ಕರಾವಳಿ ಭಾಗದಲ್ಲಿ ನೀರಿನ ಅಭಾವ; ಹಲವು ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ಥನೆ

Date:

ಕರಾವಳಿ ಭಾಗದಲ್ಲಿ ನೀರು ಕೊರತೆ ಉಂಟಾಗಿದ್ದು, ದೇವಸ್ಥಾನಗಳಲ್ಲಿ ಅಭಿಷೇಕಕ್ಕೂ ನೀರಿಲ್ಲದೆ ಜಲಕ್ಷಾಮ ಎದುರಾಗಿದೆ. ಬಹುತೇಕ ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ತನೆ ಮಾಡುತ್ತಿರುವುದೂ ಕಂಡುಬಂದಿದೆ.

ಮಳೆ ಆರಂಭವಾಗಬೇಕಾದ ಹೊತ್ತಲ್ಲಿ ರಣಬಿಸಿಲು ಸುಡುತ್ತಿರುವುದರಿಂದ ಶಾಲೆ, ಕಾಲೇಜುಗಳಿಗೆ ತೆರಳುವ ಮಕ್ಕಳು ಬಿಸಿಲಿಗೆ ಕೊಡೆ ಹಿಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಬಳಲಿ ಶಾಲೆಗೆ ತೆರಳಿದರೆ ಕುಡಿಯಲು ನೀರಿಲ್ಲದ ಪರಿಸ್ತಿತಿ ಇದೆ.

“ನಿತ್ಯ ಅನ್ನಪ್ರಸಾದ ನೀಡುವ ದೇವಸ್ಥಾನಗಳು ಪ್ರಯಾಸಪಟ್ಟು ಪ್ರತ್ಯೇಕವಾಗಿ ನೀರಿನ ವ್ಯವಸ್ಥೆ ಮಾಡಿಕೊಂಡಿರುವುದನ್ನು ಹೊರತುಪಡಿಸಿದರೆ, ನದಿಯನ್ನೇ ನಂಬಿಕೊಂಡಿರುವ ಕಟೀಲು ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ಸಮಸ್ಯೆ ಉಂಟಾಗಿದೆ” ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬತ್ತಿ ಹೋದ ನಂದಿನಿ

ಮಳೆಗಾಲವಿದ್ದಾಗ ನಂದಿನಿ ಹೊಳೆ ತುಂಬಿ ಹರಿಯುವುದರಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನವು ದ್ವೀಪದಂತೆ ಕಂಗೊಳಿಸುತ್ತಿತ್ತು. ಆದರೀಗ, ನಂದಿನಿ ಬತ್ತಿ ಹೋಗಿರುವುದರಿಂದ ದೇವಾಲಯದ ಚಿತ್ರಣವೇ ಬೇರೆಯಾಗಿದೆ.

ಕಟೀಲು ದೇವಸ್ಥಾನಕ್ಕೆ ಪ್ರತಿನಿತ್ಯ ಆಗಮಿಸುವ ಭಕ್ತರಿಗಾಗಿ ತೀರ್ಥ, ಅನ್ನಪ್ರಸಾದಕ್ಕೆ ನದಿ ನೀರು ಬಳಕೆಯಾಗುತ್ತದೆ. ಆದರೆ ಈಗ ನದಿಯಲ್ಲಿ ನೀರಿಲ್ಲ. ಈಗಿರುವ ಸಣ್ಣ ಪ್ರಮಾಣದ ನೀರು ಅದ್ಯಾವುದಕ್ಕೂ ಸಾಕಾಗುತ್ತಿಲ್ಲ. ಹೀಗಾಗಿ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಯಾಗಿದೆ.

