ವಿಜಯಪುರ | ಬಿಡುಗಡೆಯಾಗದ ಅನುದಾನ; ತಾತ್ಕಾಲಿಕ ಶೆಡ್‌ನಲ್ಲಿ ಕುಟುಂಬ

Date:

ಫಲಾನುಭವಿಗಳ ಪಟ್ಟಿಯಲ್ಲಿ ಆಯ್ಕೆಯಾಗದ ಕಾರಣ ವಿಜಯಪುರ ಜಿಲ್ಲೆಯ ಹೊಲೇರಹಳ್ಳಿ ಗ್ರಾಮದ ಕುಟುಂಬವೊಂದು, ಒಂದು ವರ್ಷದಿಂದ ತಾತ್ಕಾಲಿಕ ಶೆಡ್‌ನಲ್ಲಿ ವಾಸ ಮಾಡುತ್ತಿದ್ದು, ಸೂರಿಗಾಗಿ ಪಂಚಾಯಿತಿಗೆ ಆಗ್ರಹಿಸುತ್ತಿದೆ.

ಪರಿಶಿಷ್ಟ ಪಂಗಡಕ್ಕೆ ಸೇರಿದ ಹೊಲೇರಹಳ್ಳಿ ಗ್ರಾಮದ ಪದ್ಮಮ್ಮ ಅವರು, ಪಿಎಂಎಜಿವೈ ಯೋಜನೆ ಫಲಾನುಭವಿಯಾಗಿ ಆಯ್ಕೆಯಾಗಿದ್ದರು. ಆಯ್ಕೆ ಪಟ್ಟಿಯನ್ನು ಪಂಚಾಯಿತಿಯಲ್ಲಿ ಅನುಮೋದನೆ ಮಾಡಿ, ತಾಲೂಕು ಪಂಚಾಯಿತಿಗೂ ಕಳುಹಿಸಿ ವರ್ಷ ಕಳೆದಿದೆ. ಆದರೆ, ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ.

ಒಂದು ವರ್ಷದಿಂದ ತಾತ್ಕಾಲಿಕ ಶೆಡ್‌ನಲ್ಲಿ ನಾಲ್ಕು ಮಂದಿ ವಾಸಿಸುತ್ತಿದ್ದೇವೆ. ಮಳೆ, ಗಾಳಿ ಬಂದರೆ ಇಲ್ಲಿ ಇರುವುದು ಕಷ್ಟವಾಗಿದೆ. ಮಳೆ ನೀರು ಶೆಡ್‌ಗೆ ನುಗ್ಗುತ್ತದೆ. ಈಗ ಚಳಿಗಾಲ, ಶೀಟ್‌ಗಳಲ್ಲೇ ಗೋಡೆ ನಿರ್ಮಾಣ ಮಾಡಿಕೊಂಡು ಮೇಲೆಯೂ ಶೀಟ್‌ ಹೊದಿಕೆ ಹಾಕಲಾಗಿದೆ. ಸಾಲ ಮಾಡಿ ಪಾಯ ಹಾಕಿದ್ದೇವೆ. ಪಂಚಾಯಿತಿ ಕಡೆಯಿಂದ ಯಾವುದೇ ಭರವಸೆ ಸಿಗುತ್ತಿಲ್ಲ ಎನ್ನುತ್ತಾರೆ ಗೃಹಿಣಿ ಪದ್ಮಮ್ಮ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿಎಂಎಜಿವೈ ಯೋಜನೆಯಡಿ ತಾಲೂಕಿನಲ್ಲಿ 280 ಮನೆಗಳು ಆಯ್ಕೆಯಾಗಿವೆ. ಎಲ್ಲ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. 47 ಮನೆಗಳು ಪಾಯ ಹಂತದಲ್ಲಿವೆ. 25 ಮನೆಗಳು ಗೋಡೆ ಹಂತದಲ್ಲಿವೆ. 33 ಮನೆಗಳು ಮೋಲ್ಡ್ ಆಗಿವೆ. ಪದ್ಮಮ್ಮ ಎಂಬ ಫಲಾನುಭವಿ ಯೋಜನೆಗೆ ಆಯ್ಕೆಯಾಗಿಲ್ಲ. ನೆಲದ ಮಟ್ಟದಲ್ಲಿ ಜಿಪಿಎಸ್ ಮಾಡಬೇಕಾಗಿತ್ತು. ಪಂಚಾಯಿತಿಯವರು ಮಾಡಿಲ್ಲದ ಕಾರಣ ಆಯ್ಕೆಯಾಗಿಲ್ಲ. ಈ ವರ್ಷದಲ್ಲಿ ನೀಡುವ ಗುರಿಯಲ್ಲಿ ಸೇರಿಸಿ, ಜಿಪಿಎಸ್ ಮಾಡಿದರೆ ಆಯ್ಕೆಯಾಗುತ್ತಾರೆ ಎನ್ನುತ್ತಾರೆ ತಾಲೂಕು ಹೌಸಿಂಗ್ ನೋಡಲ್ ಅಧಿಕಾರಿ ಚಂದ್ರಪ್ಪ.

ಪಿಎಂಎಜಿವೈ ಯೋಜನೆಯಡಿ ಪದ್ಮಮ್ಮ ಅವರನ್ನು ಆಯ್ಕೆ ಮಾಡಿ, ಫಲಾನುಭವಿಗಳ ಪಟ್ಟಿ ಅನುಮೋದನೆಗೆ ಆಗಸ್ಟ್ ತಿಂಗಳಿನಲ್ಲಿ ತಾಲ್ಲೂಕು ಪಂಚಾಯಿತಿಗೆ ಕಳುಹಿಸಲಾಗಿದೆ. ಇದುವರೆಗೂ ಅನುಮೋದನೆ ಆಗಿಲ್ಲ. ಅನುಮೋದನೆಯಾಗಿ ಬಂದ ನಂತರ ಜಿ.ಪಿ.ಎಸ್ ಮಾಡಲಾಗುವುದು ಎಂದು ಬಿಜ್ಜವರ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್ ಕುಮಾರ್ ಹೇಳಿದ್ದಾರೆ.

ಒಟ್ಟಿನಲ್ಲಿ ಸೂರಿನ ನಿರೀಕ್ಷೆಯಲ್ಲಿದ್ದ ಕುಟುಂಬವೊಂದು ಈ ಚಳಿಗಾಲವನ್ನು ಈ ಶೆಡ್‌ನಲ್ಲೆ ಕಳೆಯುವ ಸ್ಥಿತಿ ನಿರ್ಮಾಣವಾಗಿದ್ದು, ಆದಷ್ಟುಬೇಗ ಸಂಬಂಧಪಟ್ಟವರು ಸಮಸ್ಯೆ ಪರಿಹರಿಸಿ ನಮಗೊಂದು ಸೂರು ನೀಡಲಿ ಎಂದು ಆಗ್ರಹಿಸುತ್ತಿದೆ ಪದ್ಮಮ್ಮ ಕುಟುಂಬ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...