ಕಲಬುರಗಿ | ನಿಷ್ಪಕ್ಷಪಾತ ಮತ ಎಣಿಕೆಗೆ ʼಎದ್ದೇಳು ಕರ್ನಾಟಕʼ ಆಗ್ರಹ

Date:

ದೇಶದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಚುನಾವಣಾಧಿಕಾರಿಗಳು ಲೋಕಸಭೆ ಚುನಾವಣಾ ಫಲಿತಾಂಶ ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ನಡೆಸಬೇಕೆಂದು ಕಲಬುರಗಿಯ ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿ, “ದೇಶದ ರಾಜಕಾರಣ ಬಹಳ ಸೂಕ್ಷ್ಮ ಮತ್ತು ಆತಂಕಕಾರಿ ಹಂತಕ್ಕೆ ತಲುಪಿದೆ. ಚುನಾವಣಾ ಆಯೋಗ ಜನರ ವಿಶ್ವಾಸ ಕಳೆದುಕೊಂಡಿದೆ. ಬಿಜೆಪಿ ನೈತಿಕವಾಗಿ ಅಧಃಪತನಗೊಂಡ ಪ್ರಜಾತಂತ್ರ ವಿರೋಧಿಯಾಗಿದೆ” ಎಂದು ಅಸಮಧಾನ ವ್ಯಕ್ತಪಡಿಸಿದರು.

“ಚುನಾವಣಾ ಆಯೋಗದ ನಿರ್ಲಜ್ಜ ಪಕ್ಷಪಾತ ಹಾಗೂ ಬಿಜೆಪಿ ಪಕ್ಷದ ಸರ್ವಾಧಿಕಾರಿ ನಡತೆಯ ಹಿನ್ನೆಲೆ ಚುನಾವಣೆ ಮತ ಎಣಿಕೆ ಬಗ್ಗೆ ತೀವ್ರವಾದ ಆತಂಕವಿದೆ. ಬಿಜೆಪಿ ಸೋಲಬಹುದು, ಆದರೆ ಸುಲಭವಾಗಿ ಅಧಿಕಾರ ಹಸ್ತಾಂತರಿಸುವುದಿಲ್ಲ. ಮತ ಎಣಿಕೆಯಲ್ಲಿ ಮೋಸ, ಜನಾದೇಶದ ಉಲ್ಲಂಘನೆ ಹಾಗೂ ಕುದುರೆ ವ್ಯಾಪಾರದ ಸಾಧ್ಯತೆವಿದೆ. ಹಾಗಾಗಿ ನಿಷ್ಪಕ್ಷಪಾತ ಮತ ಎಣಿಕೆ ನಡೆಸಲು ಜಿಲ್ಲಾಧಿಕಾರಿಗಳು ಎಚ್ಚರವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯ ದುಷ್ಟ ಸಂಚುಗಳನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರಗೈದು ಬಯಲುಗೊಳಿಸಬೇಕು. ಮತ ಎಣಿಕೆಯಲ್ಲಿ ನಡೆಯಬಹುದಾದ ವಂಚನೆಯ ಬಗ್ಗೆ ನಿಗರಾಣಿ ವಹಿಸಲು ಹಾಗೂ ಲೋಪವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ರಾಷ್ಟ್ರಮಟ್ಟದಲ್ಲಿ “ನಾಗರಿಕ ನಿಗರಾಣಿ ಆಯೋಗʼ ರಚಿಸುವುದು. ಇಡೀ ಮತ ಎಣಿಕೆಯ ಪ್ರಕ್ರಿಯೆ ಮೇಲೆ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟಿಗೆ ಅಪೀಲ್ ಮಾಡುವುದು. ರಾಜಕೀಯ ಪಕ್ಷಗಳಿಗೆ ಅವರ ಕರ್ತವ್ಯಗಳ ಮನವರಿಕೆ ಮಾಡಿಸಬೇಕು” ಎಂದು ಒತ್ತಾಯಿಸಿದರು.

ನಮ್ಮ ಬೇಡಿಕೆಗಳಿಗೆ ಹೊರತಾಗಿಯೂ ಫಲಿತಾಂಶದ ವೇಳೆ ದೊಡ್ಡ ಮಟ್ಟದ ಅವ್ಯವಹಾರಗಳಿಗೆ ಹಾಗೂ ಜನಾದೇಶ ಉಲ್ಲಂಘಿಸಲು ಸರ್ಕಾರ ರಚಿಸುವ ಪ್ರಯತ್ನಗಳು ನಡೆದರೆ ದೇಶವ್ಯಾಪಿ ದೊಡ್ಡ ಮಟ್ಟದಲ್ಲಿ ಸತ್ಯಾಗ್ರಹ ಹೂಡಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ ಚಲೋ | ಮನವಿ ಸ್ವೀಕರಿಸದ ಜಿಲ್ಲಾಧಿಕಾರಿ; ನೂರಾರು ಹೋರಾಟಗಾರರು ಡಿಸಿ ಕಚೇರಿಗೆ ಮುತ್ತಿಗೆ

ಈ ಸಂದರ್ಭದಲ್ಲಿನಾಗರಿಕ ಸಮಾಜದ ಪ್ರಮುಖರಾದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರ ಥಂಬೆ, ಎದ್ದೇಳು ಕರ್ನಾಟಕ ಜಿಲ್ಲಾ ಸಂಯೋಜಕ ಅಬ್ದುಲ್ ಖಾದರ್ ಸೇರಿದಂತೆ ಸಂಧ್ಯಾರಾಜ ಸ್ಯಾಮೂವೆಲ್, ಸಂತೋಷ ತೆಗನ್ನೂರ್, ರಾಜೇಂದ್ರ ರಾಜವಾಳ, ವಿಕ್ರಮ್ ತೇಜಸ್, ನಾಗೇಶ್ ಹರಳಯ್ಯ, ಭವಾನಿ ಪ್ರಸಾದ್, ಅಲ್ಲಾವುದ್ದಿನ್ ಮೊಹ್ಮದ್, ಗೀತಾ ಹೊಸಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...