ವಿಜಯಪುರ | ‘ಜ್ಞಾನವಾಪಿ – ನಾವೆಂದೂ ಬಿಟ್ಟು ಕೊಡುವುದಿಲ್ಲ’ ಎಂದು ಎಸ್‌ಡಿಪಿಐ ಪ್ರತಿಭಟನೆ

Date:

ಪೂಜಾ ಸ್ಥಳಗಳ ಕಾಯ್ದೆ 1991 ಜಾರಿಯಲ್ಲಿದ್ದೂ ಜ್ಞಾನವಾಪಿ ಮಸೀದಿಯನ್ನು ಮುಸ್ಲಿಮರಿಂದ ಕಸಿಯುವ ಷಡ್ಯಂತ್ರ ನಡೆಯುತ್ತಿದೆ. ಜ್ಞಾನವಾಪಿಯನ್ನು ನಾವೆಂದೂ ಬಿಟ್ಟು ಕೊಡುವುದಿಲ್ಲ ಎಂದು ಎಸ್‌ಡಿಪಿಐ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದೆ.

ನಗರದ ಡಾ. ಅಂಬೇಡ್ಕರ್ ವೃತ್ತದ ಬಳಿ ಎಸ್‌ಡಿಪಿಐ ಪಕ್ಷದ ನಾಯಕರು ನಡೆಸಿದ ಪ್ರತಿಭಟನೆಯಲ್ಲಿ, ಜಿಲ್ಲಾ ಸಮಿತಿ ಮುಖಂಡರು ಹಾಗೂ ನಗರ ಸಮಿತಿಯ  ಸದಸ್ಯರು ಹಾಗೂ ಸಾರ್ವಜನಿಕರು ಇತರರು ಉಪಸ್ಥಿತರಿದ್ದರು. ಈ ವೇಳೆ ಜಿಲ್ಲಾಧ್ಯಕ್ಷ ಅಥಾವುಲ್ಲಾ ದ್ರಾಕ್ಷೀ ಮಾತನಾಡಿದರು.

ಯಾವುದೇ ದೇಶದಲ್ಲಿ ಜನರಿಗೆ ತಮ್ಮ ಹಕ್ಕುಗಳ ಮೇಲೆ ಪ್ರಭಲವಾದ ನಂಬಿಕೆ ಹುಟ್ಟುವುದು ಆ ಹಕ್ಕುಗಳನ್ನು ಆ ದೇಶದ ಸಂವಿಧಾನದಲ್ಲಿ ಅಳವಡಿಸಿಕೊಂಡಾಗ. ಸಂವಿಧಾನದ ಮೂಲಕ ಬರುವ ಹಕ್ಕುಗಳನ್ನು ಯಾರು ಕಸಿಯಲಾರರು ಎಂಬ ನಂಬಿಕೆ ಅಚಲವಾಗಿರುತ್ತದೆ. ಆ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸತ್ತು ಕೈಗೊಳ್ಳುವ ಕಾಯ್ದೆ, ಕಾನೂನುಗಳು ಸಂವಿಧಾನದ ಪರಿಧಿಯಲ್ಲಿರುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂತಹದ್ದೇ ಒಂದು ಕಾಯ್ದೆ 1991ರ ಪೂಜಾ ಸ್ಥಳಗಳ ಕಾಯ್ದೆ. ಹಾಗಿದ್ದೂ ಜ್ಞಾನವಾಪಿ ಮಸೀದಿಯನ್ನು ಷಡ್ಯಂತ್ರದ ಮೂಲಕ ಮುಸ್ಲಿಮರಿಂದ ಕಸಿಯುವ ಪ್ರಯತ್ನ ನಡೆಯುತ್ತಿದೆ. ಜ್ಞಾನವಾಪಿಯನ್ನು ನಾವೆಂದೂ ಮುಸ್ಲಿಂರಿಂದ ಕಸಿಯಲು ಬಿಟ್ಟು ಕೊಡುವುದಿಲ್ಲ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಜೆಪಿ ಮತ್ತು ಸಂಘಪರಿವಾರ ಅಲ್ಪಸಂಖ್ಯಾತರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಮಾರ್ಪಡಿಸಬೇಕು ಎಂದು ಷಡ್ಯಂತ್ರ ರೂಪಿಸುತ್ತಿದೆ. ಅದರ ಭಾಗವಾಗಿ ಮುಸ್ಲಿಮರ ಸಾಂಸ್ಕೃತಿಕ ಗುರುತುಗಳನ್ನು ಅಳಿಸಿ ಹಾಕುವ ಅಪಾಯಕಾರಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಹಂತ ಹಂತವಾಗಿ ಕಾರ್ಯರೂಪಕ್ಕೆ ತರುತ್ತಿದೆ. ಹೆಸರು ಬದಲಾವಣೆ ಎಂಬುದು ಅವರ ಒಂದು ಅಸ್ತ್ರವಾದರೆ, ಇನ್ನೊಂದು ಪ್ರಬಲ ಅಸ್ತ್ರ ಮುಸ್ಲಿಮರ ನಂಬಿಕೆಗಳ ಮೇಲೆ ಪ್ರಹಾರ ನಡೆಸುವುದು. ಮುಸ್ಲಿಮರ ಮಸೀದಿಗಳನ್ನು ಅವರಿಂದ ಕಿತ್ತುಕೊಳ್ಳುವ ಮೂಲಕ ಅವರ ನಂಬಿಕೆಗಳ ಮೇಲೆ ಪ್ರಹಾರ ನಡೆಸಬೇಕು ಎಂಬುದು ಫ್ಯಾಸಿಸ್ಟ್ ಬಿಜೆಪಿ ಮತ್ತು ಸಂಘ ಪರಿವಾರದ ತಂತ್ರ.

