ಯಾದಗಿರಿ | ಟ್ಯಾಕ್ಸಿ ಚಾಲಕರಿಂದ ಮತದಾನ ಜಾಗೃತಿ; ಮತ ಚಲಾಯಿಸುವಂತೆ ಕರೆ

Date:

  • ಟ್ಯಾಕ್ಸಿ ಚಾಲಕರಿಗೆ ಮತದಾನ ವ್ಯವಸ್ಥೆ ಕಲ್ಪಿಸುವಂತೆ ಕರೆ
  • ಚಾಲಕರಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವಂತೆ ಮನವಿ

“ದೇಶದ ಪ್ರತಿ ವಯಸ್ಕ ನಾಗರೀಕರು ಮತ ಚಲಾಯಿಸಬೇಕು, ಪ್ರತಿಯೊಬ್ಬರಿಗೆ ಮತದಾನ ಹಕ್ಕು ಇದೆ, ಚಾಲಕರು ಕೂಡ ಎಷ್ಟೇ ಒತ್ತಡವಿದ್ದರೂ ಮತದಾನ ಮಾಡಿ ಕೆಲಸಕ್ಕೆ ಹೋಗಬೇಕು” ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಸಲಹೆ ನೀಡಿದರು.

‘ಗಿರಿನಾಡು ಕಾರು ಮತ್ತು ಟ್ಯಾಕ್ಸಿ ಚಾಲಕರ ಸಂಘ’ದ ವತಿಯಿಂದ ಯಾದಗಿರಿ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಬಳಿಯ ನಗರಸಭೆ ವಾಣಿಜ್ಯ ಸಂಕೀರ್ಣದ ಆವರಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುದ್ನಾಳ ಮಾತನಾಡಿದರು.

“ಸ್ವಾತಂತ್ರ್ಯ ಸಿಕ್ಕಂದಿನಿಂದ ಇಲ್ಲಿಯವರೆಗೆ ಚಾಲಕರು ಪ್ರತಿ ಚುನಾವಣೆ ವೇಳೆ ವಾಹನದ ಬಾಡಿಗೆಗೆ ತೆರಳಿದ ಸಂದರ್ಭದಲ್ಲಿ ಮತದಾನದಿಂದ ವಂಚಿತರಾಗುವ ಸಂಭವ ಹೆಚ್ಚಿದೆ. ಆದ್ದರಿಂದ ಟ್ಯಾಕ್ಸಿ ಚಾಲಕರಿಗೆ ವಿಶೇಷ ಮತದಾನ ವ್ಯವಸ್ಥೆಗೆ ಮುಂದಾಗಬೇಕು” ಎಂದು ಚುನವಣೆ ಆಯೋಗವನ್ನು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಆಪರೇಷನ್ ಕಮಲ ಮಾಡಿದಾಗಲೇ ಬಿಜೆಪಿಯ ತತ್ವ ಸಿದ್ಧಾಂತ ಮಣ್ಣು ಪಾಲಾದವು : ಜಗದೀಶ್ ಶೆಟ್ಟರ್

“ಕಾರು ಮತ್ತು ಟ್ಯಾಕ್ಸಿ ಚಾಲಕರಿಗೆ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಟ್ಯಾಕ್ಸಿ ಸ್ಟ್ಯಾಂಡ್‌ಗೆ ಸ್ಥಳ, ಮೂಲಭೂತ ಸೌಕರ್ಯ ನೀಡದೇ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ನಿರ್ಲಕ್ಷ ವಹಿಸಿರುವುದು ದೃರದೃಷ್ಟಕರ ಸಂಗತಿ. ಚಾಲಕರು ಹೊಟ್ಟೆಪಾಡಿಗಾಗಿ ಬಾಡಿಗೆಗೆ ಹೋಗುತ್ತಾರೆ. ಅವರು ಹೋಗಿ ಬರುವವರೆಗೆ ಅವರ ಬಗ್ಗೆ ಕುಟುಂಬದವರು ಎದುರು ನೋಡುವ ಪರಿಸ್ಥಿತಿ ಇದೆ. ಹೀಗಾಗಿ ಇವರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು” ಎಂದು ಒತ್ತಾಯಿಸಿದರು.

ಗಿರಿನಾಡು ಚಾಲಕರ ಸಂಘದ ಅದ್ಯಕ್ಷ ಬಸವರಾಜ ಇಟಗಿ, ಶರಣು ನಾರಾಯಣಪೇಟೆ, ಶರಣು ಜೋತಾ, ಸಾಬಯ್ಯ ಗುತ್ತೇದಾರ, ಅಪಸರ ಬಾಯಿ, ಮಹೇಬೂಬ ಪಾಟೀಲ್, ಬೀರೇಶ ಪೂಜಾರಿ, ಮಹೇಶ ಹೊಸಮಿ, ಭೀಮು ಪುಜಾರಿ, ವೀರೇಶ, ರವಿ, ಶರಣು, ಹೊಸಳ್ಳಿ, ತಾಯಪ್ಪ, ಬನ್ನಪ್ಪ, ಕಾಡಪ್ಪ ಸಿದ್ದು ಮಾನಗನಾಳ, ಅಶೋಕ ಸಜ್ಜನ್, ವಿಜಯಕುಮಾರ, ವಿಶ್ವನಾಥ ಎಂ.ಡಿ. ನಾಯಕ, ನವೀನ ನಾಯ್ಕಲ್, ರಫೀಕ್, ರಫೀಕ್, ರಶೀದ, ಸುಭಾಷ, ಪ್ರಕಾಶ, ಗಂಗು ಮುತ್ಯಾ, ಉಮೇಶ, ಜಮೀರ, ರಿಯಾಜ್, ಸಿರಿ, ನಯಿಮ್, ಅಜಿಮ್, ಸಾಬು, ಮರೆಪ್ಪ, ಗೌಸ್, ಶರಣು ಸ್ವಾಮಿ, ಮಹೇಶ, ನಬಿ, ಗಣೇಶ, ಜಮಾಲ್, ಭೀಮು, ಅಸೀಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...