ಮೂರು ಹೊತ್ತು ದೇವಸ್ಥಾನದಲ್ಲಿ ಅನ್ನಪ್ರಸಾದ ವಿತರಣೆಯಾಗುವ ಕಾರಣ, ಸ್ಟೀಲ್ ಬಟ್ಟಲುಗಳಲ್ಲಿ ಊಟ ವಿತರಿಸಲಾಗುತ್ತಿತ್ತು. ಇದೀಗ ಅದರ ಬದಲಿಗೆ ಅಡಕೆ ಹಾಳೆ ತಟ್ಟೆಯನ್ನು ಉಪಯೋಗಿಸಲಾಗುತ್ತಿದೆ. ಇದರಿಂದ ಎರಡು ಲಾಭವಿದೆ. ಮೊದಲನೆಯದ್ದು ನೀರಿನ ಉಳಿತಾಯ, ಎರಡನೆಯದ್ದು ಪರಿಸರ ಸಂರಕ್ಷಣೆ. ಹಾಳೆ ತಟ್ಟೆಗಳು ಪ್ಲಾಸ್ಟಿಕ್‌ನಂತಲ್ಲ. ಅದನ್ನು ವಿಲೇವಾರಿ ಮಾಡಲು ಸುಲಭ. ಹೀಗಾಗಿ ಊಟ ನೀಡುವ ಸಂದರ್ಭ ನೀರಿನ ಬಳಕೆ ಕಡಿಮೆ ಮಾಡಬಹುದಾದರೂ ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ಅಭಿಷೇಕ, ತೀರ್ಥ ಇತ್ಯಾದಿಗಳಿಗೆ ನೀರು ಬೇಕೇ ಬೇಕು. ಆದರೆ ಅದಕ್ಕೂ ಅದ್ವಾನವಾಗಿದೆ.

ಕರಾವಳಿಯಲ್ಲಿ ಇಂಥ ಬಹುತೇಕ ಸಣ್ಣಪುಟ್ಟ ನದಿ, ಹೊಳೆಯನ್ನು ನಂಬಿ ಇರುವ ದೇವಸ್ಥಾನಗಳಲ್ಲಿ ಇದೇ ಪರಿಸ್ಥಿತಿ ಎದುರಾಗಿದೆ. ಅಲ್ಲಿ ಭಕ್ತರ ಸಂಖ್ಯೆ ವಿರಳವಾಗಿರುವ ಕಾರಣ ದೊಡ್ಡ ಮಟ್ಟಿನ ಸಮಸ್ಯೆ ತಲೆದೋರಿಲ್ಲ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಬಿಪರ್‌ಜಾಯ್ ಚಂಡಮಾರುತ; ಅರಬ್ಬಿ ಸಮುದ್ರ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಕಟೀಲಿನಲ್ಲಿ ಪದವಿ ಕಾಲೇಜು ಹೊರತುಪಡಿಸಿ ಒಂದನೇ ತರಗತಿಯಿಂದ ಪದವಿಪೂರ್ವ ಕಾಲೇಜಿನ ವರೆಗೆ ಮದ್ಯಾಹ್ನದವರೆಗೆ ತರಗತಿಗಳು ನಡೆಸಲಾಗುತ್ತಿದೆ. ದೇವಸ್ಥಾನದಲ್ಲಿ ಮೂರು ಬಾವಿ ಮತ್ತು ಮೂರು ಬೋರ್‌ವೆಲ್‌ಗಳು ಇವೆ. ಆದರೂ ನೀರು ಸಂಪೂರ್ಣವಾಗಿ ಬತ್ತಿದೆ. ಕಳೆದ ಏಪ್ರಿಲ್‌ನಲ್ಲಿ ನಡೆದ ಜಾತ್ರಾಮಹೋತ್ಸವದ ಸಂದರ್ಭದಲ್ಲೂ ನೀರಿನ ಅಭಾವ ಉಂಟಾಗಿತ್ತು.

ಕರಾವಳಿಯಲ್ಲಿ ಪ್ರತಿ ಬಾರಿ ಇಂಥ ಬರಗಾಲ ಬಂದಾಗ ಮಳೆಗಾಗಿ ದೇವರ ಮೊರೆಹೋಗುವುದು ವಾಡಿಕೆ. ಈ ಬಾರಿಯೂ ನಂದಾವರ, ಸಜಿಪ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...