ವಯನಾಡ್ ಭೂಕುಸಿತದಲ್ಲಿ ಸಿಲುಕಿದ ಕೆಆರ್‌ಪೇಟೆ ಕುಟುಂಬ

Date:

ಕೇರಳದ ವಯನಾಡಿನ ಭೂಕುಸಿತದಲ್ಲಿ ಮಂಡ್ಯ ಜಿಲ್ಲೆ, ಕೆಆರ್‌ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಕುಟುಂಬ ಸಿಲುಕಿಕೊಂಡಿದೆ. ಈ ಪೈಕಿ ಇಬ್ಬರು ಮೃತಪಟ್ಟಿದ್ದು, ಮೂವರು ಅಪಾಯಕ್ಕೆ ಸಿಲುಕಿದ್ದಾರೆ.

ಜಗದೀಶ್ ಮತ್ತು ಕುಳ್ಳಮ್ಮ ದಂಪತಿ ಪುತ್ರಿ ಝಾನ್ಸಿರಾಣಿ, ಅಳಿಯ ಅನಿಲ್‌ಕುಮಾರ್, ಈತನ ತಂದೆ ದೇವರಾಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ದುರಾದೃಷ್ಟವಶಾತ್ ದುರಂತದಲ್ಲಿ ಮೊಮ್ಮಗ ನಿಹಾಲ್ (3), ಅನಿಲ್‌ಕುಮಾರ್ ತಾಯಿ ಲೀಲಾವತಿ (55) ಸಾವಿಗೀಡಾಗಿದ್ದಾರೆ.

ನಂಜನಗೂಡು ತಾಲೂಕಿನ ಸರಗೂರು ಗ್ರಾಮದ ಅನಿಲ್‌ಕುಮಾರ್ ಎಂಬುವರಿಗೆ 2020ರಲ್ಲಿ ಮಗಳು ಝಾನ್ಸಿರಾಣಿಯನ್ನು ವಿವಾಹ ಮಾಡಿಕೊಡಲಾಗಿತ್ತು. ಅವರ ಕುಟುಂಬ ಹಲವು ವರ್ಷಗಳಿಂದ ಕೇರಳದ ಮುಂಡಕಾಯಿ ಗ್ರಾಮದಲ್ಲಿ ಬದುಕು ಕಟ್ಟಿಕೊಂಡಿದ್ದರು. ಅನಿಲ್‌ಕುಮಾರ್ ಜೀಪ್ ಚಾಲಕ ವೃತ್ತಿ ಮಾಡುತ್ತಿದ್ದರು. ಮುಂಡಕಾಯಿ ಗ್ರಾಮದಲ್ಲಿ ಸೋಮವಾರ ರಾತ್ರಿ ಭೂಕುಸಿತದಲ್ಲಿ ಕುಟುಂಬ ಸದಸ್ಯರು ಸಿಲುಕಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಯನಾಡ್ ಭೂಕುಸಿತ | ಮೃತರ ಸಂಖ್ಯೆ 143ಕ್ಕೆ ಏರಿಕೆ; ಕರ್ನಾಟಕದ ಆರು ಮಂದಿ ಸಾವು

ಮಗಳು, ಅಳಿಯ, ಅಳಿಯನ ತಂದೆಯನ್ನು ಕಾರ್ಯಾಚರಣೆ ಮಾಡಿ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಇತ್ತ ಮೊಮ್ಮಗ, ಅಳಿಯನ ತಾಯಿ ಭೂಕುಸಿತದಿಂದ ಸಾವನ್ನಪ್ಪಿದ್ದಾರೆ.

ಇತ್ತ ಮಗಳ ಕುಟುಂಬದಲ್ಲಿ ಎದುರಾಗಿರುವ ಅವಘಡಕ್ಕೆ ತಂದೆ ಕುಟುಂಬದಲ್ಲಿ ಆಕ್ರಂದನ ಮುಗಿಲುಮುಟ್ಟಿದೆ‌. ಕತ್ತರಘಟ್ಟ ಗ್ರಾಮದಲ್ಲಿ ಮೌನ ಆವರಿಸಿದೆ. ಇನ್ನು ಮಗಳು ಮತ್ತವರ ಕುಟುಂಬದ ರಕ್ಷಣೆಗೆಂದು ಕೇರಳಕ್ಕೆ ತೆರಳಿದ್ದಾರೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

ಕೇರಳದ ವಯನಾಡ್ ಭೂಕುಸಿತದಲ್ಲಿ ಮೃತರ ಸಂಖ್ಯೆಯು ಏರಿಕೆಯಾಗುತ್ತಲೇ ಇದ್ದು ಕರ್ನಾಟಕದ ಆರು ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಯನಾಡ್ ಭೂಕುಸಿತದಿಂದಾಗಿ ಈವರೆಗೆ 143 ಮಂದಿ ಸಾವನ್ನಪ್ಪಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...