ಉಡುಪಿ | ವಿಶ್ವೇಶ್ವರ ಭಟ್ ಕ್ಷಮೆ ಕೇಳದಿದ್ದರೆ ಕಾನೂನು ಹೋರಾಟ ಖಚಿತ

Date:

ನಾಡಿನ ಶ್ರೇಷ್ಠ ಪರಂಪರೆಯ ಕಲೆಯಾದ ತಾಳಮದ್ದಲೆ ಹಾಗೂ ಅದರ ಅರ್ಥಧಾರಿಗಳ ಬಗ್ಗೆ ಅವಹೇಳನಕಾರಿ, ಮಾನಹಾನಿಕರ ಬರಹಗಳನ್ನು ಪ್ರಕಟಿಸಿರುವ ಆರೋಪದ ಮೇಲೆ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ಟರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ತಾಳಮದ್ದಲೆ ಕ್ಷೇತ್ರದ ಹಿರಿಯ ಅರ್ಥಧಾರಿಗಳು ಆಗ್ರಹಿಸಿದ್ದಾರೆ.

ಉಡುಪಿಯ ಯಕ್ಷಗಾನ ಕಲಾರಂಗದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ತಾಳಮದ್ದಲೆ ಅರ್ಥಧಾರಿಗಳು, ವಿಶ್ವೇಶ್ವರ ಭಟ್ಟರು ತಮ್ಮ ಪತ್ರಿಕೆಯ “ಭಟ್ಟರ ಸ್ಕಾಚ್” ಪ್ರಶೋತ್ತರ ಅಂಕಣದಲ್ಲಿ ತಾಳಮದ್ದಲೆ ಅರ್ಥಧಾರಿಗಳ ಕುರಿತು ಅಸಂಬದ್ಧ, ಅವಮಾನಕಾರಿ ಮತ್ತು ಹೀನ ಅಭಿರುಚಿಯ ಹೇಳಿಕೆಗಳನ್ನು ನಿರಂತರವಾಗಿ ಮಾಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

1009116345

ವಿಶ್ವವಾಣಿ ಪತ್ರಿಕೆಯ ಅಂಕಣದಲ್ಲಿ ತಾಳಮದ್ದಲೆಯ ಅರ್ಥಧಾರಿಗಳಲ್ಲಿ ಅತಿಹಿರಿಯರಾದ ಖ್ಯಾತ ಯಕ್ಷಗಾನ ವಿದ್ವಾಂಸ, ಸಂಶೋಧಕ ಡಾ. ಎಂ. ಪ್ರಭಾಕರ ಜೋಶಿಯವರ ಹಿರಿತನ, ಜ್ಞಾನ ಮತ್ತು ಅನುಭವಗಳನ್ನು ಪರಿಹಾಸ ಮಾಡುವ ರೀತಿಯಲ್ಲಿ ಬರೆಯಲಾಗಿದೆ. ಅಲ್ಲದೆ, ತಾಳಮದ್ದಲೆಯ ಪ್ರಸ್ತುತ ಸ್ಥಿತಿಗತಿಗಳ ವಿಮರ್ಶೆ ಎಂಬ ನೆಪದಲ್ಲಿ ಕೆಲವು ಅರ್ಥಧಾರಿಗಳನ್ನು “ಐಟಂ ಸಾಂಗ್ ಡ್ಯಾನ್ಸರ್” ಎಂದು ಉಲ್ಲೇಖಿಸಿರುವುದು ಈ ಕಲೆಯ ಘನತೆಗೆ ಧಕ್ಕೆ ತರುವಂತಹದ್ದು ಎಂದು ಅರ್ಥಧಾರಿಗಳು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶ್ವೇಶ್ವರ ಭಟ್ಟರ ಹೇಳಕೆಯನ್ನು ಸಾತ್ವಿಕವಾಗಿ ವಿರೋಧ ವ್ಯಕ್ತಪಡಿಸಿದ ಹಿರಿಯ ಅರ್ಥಧಾರಿ ಕೆರೇಕ್ಷೆ ಉಮಾಕಾಂತ ಭಟ್ಟ ಹಾಗೂ ಅರ್ಥಧಾರಿ–ವೇಷಧಾರಿ–ಸಂಘಟಕ ಉಜಿರೆ ಅಶೋಕ ಭಟ್ಟರ ಕುರಿತು ಸಹ ಮುಂದಿನ ಅಂಕಣದಲ್ಲಿ ಕೀಳಾಗಿ ಬರೆಯುವ ಮೂಲಕ ಅವರ ಮಾನಹಾನಿ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

