ್ಶನವಾಗಿ ವೈರಾಗ್ಯ ತಾಳಿದ ಕನಕ ಮೈ ಮೇಲೆ ಒಂದು ಪಂಚೆಯನ್ನುಟ್ಟು, ಹೆಗಲಿಗೆ ಕಂಬಳಿ ಹಾಕಿ, ಕೈಯಲ್ಲಿ ಏಕತಾರಿ ಹಿಡಿದು ಆದಿಕೇಶವನನ್ನು ನೆನೆಯುತ್ತಾ, ಈಶ ನಿನ್ನ ಭಜನೆಯನ್ನು ಆಶೆಯಿಂದ ಮಾಡುವೆನು ಎನ್ನುತ್ತಾ ಕನಕದಾಸನಾದ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕನಕ ಜಯಂತಿ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ

ಈ ವೇಳೆ ಶಿಕ್ಷಕಿಯರುಗಳಾದ ಎಂ ಎಂ ಇಸ್ಲಾಂಪೂರ, ಜೆ ಕೆ ಯರಂತೇಲಿಮಠ, ಶಮಶಾದಬೇಗಂ ಸಿಕ್ಕಲಗಾರ, ಎಂ ಎ ಮುಲ್ಲಾ, ಜಡ್ ಎಸ್ ಮುಲ್ಲಾ, ಜೆ ಎಂ ಮೂಲಿಮನಿ ಸೇರಿದಂತೆ ಮಕ್ಕಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...