ಅದರ ಭಾಗವಾಗಿ ಈಗಾಗಲೇ ಬಾಬರಿ ಮಸೀದಿಯನ್ನು ದೇಶದ ಮುಸ್ಲಿಮರ ಪಾಲಿಗೆ ಇಲ್ಲವಾಗಿಸಿದ್ದಾರೆ. ಈಗ ಜ್ಞಾನವಾಪಿ ಮಸೀದಿಯನ್ನು ಕೂಡ ಅದೇ ಸಾಲಿಗೆ ಸೇರಿಸಲು ಹವಣಿಸುತ್ತಿದ್ದಾರೆ ಎಂದು ಎಸ್.ಡಿ.ಪಿ.ಐ ತನ್ನ ಆಕ್ರೋಶ ಹೊರ ಹಾಕಿದೆ.

ಯಾವೆಲ್ಲಾ ಷಡ್ಯಂತ್ರಗಳ ನಡುವೆಯೂ ಜ್ಞಾನವಾಪಿ ಮಸೀದಿಯನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ಈ ದೇಶದ ಸಂವಿಧಾನವನ್ನು ಒಪ್ಪುವ ಎಲ್ಲರ ಮೇಲಿದೆ.  ಮೋದಿ ಸರ್ಕಾರ ತನಗೆ ದೊರೆತಿರುವ ಜನಾದೇಶವನ್ನು ದುರ್ಬಳಕೆ ಮಾಡಿಕೊಂಡು ನಡೆಸುತ್ತಿರುವ ದಾಳಿಯನ್ನು ಎದುರಿಸುವ ಶಕ್ತಿ ಮುಸ್ಲಿಮರಲ್ಲಿದೆ ಎಂದು ಸಿ.ಎ.ಎ ಹೋರಾಟದಂತಹ ಸಂದರ್ಭದಲ್ಲಿ ಈ ನಾಡಿನ ಮುಸ್ಲಿಂ ಜನಾಂಗ  ತೋರಿಸಿಕೊಟ್ಟಿದೆ.

ಜ್ಞಾನವಾಪಿ ಮಸೀದಿ ವಿಚಾರದಲ್ಲಿಯೂ ಕೂಡ ಅದೇ ಮಟ್ಟದ ಹೋರಾಟಕ್ಕೆ ಮುಸ್ಲಿಂ ಸಮುದಾಯ ಮುಂದಾಗಲಿದ್ದು ಅದಕ್ಕೆ ಇತರೇ ಸಂವಿಧಾನ ಪ್ರಿಯ ಸಮುದಾಯಗಳ ಸಂಘಟನೆಗಳ ಜೊತೆಗೂಡಿ ಎಸ್.ಡಿ.ಪಿ.ಐ ಸಂಪೂರ್ಣ ಬೆಂಬಲ ನೀಡಲಿದ್ದು ಹೋರಾಟದಲ್ಲಿ ಜೊತೆಯಾಗಲಿದೆ.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಅದಕ್ಕೆ ನಮಗೆ ಎಲ್ಲಾ ಅವಕಾಶಗಳನ್ನು ನೀಡುತ್ತದೆ. ಸಂವಿಧಾನ ಪ್ರತಿಪಾದಿಸುವ ಸಮಾನತೆ ಸಹೋದರತ್ವ ಸಹಬಾಳ್ವಿಗೆ ಜ್ಞಾನವಾಪಿ ಮಸೀದಿಯು ಪ್ರತೀಕವಾಗಿದ್ದು ಹಾಗಾಗಿ ಮಸೀದಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಎಸ್.ಡಿ.ಪಿ.ಐ. ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...