ಉಡುಪಿ | ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ, ಕೆಎಂಸಿ ಯಲ್ಲಿ ಚಿಕಿತ್ಸೆ ಪಡೆದು ಬದುಕಿ ಉಳಿದ ಯುವಕ

Date:

ಕಳೆದ 15 ದಿನಗಳ ಹಿಂದೆ ಕೋಟ ಠಾಣಾ ವ್ಯಾಪ್ತಿಯಲ್ಲಿ ಅಪಘಾತಕ್ಕೆ ಒಳಗಾದ ಒರಿಸ್ಸಾದ ಕಾರ್ಮಿಕ ಯುವಕನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದೆ ಉಡುಪಿಗೆ ಹಿಂದಕ್ಕೆ ಕಳುಹಿಸಿದ, ಇನ್ನೇನು ಕೊನೆ ಘಳಿಗೆ ಸಾವು ಸಂಭವಿಸುವ ಸಂದರ್ಭ, ವಿಶು ಶೆಟ್ಟಿಯವರು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಯುವಕ ಇದೀಗ ಪುನರ್ಜನ್ಮ ಪಡೆದಿದ್ದಾನೆ.

ಒರಿಸ್ಸಾ ಮೂಲದ ಕೂಲಿ ಕಾರ್ಮಿಕ ಕೃಷ್ಣ (27) ಅಪಘಾತದಿಂದ ಉದರದ ಒಳಭಾಗ ತೀವ್ರ ಹೊಡೆತದಿಂದ ಚಿಂತಾ ಜನಕ ಪರಿಸ್ಥಿತಿ ಇದ್ದು ತುರ್ತು ಶಸ್ತ್ರಚಿಕಿತ್ಸೆಗೆ ಆಂಬುಲೆನ್ಸ್ ಮುಖಾಂತರ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದೆ ಉಡುಪಿಗೆ ವಾಪಾಸು ಕಳುಹಿಸಿದ್ದರು. ಪ್ರಾಣ ಉಳಿಸುವ ಅಮೂಲ್ಯ ಸಮಯದಲ್ಲಿ ರೋಗಿಯು 5 ಗಂಟೆಗಳ ಕಾಲ ಸಾವು ಬದುಕಿನ ಹೋರಾಟವನ್ನು ಆಂಬುಲೆನ್ಸ್ ನಲ್ಲಿ ಅನಾವಶ್ಯಕವಾಗಿ ಕಳೆಯಬೇಕಾಯಿತು. ಕೂಲಿ ಕಾರ್ಮಿಕನಾದ ಯುವಕ ಬಡತನದಿಂದ ಹೊರ ರಾಜ್ಯದಿಂದ ಇಲ್ಲಿಗೆ ಬಂದಿದ್ದು ಆತನ ಸಂಗಡಿಗರು ಕಂಗಾಲಾಗಿದ್ದರು. ವಿಷಯ ತಿಳಿದ ವಿಶು ಶೆಟ್ಟಿ ಕೂಡಲೇ ತಾನೇ ಜವಾಬ್ದಾರಿ ಹೊತ್ತು ಕೆಎಂಸಿ ಮಣಿಪಾಲಕ್ಕೆ ದಾಖಲಿಸಿ ತುರ್ತು ಶಸ್ತ್ರ ಚಿಕಿತ್ಸೆ ಮಾಡಿಸಿ 6 ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದು, ಮುಂದಿನ ಆರೈಕೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಇದೀಗ ಯುವಕನನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು, ಊರಿಂದ ಬಂದ ಸಂಬಂಧಿ ಜೊತೆ ತನ್ನೂರಾದ ಒರಿಸ್ಸಾಗೆ ತೆರಳಿದ್ದಾನೆ.

ಪ್ರಕರಣದ ಗಂಭೀರತೆ ಅರಿತ ಉದ್ಯಮಿ ಕೃಷ್ಣಮೂರ್ತಿ ಭಟ್ ಕೆಮ್ತೂರು ರೂ. 50000/- ಚಿಕಿತ್ಸೆಗೆ ನೀಡಿ ಸಹಕರಿಸಿದ್ದರು. ಯುವಕನ ಜೊತೆಕೆಲಸಗಾರ ಅನಿಲ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಗಿಯುವ ತನಕ ಜೊತೆಗಿದ್ದು ಉಪಚರಿಸಿ ಸಹಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ವಿಷಯವನ್ನು ಹಂಚಿಕೊಂಡು ಇಂತಹ ಗಂಭೀರ ಪ್ರಕರಣದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿನ ನಿರ್ಲಕ್ಷತನ ಅಮಾನವೀಯ. ಮುಂದೆಂದೂ ಇಂತಹ ಪ್ರಕರಣ ನಡೆಯದಿರಲಿ. ಕೆಎಂಸಿ ಮಣಿಪಾಲದ ಮುಖ್ಯಸ್ಥರು ತುರ್ತು ಮನವಿಗೆ ಸ್ಪಂದಿಸಿ ಯುವಕನ ಜೀವ ಉಳಿಸುವಲ್ಲಿ ನೆರವಾಗಿ ಸಹಕರಿಸಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯ ವೈದ್ಯರು ಕೆಎಂಸಿಯಿಂದ ಬಿಡುಗಡೆ ಆದ ನಂತರ ತೀವ್ರ ನಿಗಾ ಘಟಕದಲ್ಲಿ ಉತ್ತಮ ಚಿಕಿತ್ಸೆ ನೀಡಿದ್ದಾರೆ. ಉಡುಪಿ ಜಿಲ್ಲಾಸ್ಪತ್ರೆಗೆ ಇನ್ನಷ್ಟು ಮೂಲಸೌಕರ್ಯ ಸರಕಾರ ಒದಗಿಸಲಿ ಎಂದು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...