ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿರುವರ ವಿರುದ್ಧ ಕ್ರಮಕೈಗೊಂಡು ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸುವ, ʼಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ-2003 ಅಡಿ ಏಪ್ರಿಲ್ನಿಂದ ಸೆಪ್ಟೆಂಬರ್-2025 ತಿಂಗಳವರೆಗೆ ಸುಮಾರು 1,82,000 ಮಂದಿಗೆ ದಂಡ ವಿಧಿಸಲಾಗಿದೆ ಎಂದು ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸುಗಳ ಅನುಷ್ಠಾನದ ಅಧ್ಯಕ್ಷ ವಿ ಎಸ್ ಉಗ್ರಪ್ಪ ತಿಳಿಸಿದ್ದಾರೆ. ಹೇಳಿದರು.
ಇತ್ತೀಚೆಗೆ ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸುಗಳ ಅನುಷ್ಠಾನದ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.
“ಶಾಲಾ/ಕಾಲೇಜುಗಳ 100 ಮೀ. ವ್ಯಾಪ್ತಿಯಲ್ಲಿ ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿರುವ 2470 ಜನರಿಗೆ ದಂಡ ವಿಧಿಸಲಾಗಿದೆ. ಇದರಿಂದಾಗಿ ಪ್ರತಿ ವರ್ಷ 45 ಲಕ್ಷ ರೂ. ದಂಡ ಸಂಗ್ರಹವಾಗುತ್ತಿದೆ. ಈ ಪೈಕಿ, 21 ವರ್ಷದೊಳಗಿನ ಯುವಜನರ ದತ್ತಾಂಶವನ್ನು ನೀಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ” ಎಂದರು.
“21 ವರ್ಷದೊಳಗಿನ ಯುವಜನರನ್ನು ಧೂಮಪಾನ, ಮದ್ಯಪಾನ, ತಂಬಾಕು ಸೇವನೆ, ಡ್ರಗ್ಸ್ ಸೇವೆಯಂತಹ ಮಾದಕ ವಸ್ತುಗಳ ಸೇವನೆಯಿಂದ ವ್ಯಸನ ಮುಕ್ತರನ್ನಾಗಿಸಲು ಮಾದಕ ವಸ್ತು ವ್ಯಸನ ಮುಕ್ತ ಕೇಂದ್ರಗಳ ಮೂಲಕ ಏಪ್ರಿಲ್ನಿಂದ ಸೆಪ್ಟೆಂಬರ್-2025ರವರೆಗೆ ಸುಮಾರು 1 ಲಕ್ಷ ಯುವಜನರಿಗೆ ಸಮಾಲೋಚನೆಯನ್ನು ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಮತ್ತು ನಿಮ್ಹಾನ್ಸ್ ಸಹಯೋಗದಲ್ಲಿ ಟೆಲಿಮಾನಸ್ 14416 ಸಹಾಯವಾಣಿಯನ್ನು ತೆರೆಯಲಾಗಿದೆ. ಈ ಸಹಾಯವಾಣಿ ಮೂಲಕ ಮಾದಕ ವ್ಯಸನ ಪೀಡಿತ ಮಕ್ಕಳ ಮುಂದಿನ ಭವಿಷ್ಯವನ್ನು ಈ ಸುಧಾರಿಸಲು ಅಗತ್ಯ ಸಹಾಯ ಮತ್ತು ಸಮಾಲೋಚನೆಯನ್ನು ಪಡೆಯಬಹುದಾಗಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತರ ನೆರವಿಗೆ ಭತ್ತ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ: ರೈತಸಂಘ ಪ್ರತಿಭಟನಾ ರ್ಯಾಲಿ
“ದೃಶ್ಯ ಮಾಧ್ಯಮಗಳು ಅತ್ಯಾಚಾರ, ಮಹಿಳಾ ದೌರ್ಜನ್ಯ, ಆತ್ಮಹತ್ಯೆ ಮತ್ತು ಇತರ ಪ್ರಕರಣಗಳನ್ನು ವೈಭವೀಕರಿಸಿ ಭಯಗೊಳ್ಳುವಂತೆ ಪ್ರಸಾರ ಮಾಡುವುದನ್ನು ನಿಯಂತ್ರಿಸಬೇಕು. ಪ್ರೆಸ್ ಕೌನ್ಸಿಲ್ ಮಾರ್ಗಸೂಚಿಗಳನ್ನು ದೃಶ್ಯ ಮಾಧ್ಯಮಗಳು ಅಳವಡಿಸಿಕೊಳ್ಳಬೇಕು. ಯಾರು ಈ ರೀತಿಯ ಪ್ರಕರಣಳಿಗೆ ಪ್ರಚಾರ ನೀಡುತ್ತಾರೋ ಅವರ ಮೇಲೆ ಮಹಿಳೆಯರ ಅಸಭ್ಯ ಪ್ರಾತಿನಿಧ್ಯ(ನಿಷೇಧ) ಕಾಯ್ದೆ-1986(Indescent Representation of Women (Prohibition) Act-1986)ರ ಅಡಿಯಲ್ಲಿ ಸ್ವಯಂ ಪ್ರೇರಿತವಾಗಿ ಕ್ರಮವನ್ನು ದೃಶ್ಯ ಮಾಧ್ಯಮಗಳು ತೆಗೆದುಕೊಳ್ಳಬೇಕು. ಅಥವಾ ಕೇಬಲ್ ಆಕ್ಟ್ ಇದ್ದರೆ ಆ ಕಾಯಿದೆ ಅಡಿಯಲ್ಲಿ ಕ್ರಮವಹಿಸಲು ಅಥವಾ ಫಿಲ್ಮ್ಸ್ ಆಕ್ಟ್ ಇದ್ದರೆ ಆ ಕಾಯಿದೆಯಡಿಯಲ್ಲಿ ಕ್ರಮ ವಹಿಸಲು, ಪತ್ರಿಕೋದ್ಯಮಕ್ಕೆ ಸಂಬಂಧಿಸಿದ್ದರೆ ಪತ್ರಿಕೋದ್ಯಮ ಕಾಯಿದೆಯಡಿ ಕ್ರಮವಹಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಹಾಗೂ ವಾರ್ತಾ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಸೂಚಿಸಿದರು.





