ಉಡುಪಿ | ಮತಗಳ್ಳತನ ತಡೆಯದೆ ನೈಜ ಚುನಾವಣೆ ಆಗೋಲ್ಲ : ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ

Date:

ನೈಜ ಚುನಾವಣೆ ಎಂದು ಕರೆಯಬೇಕಾದರೆ ಮತಗಳ್ಳತನ ನಿಲ್ಲಬೇಕು, ಜನರ ಭಾವನೆಗಳಿಗೆ ಆಸ್ಪದ ನೀಡಬೇಕು ಹಾಗೂ ಚುನಾವಣೆಗಳು ದೋಷ ಮುಕ್ತವಾಗಿ ನಡೆಯಬೇಕು ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದರು.

ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಅವರು ಮಾತನಾಡುತ್ತಾ, ಚುನಾವಣಾ ಆಯೋಗದೊಂದಿಗೆ ಬಿಜೆಪಿ ನಡೆಸುತ್ತಿರುವ ಮತಗಳ್ಳತನದ ವಿರುದ್ಧ ರಾಜ್ಯದಾದ್ಯಂತ 70 ರಿಂದ 80 ಲಕ್ಷ ಸಹಿ ಸಂಗ್ರಹಿಸಲಾಗಿದೆ. ಮತಗಳ್ಳತನವು ರಾಷ್ಟ್ರಮಟ್ಟದ ಗಂಭೀರ ವಿಚಾರವಾಗಿದ್ದು, ಸಹಿ ಸಂಗ್ರಹದ ಬಳಿಕ ರಾಷ್ಟ್ರಪತಿಗಳಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡುವೂರು ಮಾತನಾಡಿ, ಪಕ್ಷ ಬಲಪಡಿಸದೆ ಚುನಾವಣೆ ಗೆಲ್ಲುವುದು ಅಸಾಧ್ಯ. ಕೇಂದ್ರ ಸರ್ಕಾರ ಮತಗಳ್ಳತನದ ಧೋರಣೆಯನ್ನು ನಿಲ್ಲಿಸದಿದ್ದರೆ ಚುನಾವಣೆ ನಡೆಸುವುದೇ ವ್ಯರ್ಥ. ಬಿಜೆಪಿಯ ಈ ಷಡ್ಯಂತ್ರವನ್ನು ಜನತೆಗೆ ತಿಳಿಸಲು ಸಹಿ ಸಂಗ್ರಹ ಅಭಿಯಾನ ಅತ್ಯಂತ ಪ್ರಾಮುಖ್ಯವಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ, ಕರ್ನಾಟಕ, ಮಹಾರಾಷ್ಟ್ರದ ನಂತರ ಹರಿಯಾಣದಲ್ಲೂ ಮತಗಳ್ಳತನದ ಆರೋಪಗಳು ಕೇಳಿಬಂದಿವೆ. ಅಂಕಿ ಅಂಶಗಳೊಂದಿಗೆ ಮತಗಳ್ಳತನ ಹೇಗೆ ನಡೆಯುತ್ತಿದೆ ಎಂಬುದನ್ನು ವಿಶ್ಲೇಷಿಸಬೇಕು. ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸಹಿ ಸಂಗ್ರಹದೊಂದಿಗೆ ಜನಜಾಗೃತಿ ಮೂಡಿಸುವುದು ಅಗತ್ಯ ಎಂದರು.

ಈ ಸಂದರ್ಭದಲ್ಲಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾದ ಎಂ.ಎ. ಗಪೂರ್, ರಾಜ್ಯ ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತ್ ಜತ್ತನ್ನ, ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಪಿನ್ ಚಂದ್ರ ಪಾಲ್ ನಕ್ರೆ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಸಭೆಯಲ್ಲಿ ಎಂ.ಎ. ಗಪೂರ್, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಮಲ್ಲಾಡಿ ಶಿವರಾಂ ಶೆಟ್ಟಿ, ವೆರೋನಿಕಾ ಕರ್ನೇಲಿಯೋ, ಕೃಷ್ಣ ಶೆಟ್ಟಿ ಬಜಗೋಳಿ, ಹರೀಶ್ ಕಿಣಿ, ದಿನಕರ ಹೇರೂರು, ನವೀನ್ ಚಂದ್ರ ಶೆಟ್ಟಿ, ಹಿರಿಯಣ್ಣ, ಶಬ್ಬೀರ್ ಅಹ್ಮದ್, ದೇವಕಿ ಸಣ್ಣಯ್ಯ, ಶಂಕರ್ ಕುಂದರ್, ವೈ. ಸುಕುಮಾರ್, ರಮೇಶ್ ಕಾಂಚನ್, ರಾಘವೇಂದ್ರ ಶೆಟ್ಟಿ ಕರ್ಜೆ, ಶುಭದ ರಾವ್ ಕಾರ್ಕಳ, ರಮೇಶ್ ಶೆಟ್ಟಿ, ಮಹಾಬಲ ಕುಂದರ್, ಪ್ರಖ್ಯಾತ್ ಶೆಟ್ಟಿ, ಜಯ ಕುಮಾರ್, ಕಿರಣ್ ಹೆಗ್ಡೆ, ಡಾ. ಸುನಿತಾ ಶೆಟ್ಟಿ, ಮಮತಾ ಶೆಟ್ಟಿ, ರೋಶನಿ ಒಲಿವರಾ, ಹರಿಪ್ರಸಾದ್ ರೈ, ಲಕ್ಷ್ಮೀಶ ಶೆಟ್ಟಿ, ಎಂ.ಪಿ. ಇದಿನಬ್ಬ, ದಿಲೀಪ್ ಹೆಗ್ಡೆ ಕುಕ್ಕೆಹಳ್ಳಿ, ಹಬೀಬ್ ಆಲಿ, ಸೌರವ್ ಬಲ್ಲಾಳ್, ಮೀನಾಕ್ಷಿ ಮಾಧವ ಬನ್ನಂಜೆ, ಗೋಪಿ ನಾಯ್ಕ, ಫರ್ಜಾನಾ ಸಂಜಯ, ಬಾಲಕೃಷ್ಣ ಪೂಜಾರಿ, ಸುರೇಶ್ ಶೆಟ್ಟಿ ಬನ್ನಂಜೆ, ಉದ್ಯಾವರ ನಾಗೇಶ್ ಕುಮಾರ್, ಕಿಶೋರ್ ಕುಮಾರ್ ಎರ್ಮಾಳ್, ಸತೀಶ್ ಕೊಡವೂರು, ಸಂಜಯ ಆಚಾರ್ಯ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.

ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ವಂದಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...