ಚಾಮರಾಜನಗರ | ರಾತ್ರಿ ಸಂಚಾರ ನಿಷೇಧ ತೆರವಿಗೆ ಮುಂದಾದರೆ ಉಗ್ರ ಹೋರಾಟ : ವಕ್ತಾರ ರಾಜೂಗೌಡ

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ರಾಜ್ಯ ವಕ್ತಾರ ರಾಜೂಗೌಡ ‘ ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಮುಂದಾದರೆ ಉಗ್ರ ಹೋರಾಟ ‘ ನಡೆಸುವ ಎಚ್ಚರಿಕೆ ನೀಡಿದರು.

” ಕಳೆದ ವರ್ಷ ಕೇರಳದ ವೈನಾಡಿನ ಲೋಕಸಭಾ ಚುನಾವಣೆ ವೇಳೆ ಪ್ರಿಯಾಂಕ ಗಾಂಧಿಯವರು ಬಂಡೀಪುರದ ರಾತ್ರಿ ಸಂಚಾರ ನಿಷೇಧ ತೆರವು ಮಾಡಿಸುವುದೇ ನನ್ನ ಗುರಿ ಎಂದಿದ್ದರು. ಅದರಂತೆ, ಹೈಕಮಾಂಡ್ ನಾಯಕರ ಮಾತಿಗೆ ರಾಜ್ಯ ಸರ್ಕಾರ ತಲೆಯಾಡಿಸಿ ರಾತ್ರಿ ಸಂಚಾರ ತೆರವು ಮಾಡುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪರಿಶೀಲನೆ ಮಾಡುವ ಮಾತನಾಡಿದ್ದಾರೆ ” ಎಂದು ಆರೋಪಿಸಿದರು.

” ಹುಲಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಬಂಡೀಪುರದಲ್ಲಿ, ಹುಲಿಗಳ ಸಂರಕ್ಷಣೆ ಸಹ ಅತ್ಯಗತ್ಯವಾಗಿದೆ. ಒಂದು ರಾಜ್ಯ ಅಥವಾ ದೇಶದ ಅಭಿವೃದ್ಧಿಗೆ ಪ್ರವಾಸೋದ್ಯಮ ಕೂಡ ಮುಖ್ಯವಾಗಿದೆ. ಅಂತಹದರಲ್ಲಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಡಿಕೆಶಿ ರಾತ್ರಿ ಸಂಚಾರ ತೆರವು ಮಾಡುವ ಬಗ್ಗೆ ಹೇಳಿದ್ದು ಖಂಡನೀಯ. ತಾಲ್ಲೂಕಿನ ಜನತೆ ಇಂತಹ ವಿಚಾರಕ್ಕೆ ಸಹಕಾರಿಯಾಗಬಾರದು ವಿರೋಧಿಸಬೇಕು. ಈಗಾಗಲೆ, ಪ್ರತಿನಿತ್ಯ ಮಾನವ ಪ್ರಾಣಿ ಸಂಘರ್ಷ ನಡೆಯುತ್ತಿದೆ, ಇನ್ನು ರಾತ್ರಿ ಸಂಚಾರ ಆರಂಭವಾದರೆ ಸಂಘರ್ಷ ಹೆಚ್ಚಾಗುತ್ತದೆ, ಅಕ್ರಮ ಸಾಗಾಟಕ್ಕೆ ಅವಕಾಶ ನೀಡಿದಂತಾಗುತ್ತದೆ. ಪ್ರಾಣಿ ಭೇಟೆ, ಕಳ್ಳಸಾಗಾಣೆ ಹೆಚ್ಚಳವಾಗುವ ಆತಂಕವಿದೆ ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರ ಇಂತಹ ದುಸ್ಸಾಹಸಕ್ಕೆ ಕೈಹಾಕಿದರೆ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು, ಉಗ್ರ ಹೋರಾಟ ಮಾಡಲಾಗುವುದು ಎಂದು ಸರ್ಕಾರ ಹಾಗೂ ಅರಣ್ಯ ಸಚಿವರಿಗೆ ಎಚ್ಚರಿಕೆ ನೀಡಿ. ಜನ ಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕು. ಈ ಕ್ಷೇತ್ರದ ಶಾಸಕರು ಪ್ರತಿಕ್ರಿಯೆ ನೀಡಿಲ್ಲ, ಪಕ್ಷಾತೀತವಾಗಿ ಬಂಡೀಪುರ ಉಳಿವಿಗೆ ಕೈಜೋಡಿಸಬೇಕು, ಮುಂದಿನ ದಿನಗಳಲ್ಲಿ ಸರ್ಕಾರ ಇಂತಹ ಕ್ರಮ ಕೈಗೊಂಡರೆ ಶಾಸಕರು ವಿರೋಧಿಸಬೇಕು, ನಮ್ಮ ಜೊತೆ ಹೊರಾಟಕ್ಕೆ ಬರಬೇಕು ಎಂದರು.

ಈಗಾಗಲೇ ಅರಣ್ಯ ಒತ್ತುವರಿ ನಡೆಸುತಿದ್ದು ಅಕ್ರಮ ಹೋಂ ಸ್ಟೇ ಹಾಗೂ ರೆಸಾರ್ಟ್ ಗಳು ತಲೆ ಎತ್ತಿವೆ. ಈ ಹಿಂದೆ ಅನುಮತಿ ಇರದ ರೆಸಾರ್ಟ್ ಹೋಂ ಸ್ಟೇ ತೆರವು ಮಾಡಬೇಕು ಎಂದು ಆಗ್ರಹಿಸಿದರು.

ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಜಾತ್ರೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದ್ದು, ಅರಣ್ಯ ಇಲಾಖೆ ನಿರಿನ ಟ್ಯಾಂಕ್ ನಿರ್ಮಾಣಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮುಂಗಾರಿನ ಮೊದಲ ಉಳುಮೆ ‘ ಹೊನ್ನಾರು ‘

ಜೆಡಿಎಸ್ ಮುಖಂಡ ಬಸವರಾಜ ಸ್ವಾಮಿ ಪತ್ರಿಕಾಗೋಷ್ಟಿಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...