ಚಿಕ್ಕನಾಯಕನಹಳ್ಳಿ | ಜಲಜೀವನ್ ಮಿಷನ್ ಅನುಷ್ಠಾನಕ್ಕೆ ನೀರುಗಂಟಿಗಳೇ ಸೂತ್ರಧಾರಿಗಳು: ಕಾಂತರಾಜು

Date:

ಗ್ರಾಮೀಣ ಪ್ರದೇಶಗಳಲ್ಲಿ ನೀರನ್ನು ಸರಿಯಾದ ಪ್ರಮಾಣದಲ್ಲಿ ಸಮರ್ಪಕವಾಗಿ ಒದಗಿಸಿಕೊಡುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಜಲಜೀವನ್ ಮಿಷನ್ ಯೋಜನೆಯ ನಿಜವಾದ ಸೂತ್ರಧಾರಿಗಳು ನೀರುಗಂಟಿಗಳು ಎಂದು ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಕಾಂತರಾಜು ತಿಳಿಸಿದರು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ತೀ.ನಂ.ಶ್ರೀ ಭವನದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಿಲ್ಲಾ ಪಂಚಾಯಿತಿ ತುಮಕೂರು ಹಾಗೂ ಸ್ನೇಹ ಜೀವನ ಫೌಂಡೇಶನ್ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕಾರ್ಯಕರ್ತರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಲಜೀವನ್ ಮಿಷನ್ ಯೋಜನಾ ಅನುಷ್ಠಾನದಲ್ಲಿ ನೀರುಗಂಟಿಗಳ ಪಾತ್ರ ದೊಡ್ಡದಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಪ್ರತಿ ದಿನ ನೀರನ್ನು ಪೂರೈಕೆ ಮಾಡುವ ಕರ್ತವ್ಯ ನೀರುಗಂಟಿಗಳದ್ದೇ ಆಗಿರುತ್ತದೆ. ಆದ ಕಾರಣ ನಿಮ್ಮ ನಿಮ್ಮ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ಸಮಯದಲ್ಲಿ ಎಚ್ಚ ರವಹಿಸಿ ಕೆಲಸದಲ್ಲಿ ಪಾಲ್ಗೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ತರಬೇತಿಯಲ್ಲಿ ನೀರುಗಂಟಿಗಳಿಗೆ ತರಬೇತಿ ನೀಡಿದ ಜೆ.ಇ ತೀರ್ಥರಾಮ್ ಮತ್ತು ಗುರುಪ್ರಸಾದ್ ಅವರು ಜಲಜೀವನ್ ಮಿಷನ್ ಯೋಜನೆಯಲ್ಲಿ ಅಳವಡಿಸಲಾಗುತ್ತಿರುವ ಹೆಚ್ ಡಿ ಪಿ ಇ ಪೈಪ್ ನ ಗುಣ ಮಟ್ಟ, ನೀರಿನ ವೇಗವನ್ನು ಸರಿದೂಗಿಸುವ ಫ್ಲೋ ಕಂಟ್ರೋಲ್ ವಾಲ್ವ್, ವಿದ್ಯುತ್ ಅಳವಡಿಸಿ ಮಾಡುವ ಪೈಪ್ ಲೈನ್ ವಿಧಾನ, ಮೀಟರ್ ಅಳವಡಿಕೆಯ ಮಹತ್ವ,ಕಾರ್ಯಾತ್ಮಕ ಗೃಹ ನಳ ಸಂಪರ್ಕದಿಂದ ನೀರಿನ ಮಿತ ಬಳಕೆ ಮತ್ತು ವ್ಯಯವಾಗುತ್ತಿರುವ ನೀರಿನ ಉಳಿತಾಯಕ್ಕೆ ಜಲಜೀವನ್ ಮಿಷನ್ ಪೂರಕವಾಗುತ್ತಿದೆ ಎಂಬದುದನ್ನು ಪ್ರಾಯೋಗಿಕವಾಗಿ ವೇದಿಕೆಯಲ್ಲಿ ಪ್ರಸ್ತುತ ಪಡಿಸಿದರು.

“ದಿನದಿಂದ ದಿನಕ್ಕೆ ಕುಡಿಯುವ ನೀರು ಕ್ಷೀಣಿಸುತ್ತಿರುವುದರಿಂದ ಇರುವ ನೀರನ್ನು ಸದ್ಬಳಕೆ ಮಾಡಿಕೊಂಡು ಮುಂದಿನ ಪೀಳಿಗೆಗೆ ನೀರನ್ನು ಉಳಿಸುವ ಜವಾಬ್ದಾರಿ ಎಲ್ಲ ಕುಟುಂಬದ ಪ್ರತಿಯೊಬ್ಬ ಸದಸ್ಯರದ್ದಾಗಬೇಕೆಂಬುದೇ ಜಲಜೀವನ್ ಮಿಷನ್ ಯೋಜನೆಯ ಆಶಯ. ಈ ಯೋಜನೆಯಿಂದ ಪ್ರತೀ ಕುಟುಂಬದ ಸದಸ್ಯರಿಗೆ ನೀರು ಸಮರ್ಪಕವಾಗಿ ಪೂರಕವಾಗಬೇಕಾದರೆ ಎಲ್ಲಾ ಗ್ರಾಮ ಪಂಚಾಯಿತಿಯ ನೀರುಗಂಟಿಗಳು ಸೂತ್ರಧಾರಿಗಳಂತೆ ಕೆಲಸ ಮಾಡಬೇಕು ಎಂದು ಕಾಂತರಾಜು ತಿಳಿಸಿದರು.

ಇದನ್ನು ಓದಿದ್ದೀರಾ? ಕೋಲಾರ | ಕೋಚಿಮುಲ್ ಕಾಂಗ್ರೆಸ್ ಸರ್ಕಾರದ ಕೃಪಾಪೋಷಿತ ನಾಟಕ ಮಂಡಳಿ : ಕೆ ವಿ ನಾಗರಾಜು ಆರೋಪ

ತರಬೇತಿಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೊಡ್ಡಸಿದ್ದಯ್ಯ ಡಿ, ಸಹಾಯಕ ನಿರ್ದೇಶಕ ಕಾಂತರಾಜು ಎಂ.ಸಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಉಮಾ ಮಹೇಶ್ ಡಿ, ಸಹಾಯಕ ಎಂಜಿನಿಯರ್ ಅಮರ್, ವಿಭಾಗಾಧಿಕಾರಿಗಳಾದ ಗುರುಪ್ರಸಾದ್ ಎನ್, ತೀರ್ಥರಾಮ್ ಎನ್ ಶಶಿಕುಮಾರ್ ಎನ್ .ಎಸ್, ಮಾಧುರಿ, ಅನುಷ್ಠಾನ ಬೆಂಬಲ ಸಂಸ್ಥೆಯ ಸಿಬ್ಬಂದಿ, ಮಾಹಿತಿ ಶಿಕ್ಷಣ ಹಾಗೂ ಸಂವಹನಾಧಿಕಾರಿ ಮಾರುತೇಶ್ ಪಿ.ಎಲ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...