ಐಸಿಸ್‌ ನಂಟಿನ ಕತೆ | ಯತ್ನಾಳ್‌ – ತನ್ವೀರ್ ಹಾಶ್ಮಿ ಒಂದೇ ಉದ್ಯಮದ ಪಾಲುದಾರರು

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಬಗ್ಗೆ ಸಹಾನುಭೂತಿ ಹೊಂದಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಬಡಬಡಾಯಿಸಿದ್ದರು. ತನಿಖೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಎನ್ಐಎಗೆ ಪತ್ರ ಬರೆದಿದ್ದರು. ಯತ್ನಾಳ್ ಯಾರ ವಿರುದ್ಧ ಐಸಿಸ್‌ ನಂಟಿನ ಆರೋಪ ಮಾಡಿದ್ದರೋ, ಅವರ ಜೊತೆಯೇ ಸ್ವತಃ ಯತ್ನಾಳ್‌ ಅವರೇ ಉದ್ಯಮ ಒಂದರಲ್ಲಿ ಪಾಲುದಾರರಾಗಿದ್ದಾರೆ ಎಂದು ಇದೀಗ ಬಹಿರಂಗವಾಗಿದೆ.

ವಿಜಯಪುರದ ಮೌಲ್ವಿ, ಜಮಾಅತ್‌ ಎ ಅಹ್ಲೇ ಸುನ್ನತ್‌ ರಾಜ್ಯಾಧ್ಯಕ್ಷ ಸೈಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ ಅವರು ಐಸಿಸ್ ಜೊತೆ ನಂಟು ಹೊಂದಿದ್ದಾರೆಂದು ಯತ್ನಾಳ್ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದರು. ಅವರ ಆರೋಪ ಸುಳ್ಳೆಂಬುದು ಈಗಾಗಲೇ ಬಹಿರಂಗವಾಗಿದೆ. ಇದೀಗ, ಅದೇ ತನ್ವೀರ್ ಹಾಶ್ಮಿ ಅವರೊಂದಿಗೆ ಯತ್ನಾಳ್ ಉದ್ಯಮದ ಪಾಲುದಾರರು ಎಂಬುದು ಕೂಡ ಕಂಡುಬಂದಿದೆ.

ವಿಜಯಪುರದ ಗಾಂಧಿ ವೃತ್ತದಲ್ಲಿರುವ ‘ಟೂರಿಸ್ಟ್‌ ಹೋಟೆಲ್‌’ನಲ್ಲಿ ತನ್ವೀರ್ ಹಾಶ್ಮಿ ಮತ್ತು ಯತ್ನಾಳ್ ಪಾಲುದಾರರಾಗಿದ್ದಾರೆ. ಅಲ್ಲದೆ, ಅವರಿಬ್ಬರೂ ಮಹಲ್‌ ಐನಾಪುರ ಗ್ರಾಮದಲ್ಲಿ ನೆರೆಹೊರೆಯ ಮನೆಯಲ್ಲಿಯೇ ವಾಸಿಸುತ್ತಿದ್ದಾರೆ. ವಾಣಿಜ್ಯ ಮಳಿಗೆಗಳನ್ನು ಕೂಡ ಅಕ್ಕ-ಪಕ್ಕದಲ್ಲಿಯೇ ಹೊಂದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಸ್‌.ಎಂ ಪಾಟೀಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟೂರಿಸ್ಟ್‌ ಹೋಟೆಲ್‌ನಲ್ಲಿ ಯತ್ನಾಳ್ ಮತ್ತು ತನ್ವೀರ್‌ ಹಾಶ್ಮಿ ಕುಟುಂಬವು ಪಾಲುದಾರರಾಗಿದ್ದಾರೆ. ಹಾಶ್ಮಿ ಅವರು ಐಸಿಸ್‌ ಜೊತೆ ನಂಟು ಹೊಂದಿದ್ದಾರೆ ಎಂಬುದು ಗೊತ್ತಿದ್ದಿದ್ದರೆ, ಇಷ್ಟು ವರ್ಷ ಏಕೆ ಸುಮ್ಮನಿದ್ದರು? ಒಂದೇ ಉದ್ಯಮದ ಪಾಲುದಾರರಾಗಿ ಅವರಿಗೆ ಆರೋಪ ಮಾಡುವ ನೈತಿಕತೆ ಇದೆಯೇ” ಎಂದು ಪ್ರಶ್ನಿಸಿದ್ದಾರೆ.

“ಯತ್ನಾಳ್ ತಮ್ಮ ಆರೋಪಗಳನ್ನು ಸಾಬೀತು ಮಾಡಬೇಕು. ಇಲ್ಲವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಯತ್ನಾಳ್ ಮತ್ತು ತನ್ವೀರ್ ಹಾಶ್ಮಿ ಅವರು ಹೆಚ್ಚು ಒಡನಾಟ ಹೊಂದಿದ್ದರು. ಈ ಇಬ್ಬರೂ ನಮ್ಮ ಮನೆಯಲ್ಲಿ ಭೇಟಿ ಮಾಡಿ, ಒಟ್ಟಿಗೆ ಊಟ ಮಾಡಿದ್ದರು. ಅಲ್ಲದೆ, ಹಲವು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ವೇದಿಕೆಯನ್ನೂ ಹಂಚಿಕೊಂಡಿದ್ದಾರೆ” ಎಂದು ಕರವೇ ಮುಖಂಡ ಎಂ.ಸಿ. ಮುಲ್ಲಾ ತಿಳಿಸಿದ್ದಾರೆ.

“ಕಳೆದ ಚುನಾವಣೆಯಲ್ಲಿ ಹಾಶ್ಮಿ ಅವರು ಕಾಂಗ್ರೆಸ್‌ ಪರವಾಗಿ ಕೆಲಸ ಮಾಡಿದ್ದಾರೆ. ಆ ಕಾರಣಕ್ಕಾಗಿ ಯತ್ನಾಳ್ ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ. ದ್ವೇಷದಿಂದ ಇಂತಹ ಆರೋಪ ಮಾಡುವುದು ಖಂಡನೀಯ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...