ಉಡುಪಿ‌-ಕಾಸರಗೋಡು 400 KV ವಿದ್ಯುತ್ ಲೈನ್ ಅಳವಡಿಕೆಗೆ ಗ್ರಾಮಸ್ಥರ ವಿರೋಧ

Date:

ಉಡುಪಿ ಮತ್ತು ಕಾಸರಗೋಡು ನಡುವೆ 400 KV ವಿದ್ಯುತ್‌ ಲೈನ್ ಅಳವಡಿಕೆ ವಿರೋಧಿಸಿ, ಕಂಪನಿಯವರ ದುರ್ವರ್ತನೆ ಮತ್ತು ಜಿಲ್ಲಾಧಿಕಾರಿಯ ಅಸಂವಿಧಾನಿಕ ನಡೆಯನ್ನು ಖಂಡಿಸಿ ಇನ್ನಾ ಗ್ರಾಮ ಮತ್ತು ಸುತ್ತಮುತ್ತಲ ಗ್ರಾಮಗಳ ರೈತರು, ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಗ್ರಾಮ ಪಂಚಾಯತಿ ಎದುರು ನಾನಾ ಗ್ರಾಮಗಳ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. “ಈಗಾಗಲೇ ಇನ್ನಾ ಗ್ರಾಮದ ಮೂಲಕ ಹಾದು ಹೋಗಿರುವ ಉಡುಪಿ-ಹಾಸನ ವಿದ್ಯುತ್ ಮಾರ್ಗ ಮತ್ತು ಪಾದೂರು ತೈಲ ಸಂಗ್ರಹಾಗಾರದ ಪೈಪ್ ಲೈನ್ ಮಾರ್ಗದಿಂದಾಗಿ ಇನ್ನಾ ಹಾಗೂ ಸುತ್ತಮುತ್ತಲಿನ ಗ್ರಾಮದ ರೈತರು ಜನರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದೀಗ, ಉಡುಪಿ-ಕಾಸರಗೋಡು ವಿದ್ಯುತ್ ಲೈನ್‌ಅನ್ನು ಅಳವಡಿಸುವುದು ಜನರ ಬದುಕನ್ನು ಕಸಿದುಕೊಳ್ಳಲಿದೆ” ಎಂದು ಆಕ್ರೋಶ ವ್ಯಕ್ತಪಿಸಿದ್ದಾರೆ.

