ವಿಜಯಪುರ | ನಿಲ್ಲದ ಬಸ್‌ಗಳು; ರಸ್ತೆಯಲ್ಲೇ ಧರಣಿ ಕುಳಿತು ಪ್ರತಿಭಟಿಸಿದ ವಿದ್ಯಾರ್ಥಿಗಳು

Date:

ಸಕಾಲಕ್ಕೆ ಶಾಲೆಗೆ ತೆರಳಲು ಆಗಮಿಸುವ ಬಸ್‌ಗಳು ನಿಲುಗಡೆ ಕೊಡುತ್ತಿಲ್ಲ ಎಂದು ಆರೋಪಿಸಿ ವಿಜಯಪುರ ಜಿಲ್ಲೆಯ ನಾಲತವಾಡ ಸಮೀಪದ ವೀರೇಶ ನಗರದಲ್ಲಿ ವಿದ್ಯಾರ್ಥಿಗಳು ವಾಹನಗಳನ್ನು ತಡೆದು ಪ್ರತಿಭಟಿಸಿದ ಘಟನೆ ನಡೆದಿದೆ.

ಗಡಿಭಾಗದ ನಾಲತವಾಡ ಪಟ್ಟಣಕ್ಕೆ ನಿತ್ಯ ಆರೇಶಂಕರ, ನಾಗಬೇನಾಳ, ಸಿದ್ದಾಪೂರ ಡ್ಯಾಮ್, ವೀರೇಶ್ ನಗರ ಸೇರಿದಂತೆ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳುತ್ತಾರೆ. ಶಾಲೆಯ ಸಮಯಕ್ಕೆ ತಲುಪುವುದು ಕಷ್ಟವಾಗಿದೆ ಎಂದ ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಲಿಂಗಸುಗೂರು ಸೇರಿದಂತೆ ಇತರೆ ಘಟಕಗಳ ಬಸ್‌ಗಳೇ ನಮಗೆ ಆಸರೆಯಾಗಿವೆ. ಆದರೆ ಸ್ವಘಟಕ ಮುದ್ದೇಬಿಹಾಳ ಮೂಲಕ ಬಸ್‌ಗಳ ಸೌಕರ್ಯ ಕಲ್ಪಿಸುತ್ತಿಲ್ಲ. ಬರೀ ಪ್ರತಿಭಟನೆ ಮಾಡುವುದೇ ಆಗಿದೆ. ಗಡಿರಾಜ್ಯದ ಸಂಪರ್ಕ ಹೊಂದಿದ ನಮ್ಮ ಗ್ರಾಮಕ್ಕೆ ಬಸ್‌ಗಳು ಓಡುತ್ತಿಲ್ಲ ಎಂದು ವಿದ್ಯಾರ್ಥಿಗಳ ಪೋಷಕರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್ 2 1

“ಹಿಂದಿನಿಂದಲೂ ಸಾರಿಗೆ ಬಸ್‌ಗಳ ಸಮಸ್ಯೆ ತಪ್ಪಿಲ್ಲ. ಇತ್ತೀಚೆಗೆ ಜಾರಿಯಾದ ಶಕ್ತಿ ಯೋಜನೆಯಿಂದ ಬಸ್‌ಗಳು ಪ್ರಯಾಣಕರಿಂದ ತುಂಬಿಕೊಂಡೇ ಬರುತ್ತಿವೆ. ಹೀಗಾಗಿ ಚಾಲಕರು ಬಸ್‌ಗಳನ್ನು ನಿಲ್ಲಿಸದೇ ವೇಗವಾಗಿ ತೆರಳುತ್ತಾರೆ. ನಮ್ಮ ಗತಿ ಏನು? ನಾವು ಶಾಲೆಗೆ ತೆರಳಬೇಡವೇ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದರು.

ಪ್ರೌಢಶಾಲೆ ನಿರ್ಮಾಣಕ್ಕೆ ಆಗ್ರಹ

ನಾಲತವಾಡ ಪಟ್ಟಣದ ಪ್ರೌಢಶಾಲೆ ಹಾಗೂ ಕಾಲೇಜಿಗೆ ನಿತ್ಯ ಹೋಗುವ ತಾಪತ್ರೆಯ ತಪ್ಪಿಸುವ ನಿಟ್ಟಿನಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೇರೆ ಸ್ಥಳಕ್ಕೆ ಹೋಗಿ ಕಲಿಯಬೇಕಿದೆ. ವೀರೇಶ ನಗರದಲ್ಲಿ ಶೀಘ್ರವೇ 10ನೇ ತರಗತಿವರೆಗೆ ಪ್ರೌಢಶಾಲೆ ಆರಂಭಿಸಿ, ನಿತ್ಯ ಬಸ್‌ಗೆ ಕಾಯುವ ಸಂಕಷ್ಟ ತಪ್ಪಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳ ಧರಣಿಯ ವೇಳೆ ಶಿವಾನಂದ ಗೌಂಡಿ, ಸಂಗಯ್ಯ ಡಂಬಳ, ಸಂಗಪ್ಪ ಉಂಡಿ, ಬಸವರಾಜ ಕೋಟೆಗುಡ್ಡ, ಚನ್ನಪ್ಪ ಗುರಿಕಾರ. ಚೆನ್ನಪ್ಪ ಕೋಳೂರ, ಭೀಮಣ್ಣ ಗುರಿಕಾರ, ಬಸಪ್ಪ ಹಾವಲ್ದಾರ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...