ಉಡುಪಿ | ಆಸ್ತಿಗಾಗಿ ಹೆಣ್ಮಕ್ಕಳ ಕಾಟ, ಬೀದಿಪಾಲಾದ ತಾಯಿ, ಮಗನ ರಕ್ಷಣೆ

Date:

ಆರು ಎಕರೆ ಜಮೀನು ಇದ್ದರೂ, ಆಸ್ತಿ ವಿಷಯದಲ್ಲಿ ತನ್ನದೇ ಹೆಣ್ಣುಮಕ್ಕಳ ಕಾಟ ತಾಳಲಾರದೆ ಮನೆ ಬಿಟ್ಟು ಬಂದು ಉಡುಪಿಯ ಸರಕಾರಿ ಬಸ್ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಶಿವಮೊಗ್ಗ ಜಿಲ್ಲೆಯ ನಗರದ ನಿವಾಸಿ ಜಯಮ್ಮ (80) ಹಾಗೂ ಆಕೆಯ ಮಗ ಮಂಜುನಾಥ ಎಂಬವರನ್ನು ಸಮಾಜ ಸೇವಕ ವಿಶು ಶೆಟ್ಟಿಯವರು ರಕ್ಷಿಸಿದ್ದಾರೆ.

ವೃದ್ಧೆ ಜಯಮ್ಮ ಅವರನ್ನು ಕೊಳಲಗಿರಿಯ ಸ್ವರ್ಗ ಆಶ್ರಮಕ್ಕೆ ದಾಖಲಿಸಲಾಗಿದ್ದು, ಅನಾರೋಗ್ಯ ಪೀಡಿತ ಮಂಜುನಾಥನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಜಯಮ್ಮ ಅವರ ಗಂಡ ಕೊರೊನಾ ಸಂದರ್ಭದಲ್ಲಿ ತೀರಿಕೊಂಡಿದ್ದು, ನಂತರ ಆಸ್ತಿ ವಿಚಾರದಲ್ಲಿ ಈಕೆಯ ನಾಲ್ಕು ಮಂದಿ ಹೆಣ್ಮಕ್ಕಳು ಇನ್ನಿಲ್ಲದ ತಗಾದೆ ತೆಗೆದಿದ್ದಾರೆ. ಅವರು ದಿನನಿತ್ಯ ನೀಡುತ್ತಿರುವ ಹಿಂಸೆ ತಾಳಲಾರದೆ ಅನಾರೋಗ್ಯ ಪೀಡಿತ ಮಗನೊಂದಿಗೆ ಬೀದಿ ಪಾಲಾದೆ ಎಂದು ಆಕೆ ತಿಳಿಸಿದ್ದಾರೆ. ಹೆಣ್ಮಕ್ಕಳ ಇಚ್ಚೆಯಂತೆ ಆಸ್ತಿಯನ್ನು ಕೊಡಲು ನನಗೆ ಸಾಧ್ಯವಿಲ್ಲ. ಹೀಗಾಗಿ ನನ್ನೆಲ್ಲಾ ಆಸ್ತಿಪಾಸ್ತಿಯ ದಾಖಲೆಗಳೊಂದಿಗೆ ಮನೆ ಬಿಟ್ಟು ಬಂದಿದ್ದೇನೆ. ನನ್ನನ್ನು ಯಾವುದಾದರೂ ಆಶ್ರಮಕ್ಕೆ ಸೇರಿಸಿ, ಹಿಂಸೆಯಿಂದ ಪಾರುಮಾಡಿ ಎಂದು ಆಕೆ ಅಂಗಲಾಚಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸತ್ಯ ಅಸತ್ಯತೆಯ ಬಗ್ಗೆ ಏನನ್ನು ಹೇಳಲಾಗುವುದಿಲ್ಲ. ವೃದ್ದಪ್ಯದ ಸಮಯದಲ್ಲಿ ಈ ರೀತಿ ಬೀದಿಪಾಲಾಗುವುದು ಸರಿಯಲ್ಲ. ವೃದ್ದೆಗೆ ಸಂಬಂಧಪಟ್ಟವರು ಸರಿಯಾದ ನ್ಯಾಯವನ್ನು ಒದಗಿಸಿಕೊಡಬೇಕು ಎಂದು ಸಮಾಜ ಸೇವಕ ವಿಶುಶೆಟ್ಟಿ ಅಂಬಲಪಾಡಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...