ವಿಜಯಪುರ | ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುತ್ತಿರುವ ಕೋಮುವಾದಿ ಶಕ್ತಿಗಳನ್ನು ಮಟ್ಟ ಹಾಕಿ: ದಸಂಸ ಆಗ್ರಹ

Date:

ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುತ್ತಿರುವ ಕೋಮುವಾದಿ ಶಕ್ತಿಗಳ ವಿರುದ್ಧ ಜನಾಂದೋಲನ ಪ್ರತಿಭಟನೆಯನ್ನು ದಲಿತ ಸಂಘರ್ಷ ಸಮಿತಿ (ಸಂಯೋಜಕ) ವತಿಯಿಂದ ವಿಜಯಪುರದಲ್ಲಿ ನಡೆಸಲಾಯಿತು.

ಡಾ ಬಿ ಆರ್ ಅಂಬೇಡ್ಕರ್ ಅವರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪಾದಯಾತ್ರೆಯ ಮೂಲಕ ಜಿಲ್ಲಾಧಿಕಾರಿಗಳು ಕಚೇರಿಗೆ ತೆರಳಿ ನಂತರ ಅಪರ ಜಿಲ್ಲಾಧಿಕಾರಿಗಳು ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಮುಖಂಡ ಮಂಜುನಾಥ ಕಟ್ಟಿಮನಿ ಮಾತನಾಡಿ, ಭಾರತೀಯರಾದ ನಾವು ಸಂವಿಧಾನವನ್ನು ಅರ್ಪಿಸಿಕೊಂಡು ಎಪ್ಪತ್ತೈದು ವರ್ಷಗಳು ಸವಿಸಿದ್ದೇವೆ. ಸಂವಿಧಾನದ ಪ್ರಯುಕ್ತ ಸಾವಿರಾರು ವರ್ಷಗಳು ಅನುಭವಿಸಿದ ಪುರೋಹಿತಶಾಹಿ ಮತ್ತು ಮನು ಧರ್ಮಶಾಸ್ತ್ರಗಳ ಶೋಷಣೆಯಿಂದ ಮುಕ್ತಿ ಪಡೆಯುವಂತಾಯಿತು. ಇಂದು ಪ್ರಜಾಪ್ರಭುತ್ವದ ಆಶಯಗಳು ಜಾರಿಗೆ ಬಂದಿದ್ದರೂ, ಸ್ವಾತಂತ್ರ್ಯ, ಸಮಾನತೆ, ಭ್ರಾತತ್ವದ ಅರಿವೇ ಇಲ್ಲದೆ ದೇಶದ ಕೋಟ್ಯಂತರ ದಲಿತರು, ತಳಸಮುದಾಯಗಳು, ಆದಿವಾಸಿಗಳು, ಅಲೆಮಾರಿಗಳು ಈ ಸಮಾಜದಲ್ಲಿ ಅಭಿವೃದ್ಧಿ ಕಾಣದೆ ಅತಂತ್ರ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಚುನಾಯಿತ ಪ್ರತಿನಿಧಿಗಳು ಮತ್ತು ಆಡಳಿತಾರೂಢ ಸರ್ಕಾರಗಳು ಈ ಸಮುದಾಯಗಳ ಸಾರ್ವಭೌಮತ್ವವನ್ನು ಕಾಪಾಡಬೇಕಾಗಿರುವುದು ಇವರುಗಳ ಆದ್ಯ ಕರ್ತವ್ಯವಾಗಬೇಕಿತ್ತು. ಆದರೆ, ಅದಾಗುತ್ತಿಲ್ಲ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜಾಪ್ರಭುತ್ವವೆಂದರೆ, ಚುನಾವಣೆಗಳಲ್ಲಿ ಸ್ಪರ್ಧಿಸುವುದು, ಶಾಸಕರು, ಸಂಸದರು, ಮಂತ್ರಿಗಳು, ಮುಖ್ಯಮಂತ್ರಿಗಳು ಮತ್ತು ಪ್ರಧಾನಮಂತ್ರಿಯಾಗುವ ಪ್ರಕ್ರಿಯೆ ಅಲ್ಲ ಸಮಾಜದ ನಾಗರಿಕರ ಸಮಗ್ರ ಅಭಿವೃದ್ಧಿ, ಅದರ ಜೀವನಕ್ರಮ ಮತ್ತು ಹಿತಾಸಕ್ತಿಗಳನ್ನು ಕಾಪಾಡುವುದು. ಸಾಮಾಜಿಕ ನ್ಯಾಯ ಮಾನವ ಹಕ್ಕುಗಳು ದೊರೆಯದೆ ಇರುವ ಅವಮಾನಿತ, ಶೋಷಿತ ಸಮುದಾಯಗಳ ಬಗ್ಗೆ ಸಂಸತ್ತು, ಶಾಸನ ಸಭೆಗಳಲ್ಲಿ ಚರ್ಚಿಸಿ, ಅಗತ್ಯ ಯೋಜನೆಗಳನ್ನು ರೂಪಿಸಿ, ಕಾರ್ಯರೂಪಕ್ಕೆ ತರುವುದು. ಆದರೆ ಅಧಿಕಾರಕ್ಕೆ ಬರುವ ಸರ್ಕಾರಗಳು, ಸಾಮಾಜಿಕ ನಾಯ್ಕ, ಅಸ್ಲೃಶ್ಯತೆ, ಜಾತಿ ತಾರತಮ್ಮ, ಅಸಮಾನತೆಗಳನ್ನು ಹೋಗಲಾಡಿಸಲು ಯಾವುದೇ ರೀತಿ ಕ್ರಮಗಳನ್ನು ಕೈಗೊಳ್ಳದೆ ಇರುವುದರಿಂದ ಜನರು ಮೂಲಭೂತ ಹಕ್ಕುಗಳಿಂದ ವಂಚಿತರಾಗಿ ಕನಿಷ್ಠ ಅವಕಾಶಗಳಿಲ್ಲದೆ ಜೀವನ ಸಾಗುಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಇದನ್ನು ಓದಿದ್ದೀರಾ? ವಿಜಯಪುರ | ಅಂಗಡಗೇರಿ ಗ್ರಾಮಕ್ಕೆ ನೀರಾವರಿ ಸೌಲಭ್ಯ ಒದಗಿಸಿ: ರೈತ ಸಂಘದ ಯುವ ಸಂಚಾಲಕ ಸಿದ್ದನಗೌಡ ರೆಡ್ಡಿ ಆಗ್ರಹ

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಂಚಾಲಕರಾದ ಬಾಲಾಜಿ ಕಾಂಬ್ಳೆ, ಯುವ ಹೋರಾಟಗಾರರಾದ ದಾವೂದ್ ಬಂಟನೂರ, ರಮೇಶ್ ಹೊಸಮನಿ, ರಾಜು ಮಶಿಬಿನಾಳ, ಪ್ರಭು ಮಡಿಕೇಶ್ವರ, ಮರೆಪ್ಪ ಛಲವಾದಿ, ಜುಮ್ಮಣ್ಣ ಕಟ್ಟಿಮನಿ, ರಮೇಶ್ ಬಂಗಾರಟ್ಟಿ ,ಲಕ್ಷ್ಮಣ್ ಕಟ್ಟಿಮನಿ ,ಮಲ್ಲು ಕೇಶಾಪೂರ, ಬಸವರಾಜ ಸಿದ್ದಾಪುರ ,ಅಶೋಕ್ ಉಪ್ಪೆರಿ ,ಲಕ್ಷ್ಮಣ್ ಛಲವಾದಿ ಸೇರಿದಂತೆ ಹಲವು ಮಂದಿ ಯುವಕರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...