ಮಹಾರಾಷ್ಟ್ರದಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆಯ ಮುನ್ಸೂಚನೆ : ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ

Date:

ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ತೇರನಾ, ಧನೆಗಾಂವ ಸೇರಿದಂತೆ ಇನ್ನಿತರ ಆಣೆಕಟ್ಟು ಭರ್ತಿಯಾಗಿದ್ದು, ಸದರಿ ಜಲಾಶಯಗಳಿಂದ ಮಾಂಜ್ರಾ ನದಿಗೆ ಆ.16 ರಂದು ಮಧ್ಯಾಹ್ನ ನೀರು ಹರಿಸುತ್ತಿರುವ ಬಗ್ಗೆ ಮುನ್ಸೂಚನೆ ಬಂದಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚಿಸಿದೆ

ʼಮಹಾರಾಷ್ಟ್ರದ ಜಲಾಶಯಗಳಿಂದ ನೀರು ಹರಿಸುತ್ತಿದ್ದು, ಹೀಗಾಗಿ ಹುಲಸೂರ ತಾಲೂಕಿನ ಕೊಂಗಳಿ ಬ್ಯಾರೇಜ್‌ ನೀರಿನ ಪ್ರಮಾಣ ನಿಯಂತ್ರದಲ್ಲಿರಿಸಿ ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲೆಯ ಎಲ್ಲಾ ತಾಲೂಕು ತಹಶೀಲ್ದಾರರು ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಜಿಲ್ಲೆಯಲ್ಲಿಆಗಸ್ಟ್‌ ತಿಂಗಳಲ್ಲಿ ಆಗುತ್ತಿರುವ ಭಾರಿ ಮಳೆಯಿಂದ ಕಾರಂಜಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಮಳೆ ಕಡಿಮೆ ಆಗದಿದ್ದಲ್ಲಿ ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಹರಿಸಲಾಗುವುದು. ಇದರಿಂದ ಮಾಂಜ್ರಾ ನದಿ ದಡಕ್ಕೆ ಹೊಂದಿಕೊಂಡಿರುವ ಗ್ರಾಮಗಳ ಗ್ರಾಮಸ್ಥರು, ರೈತರು ನದಿಗೆ ಇಳಿಯದಂತೆ ಹಾಗೂ ಜಾನುವಾರುಗಳನ್ನು ನದಿ ದಡದಿಂದ ಹಾದು ಹೋಗದಂತೆ ಎಚ್ಚರ ವಹಿಸುವುದು ಅತೀ ಅವಶ್ಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಸಹಿ ಇರುವ ಪ್ರಕಟಣೆಯಲ್ಲಿ ಶನಿವಾರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರಂಜಾ ಜಲಾಶಯ ಹಾಗೂ ಮಾಂಜ್ರಾ ನದಿಗೆ ಹೊಂದಿಕೊಂಡಿರುವ ಗ್ರಾಮಗಳ ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತಿ ಪಿಡಿಒಗಳು ಕೇಂದ್ರಸ್ಥಾನದಲ್ಲಿದ್ದು, ಡಂಗೂರು ಸಾರುವ ಮೂಲಕ ಸುತ್ತಲಿನ ಗ್ರಾಮಸ್ಥರಿಗೆ ಮುನ್ನೂಚನೆ ಮಾಹಿತಿ ತಿಳಿಸಬೇಕು. ಯಾವುದೇ ಅಹಿತಕರ ಘಟನೆಗಳನ್ನು ಸಂಭವಿಸದಂತೆ ಎಚ್ಚರವಹಿಸಬೇಕು. ಇಲ್ಲದಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ 31 ತಿಂಗಳಲ್ಲಿ 10,510 ಪೋಕ್ಸೋ ಪ್ರಕರಣ : 162 ಮಂದಿಗಷ್ಟೇ ಶಿಕ್ಷೆ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...