1009116354

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ. ಎಂ. ಪ್ರಭಾಕರ ಜೋಶಿ, “ಕಲೆ ಮತ್ತು ಕಲಾವಿದರ ಕುರಿತಾದ ಸಭ್ಯ ವಿಮರ್ಶೆಗೆ ನಾವು ಸದಾ ತೆರೆದ ಮನಸ್ಸಿನಿಂದ ಸಿದ್ಧರಿದ್ದೇವೆ. ಆದರೆ ವಿಮರ್ಶೆಯ ಹೆಸರಿನಲ್ಲಿ ಕಲಾವಿದರ ವೈಯಕ್ತಿಕ ತೇಜೋವಧೆ ಮಾಡುವುದು ಪತ್ರಿಕಾಧರ್ಮಕ್ಕೆ ವಿರುದ್ಧವಾಗಿದೆ. ತಾಳಮದ್ದಲೆಯಂತಹ ಶ್ರೇಷ್ಠ ಕಲೆಯನ್ನು ಅರಿಯದೇ ಅವಹೇಳನ ಮಾಡುವುದು ನೋವಿನ ಸಂಗತಿ” ಎಂದರು.

ಅರ್ಥಧಾರಿಗಳು ತಮ್ಮ ಸಂಯುಕ್ತ ಹೇಳಿಕೆಯಲ್ಲಿ, “ನಾವು ಅರ್ಥಧಾರಿಗಳೆಂಬ ಕಾರಣಕ್ಕೆ ನಮ್ಮ ಬಗ್ಗೆ ಏನು ಹೇಳಿದರೂ ಅದು ವಿಮರ್ಶೆ ಎಂಬ ಹೆಸರಿನಲ್ಲಿ ಸಹಿಸಲೇಬೇಕು ಎಂಬ ತಾತ್ಸಾರ ಧೋರಣೆ ಸಮಾಜದಲ್ಲಿ ಮೂಡಬಾರದು. ಪತ್ರಕರ್ತರಾದ ವಿಶ್ವೇಶ್ವರ ಭಟ್ಟರು ಪತ್ರಿಕಾಧರ್ಮವನ್ನು ಮೀರಿದ ರೀತಿಯಲ್ಲಿ ವರ್ತಿಸುತ್ತಿದ್ದಾರೆ” ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಅರ್ಥಧಾರಿಗಳು ಮೂರು ಪ್ರಮುಖ ಆಗ್ರಹಗಳನ್ನು ಮುಂದಿಟ್ಟಿದ್ದಾರೆ ತಾಳಮದ್ದಲೆ ಅರ್ಥಧಾರಿಗಳ ಕುರಿತಾದ ಅಬದ್ಧ ಹಾಗೂ ಮಾನಹಾನಿಕರ ಹೇಳಿಕೆಗಳಿಗಾಗಿ ವಿಶ್ವೇಶ್ವರ ಭಟ್ಟರು ತಮ್ಮ ಪತ್ರಿಕೆಯಲ್ಲೇ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. ಹಾಸ್ಯದ ಹೆಸರಿನಲ್ಲಿ ಅರ್ಥಧಾರಿಗಳ ತೇಜೋವಧೆ ಮಾಡುವ ಪ್ರವೃತ್ತಿಯನ್ನು ತಕ್ಷಣ ನಿಲ್ಲಿಸಿ, ಮುಂದಿನ ದಿನಗಳಲ್ಲಿ ಇಂತಹ ಅನುಚಿತ ಬರಹಗಳನ್ನು ಪ್ರಕಟಿಸುವುದಿಲ್ಲ ಎಂಬ ಬದ್ಧತೆಯನ್ನು ವ್ಯಕ್ತಪಡಿಸಬೇಕು. ತಾಳಮದ್ದಲೆ ಮತ್ತು ಅದರ ಕಲಾವಿದರ ಆತ್ಮಗೌರವಕ್ಕೆ ಧಕ್ಕೆಯಾಗುವ ತನ್ನ ವರ್ತನೆಯನ್ನು ತಾನಾಗಿಯೇ ತಿದ್ದಿಕೊಳ್ಳಬೇಕು.

