ಉಡುಪಿ | ಸಂವಿಧಾನ ಎಲ್ಲರನ್ನೂ ಒಟ್ಟು ಸೇರಿಸುತ್ತದೆ, ಅದುವೇ ನಮ್ಮ ದಾರಿದೀಪ – ವಿನಯ್ ಕುಮಾರ್ ಸೊರಕೆ

Date:

ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಉಡುಪಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ಪದಗ್ರಹಣ ಮತ್ತು ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮ ಇಂದು ಉಡುಪಿಯ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆ.ಪಿ.ಸಿ.ಸಿ. ಪ್ರಚಾರ ಸಮಿತಿಯ ಅಧ್ಯಕ್ಷರು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಪುತ್ತೂರಿನಲ್ಲಿ ಶಾಸಕನಾಗಿದ್ದಾಗಿನಿಂದಲೂ ಇಂತಹ ಇಪ್ತಾರ್ ಕೂಟವನ್ನು ನಡೆಸುತ್ತ ಬಂದಿದ್ದೇನೆ. ಇಸ್ಲಾಮ್ ಸಾರುವ ಸಮಾನತೆಯ ಸಂದೇಶ ನನಗೆ ಅಚ್ಚುಮೆಚ್ಚು, ಪ್ರವಾದಿ ಮುಹಮ್ಮದ್ ಶಾಂತಿ ಸಮಾನತೆಯನ್ನು ಸಾರಿದರು. ಎಲ್ಲಾ ಧರ್ಮಗಳು ಮಾನವ ಮಾನವನಾಗಿ ಬದುಕುವ ಸಂದೇಶ ಸಾರಿದೆ. ದೇಶಕ್ಕೆ ದೊಡ್ಡ ಕೊಡುಗೆ ಕೊಡಬೇಕಾದರೆ ನಾವು ಪರಸ್ಪರ ಸಹೋದರಂತೆ ಬದುಕಬೇಕು ಎಂದು ಹೇಳಿದರು.

1004814541

ದೇಶ ವಿಭಜನೆ ಮಾಡಿದ್ದು ಮಹಮ್ಮದ್ ಅಲಿ ಜಿನ್ನಾ ಮತ್ತು ಸಾವರ್ಕರ್ ಆಗಿದ್ದರೂ ಸಹ ಅದನ್ನು ಕಾಂಗ್ರೆಸ್ ರವರ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಸ್ವಾತಂತ್ರ್ಯ, ಶಾಂತಿ, ಸಮಾನತೆಗಾಗಿಯೇ ಸ್ವಾತಂತ್ರ್ಯ ಸಂಗ್ರಾಮ ನಡೆದಿತ್ತು ಅದರಲ್ಲಿ ಸರ್ವ ಧರ್ಮಗಳು ಒಟ್ಟುಗೂಡಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟರು ದೇಶಕ್ಕೆ ಬೇಕಾದ ಸಂವಿಧಾನವು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದರು, ಸಂವಿಧಾನ ಎಲ್ಲರನ್ನೂ ಒಟ್ಟು ಸೇರಿಸುತ್ತದೆ ಅದುವೇ ನಮ್ಮ ದಾರಿದೀಪ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1004814542

ಇತ್ತೀಚಿಗೆ ಮಲ್ಪೆ ಬಂದರಿನಲ್ಲಿ ನಡೆದ ಘಟನೆ ನಿಜಕ್ಕೂ ಖಂಡನೀಯ. ತಪ್ಪು ಎರಡು ಕಡೆಯಿಂದಲೂ ಇರುತ್ತದೆ ಅದನ್ನು ಪರಿಹಾರ ಮಾಡಬೇಕೆ ವಿನಹ ಅದನ್ನು ರಾಜಕೀಯ ಮಾಡುವುದು ತಪ್ಪು, ಕಳೆದ ಹಲವಾರು ವರ್ಷಗಳಿಂದ ನಮ್ಮನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮೊಳಗಿನ ಅನ್ಯೋನ್ಯತೆ, ಸೌಹಾರ್ದತೆಯನ್ನು ಕಡೆಸುತ್ತಿದ್ದಾರೆ ಇದರ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಹೇಳಿದರು.

ಪೊಲಿಪು ಜಾಮಿಯಾ ಮಸೀದಿ ಖತೀಬರಾದ ಇರ್ಷಾದ್ ಸಹದಿ ದುಅ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್ ಪ್ರಾಸ್ತಾವಿಕವಾಗಿ ಮಾತನಾಡಿದರು.

1004814539

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಫಾದರ್ ವಿಲಿಯಮ್ ಮಾರ್ಟಿಸ್, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ಕಾಂಚನ್ , ರಮೇಶ್ ಕಾಂಚನ್, ಇಸ್ಲಾಯಿಲ್ ಆತ್ರಾಡಿ, ನಕ್ವಾ ಯಯ್ಯಾ, ಮಲ್ಪೆ, ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಮುಸ್ತಾಕ್ ಅಹಮ್ಮದ್ ಬೆಳ್ವೆ, ಮುಸ್ಲಿಂ ಒಕ್ಕೂಟ ಉಡುಪಿ ಜಿಲ್ಲಾಧ್ಯಕ್ಷರಾದ ಮಹಮ್ಮದ್ ಮೌಲಾ, ಮುಸ್ಲಿಂ ಬಾಂಧ್ಯವ್ಯ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮುತ್ತಾಕ್ ಹೆನ್ನಾಬೈಲ್, ಸಹಬಾಳ್ವೆ ಸ್ಥಾಪಕ ಅಧ್ಯಕ್ಷ ಅಮೃತ್ ಶೆಣೈ, ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯದ್ಯಕ್ಷ ಪ್ರಶಾಂತ್ ಜತ್ತನ್ನ, ಹಾಜಿ ಹಸನ್‌ ಅಹಮ್ಮದ್ ಮುಂತಾದವರು ಉಪಸ್ಥಿತರಿದ್ದರು. ನಾಗೇಶ್ ಉದ್ಯಾವರ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...