“ಇನ್ನಾ ಮತ್ತು ಸುತ್ತಲಿನ ಗ್ರಾಮಗಳ ರೈತರು, ಕೃಷಿ ಕೂಲಿ ಕಾರ್ಮಿಕರು, ನಿತ್ಯ ಅನುಭವಿಸುತ್ತಿರುವ ಸಂಕಷ್ಟಕ್ಕೆ ಪರಿಹಾರವೇ ಇಲ್ಲವಾಗಿದೆ. ಈ ಯೋಜನೆಗಳಿಗೆ ಕೃಷಿ ಅವಲಂಬಿತ ಭೂ-ಮಾಲಿಕರಿಂದ ಬಲವಂತವಾಗಿ ಫಲವತ್ತಾದ ಭೂಮಿಯನ್ನು ಕಸಿದುಕೊಳ್ಳಲಾಗಿದೆ. ವಿದ್ಯುತ್‌ ಲೈನ್‌ನ ಸೆಳೆತದಿಂದ ಜನ-ಜಾನುವಾರುಗಳನ್ನು ಪ್ರಾಣ ಭಯದಿಂದ ಬದುಕುವಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ಉಡುಪಿ–ಕಾಸರಗೋಡು 400 KV ವಿದ್ಯುತ್ ಲೈನ್ ಅಳವಡಿಕೆಗಾಗಿ ಗ್ರಾಮಸ್ಥರ ತೀರ್ವ ವಿರೋಧದ ವ್ಯಕ್ತಪಡಿಸಿದ್ದಾರೆ. ಅನೇಕ ಬಾರಿ ಜಿಲ್ಲಾಧಿಕಾರಿಗೆ, ಜಿಲ್ಲೆಯ ಶಾಸಕರಿಗೆ, ಉಸ್ತುವಾರಿ ಸಚಿವರಿಗೆ, ಸರ್ಕಾರಕ್ಕೆ ರೈತರು ಮಾಡಿದ ಮನವಿ, ಹಕ್ಕೊತ್ತಾಯ ಸಲ್ಲಿಸಿದ್ದಾರೆ. ಆದರೂ, ಯೋಜನೆಯ ಗುತ್ತಿಗೆ ಪಡೆದಿರುವ ‘Udupi – Kasargod Power Transmission Ltd’ (UKTL) (Sterlite Company) ಅವರು ಯೋಜನೆಯಿಂದ ಭಾದಿತರಾಗುವ ಜನರಿಗೆ ಯಾವುದೇ ಪರಿಹಾರ ನೀಡದೆ, ಮಾಹಿತಿ ಕೊಡದೆ ಜೆಸಿಬಿಗಳ ಮೂಲಕ ಭೂಮಿಯನ್ನು ಅಗೆದಿದ್ದಾರೆ. ಅಗೆಯುವುದಕ್ಕೆ ತಡೆಯೊಡ್ಡಿದ ಮಹಿಳೆಯರು, ವೃದ್ಧರನ್ನೆಲ್ಲ ದೂಡಿ, ಭತ್ತದ ಬೆಳೆಗಾಗಿ ಸಿದ್ಧತೆಗೊಂಡ ಗದ್ದೆಗೆ ನುಗ್ಗಿ ದೊಡ್ಡ ದೊಡ್ಡ ಹೊಂಡಗಳನ್ನು ತೋಡಿದ್ದಾರೆ. ಕಾನೂನನ್ನು ಗಾಳಿಗೆ ತೂರಿ ದುರ್ವತ್ರನೆ ತೋರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಜಿಲ್ಲಾಧಿಕಾರಿಯವರ ಲಿಖಿತ ಆದೇಶದ ಪ್ರತಿಯನ್ನು ತಹಶೀಲ್ದಾರರು ಮತ್ತು ಗುತ್ತಿಗೆದಾರರಲ್ಲಿ ಕೇಳಿದಾಗಲೂ, ಅವರ ಬಳಿ ಯಾವುದೇ ದಾಖಲೆ ಇರಲಿಲ್ಲ. ಈ ಯೋಜನೆ ಸಂಪೂರ್ಣ ಕಾನೂನು ಬಾಹಿರವಾಗಿ ಜಾರಿ ಮಾಡಲಾಗುತ್ತಿದೆ. ಈ ಎಲ್ಲ ಪ್ರಕ್ರಿಯೆ ಜಿಲ್ಲಾಡಳಿತದ ಕಣ್ಣಮುಂದೆಯೇ ನಡೆಯುತ್ತಿದ್ದರೂ ಜಿಲ್ಲಾಧಿಕಾರಿ ಮೌನವಾಗಿದ್ದಾರೆ. ಅವರ ನಡೆ ಖಂಡನೀಯವಾಗಿದೆ” ಎಂದು ಗ್ರಾಮಸ್ಥರು ದೂರಿದ್ದಾರೆ.

“ಕೃಷಿಯನ್ನೇ ನಂಬಿಕೊಂಡಿರುವ ರೈತರ ಫಲವತ್ತಾದ ಕೃಷಿ ಭೂಮಿ, ಅವರು ಬೆವರು ಸುರಿಸಿ ನೆಟ್ಟು ಬೆಳೆಸಿದ ತೆಂಗು, ಅಡಿಕೆ ಮತ್ತು ಇನ್ನಿತರ ತೋಟಗಾರಿಕಾ ಬೆಳೆಗಳನ್ನು ರಕ್ಷಿಸಿಕೊಳ್ಳುವುದಕ್ಕಾಗಿ ನಮ್ಮ ನೆಲ-ಜಲ-ಪರಿಸರವನ್ನು ಕಾಪಾಡಿಕೊಳ್ಳುವುದಕ್ಕಾಗಿ ನಮ್ಮ ಉಗ್ರ ಹೋರಾಟ ಅನಿವಾರ್ಯವಾಗಿದೆ” ಎಂದು ಹೋರಾಟಗಾರ ಸಮಿತಿ ಪ್ರತಿಭಟನೆಗೆ ಇಳಿದಿರುವುದಾಗಿ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...