1009117048

ಈ ಆಗ್ರಹಗಳನ್ನು ನಿರ್ಲಕ್ಷಿಸಿ ಮುಂದುವರಿದರೂ ಅರ್ಥಧಾರಿಗಳ ವಿರುದ್ಧ ಅವಮಾನಕಾರಿ ಬರಹಗಳು ಪ್ರಕಟವಾದಲ್ಲಿ, ತಾಳಮದ್ದಲೆ ಅರ್ಥಧಾರಿಗಳು ಸಾಮೂಹಿಕವಾಗಿ ಹಾಗೂ ವೈಯಕ್ತಿಕವಾಗಿ ನ್ಯಾಯಾಲಯದ ಮೊರೆ ಹೋಗಿ ವಿಶ್ವೇಶ್ವರ ಭಟ್ಟರು ಹಾಗೂ ಅವರ ಪತ್ರಿಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಎಲ್ಲವೂ ಸದ್ಭಾವದಿಂದ, ಪರಸ್ಪರ ಗೌರವಯುತವಾಗಿ ಅಂತ್ಯಗೊಳ್ಳಲಿ ಎಂಬುದು ನಮ್ಮ ಆಶಯ. ಕಲೆ ಹಾಗೂ ಕಲಾವಿದರ ಗೌರವ ಕಾಪಾಡುವುದು ನಮ್ಮ ಬದ್ಧತೆ ಎಂದು ಅರ್ಥಧಾರಿಗಳು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರೊ. ಎಂ. ಎಲ್. ಸಾಮಗ, ಸರ್ವಂಗಳ ಈಶ್ವರ ಭಟ್ಟ, ವಿ | ಉಮಾಕಾಂತ ಭಟ್ಟ, ಭಾಸ್ಕರ ರೈ ಕುಕ್ಕುವಳ್ಳಿ, ವಿ|ಹಿರಣ್ಯ ವೆಂಕಟೇಶ ಭಟ್ಟ, ಸುಣ್ಣಂಬಳ ವಿಶ್ವೇಶ್ವರ ಭಟ್ಟ, ಉಜಿರೆ ಅಶೋಕ ಭಟ್ಟ, ರಾಧಾಕೃಷ್ಣ ಕಲ್ಟಾರ್, ಜಬ್ಬಾರ್ ಸಮೋ ಸಂಪಾಜೆ ಪೆರ್ಮುದೆ, ಜಯಪ್ರಕಾಶ ಶೆಟ್ಟಿ. ಹರೀಶ ಬಳಂತಿ ಮುಗರು, ವಾಸುದೇವ ರಂಗಾಭಟ್ಟ, ಡಾ. ಪ್ರದೀಪ ಸಾಮಗ, ಸಂಕದಗುಂಡಿ ಗಣಪತಿ ಭಟ್ಟ, ಗಣೇಶ ಶೆಟ್ಟಿ ಕನ್ನಡಿಕಟ್ಟೆ, ಪವನ್ ಕಿರಣೆರೆ, ದಿನೇಶ ಶೆಟ್ಟಿ ಕಾವಳಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...