ಜನರ ಜೀವದ ಜೊತೆ ಜಲಸಂಪನ್ಮೂಲ ಸಚಿವರು ಚೆಲ್ಲಾಟವಾಡುತ್ತಿದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

Date:

  • ‘ನಮ್ಮ ಅಧಿಕಾರಿಗಳು ಕಾಟಾಚಾರಕ್ಕೆ ಸಭೆಯಲ್ಲಿ ಭಾಗಿಯಾಗುತ್ತಾರೆ’
  • ‘ದೇವೇಗೌಡರಿಗೆ ನಿಲ್ಲಲು ಆಗದೇ ಇದ್ದರೂ ಈ ಬಗ್ಗೆ ಮಾತನಾಡಿದ್ದಾರೆ’

ತಮಿಳುನಾಡಿಗೆ ಕಾವೇರಿ ನೀರು ಹರಿಸದೇ ಇದ್ದರೆ ಆದೇಶ ಉಲ್ಲಂಘನೆ ಆಗುತ್ತದೆ ಎಂದು ಜಲಸಂಪನ್ಮೂಲ ಸಚಿವರು ಹೇಳಿದ್ದಾರೆ. ಆ ಮೂಲಕ ಜನರ ಜೀವದ ಜೊತೆ ಸಚಿವರು ಚೆಲ್ಲಾಟವಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಿಡಬ್ಲ್ಯೂಎಂಎ ಆದೇಶ ವಿಚಾರ ಸಂಬಂಧ ರಾಮನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಮಳೆಯ ಕೊರತೆಯಿಂದ ನಮ್ಮ ರೈತರ ಬೆಳೆ ನಾಶವಾಗುತ್ತಿದೆ. ಕಾವೇರಿ ನೀರಿನ ಸಂಬಂಧ ನಡೆಯುವ ಸಭೆಗಳಲ್ಲಿ ತಮಿಳುನಾಡಿನ 10-15 ಅಧಿಕಾರಿಗಳು ಭಾಗಿಯಾದರೆ, ನಮ್ಮ ಅಧಿಕಾರಿಗಳು ಒಬ್ಬರೋ ಇಬ್ಬರೂ ಕಾಟಾಚಾರಕ್ಕೆ ಭಾಗಿಯಾಗುತ್ತಾರೆ” ಎಂದು ಕಿಡಿಕಾರಿದರು.

“ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಜನರ ಬದುಕು ಸರಿಪಡಿಸಬೇಕು ಅಂದರೆ ಕಠಿಣ ನಿರ್ಧಾರ ಮಾಡಬೇಕು. ಬ್ರಿಟಿಷರ ಕಾಲದಿಂದಲೂ ತಮಿಳುನಾಡಿನವರು ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀರಿನ ಹಂಚಿಕೆ ಕೊರತೆ ಬಗ್ಗೆ ದೇವೇಗೌಡರು ‌ನಿಲ್ಲೋಕಾಗದೇ ಇರುವ ಪರಿಸ್ಥಿತಿಯಲ್ಲೂ ರಾಜ್ಯದ ಬಗ್ಗೆ ಮಾತನಾಡಿದ್ದರು. ಆದರೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಎಲ್ಲಿ ಹೋಗಿದ್ದಾರೆ? ದೇವೇಗೌಡರು ಮಾತನಾಡಬೇಕಾದರೆ, ತಮಿಳುನಾಡು ಸದಸ್ಯರು ಪ್ರತಿಭಟಿಸಿದರು. ಅದನ್ನು ಕಂಡು ದೇವೇಗೌಡರು ಎದ್ದು ನಿಂತು ಮಾತಾನಾಡಿದ್ದು ಅವರ ಕಮಿಟ್ ಮೆಂಟ್ ತೋರಿಸುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಾವೇರಿ ವಿಷಯದಲ್ಲಿ ಸರ್ಕಾರ ತಪ್ಪು ಮಾಡುವ ಮೂಲಕ ಜನರನ್ನು ಇಕ್ಕಟ್ಟಿಗೆ ಸಿಲುಕಿಸಿದೆ: ಬೊಮ್ಮಾಯಿ

“ದೇವೇಗೌಡರು ಕಾವೇರಿ ವಿಚಾರಕ್ಕಲ್ಲ, ಮೈತ್ರಿ ಬಗ್ಗೆ ಡೆಲ್ಲಿಗೆ ಹೋಗಿದ್ದಾರೆ ಅಂತ ಹೇಳಿದ್ದಾರೆ. ನಿನ್ನೆ, ಮೊನ್ನೆ ಬಂದವರು ದೇವೇಗೌಡರ ಬಗ್ಗೆ ಮಾತನಾಡುತ್ತಾರೆ. ದೇವೇಗೌಡರೇ ಏಕಾಂಗಿ ಹೋರಾಟ ಮಾಡಬೇಕು. ಎಮರ್ಜೆನ್ಸಿ ಅರ್ಜಿ ಹಾಕಿ ಮಧ್ಯರಾತ್ರಿ ಕೋರ್ಟ್ ನಡೆದಿಲ್ವಾ? ಅದೇ ತರಹವೇ ಇದು ಎಮರ್ಜನ್ಸಿ ಅಂತ ಒಂದು ಅರ್ಜಿ ಹಾಕಿಸೋಕೆ ಆಗಿಲ್ಲ” ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

“ಪ್ರಾಧಿಕಾರಕ್ಕೆ ಏನಾದ್ರೂ ಪ್ರಶ್ನೆ ಕೇಳದ ಅಧಿಕಾರ ಕೊಟ್ಟಿದ್ದೀವಾ? ವಾಟರ್ ಮ್ಯಾನೇಜ್ ಮೆಂಟ್ ಹೇಳಿದರು ಅಂದ ತಕ್ಷಣ ನೀರು ಬಿಡೋದು. ಸರ್ಕಾರ ಬಂದಾಗಿನಿಂದ ನೋಡುತ್ತಿರುವೆ. ಇವರು ತಮಿಳುನಾಡಿಗೆ ನೀರು ಬಿಡುತ್ತಲೇ ಇದ್ದಾರೆ. ದೇವೇಗೌಡರೇ ಏಕಾಂಗಿ ಹೋರಾಟ ಮಾಡಬೇಕು. ಅದೇನೋ ಪಾದಯಾತ್ರೆ ಮಾಡಿದವರು ಇದ್ದಾರಲ್ಲ. ಅವರು ಯಾಕೆ ಮಾತಾಡೋಕೆ ಆಗಿಲ್ಲ” ಎಂದು ಡಿಕೆ ಶಿವಕುಮಾರ್‌ ವಿರುದ್ಧ ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...