ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

Date:

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ ಅದನ್ನು ನಂಬಿ ಈವರೆಗೆ ಹೋರಾಟ ಮಾಡುತ್ತಿದ್ದೇವೆ ಎಂದು ಸಾಮಾಜಿಕ ಹೋರಾಟಗಾರ ಕೆ.ಫಣಿರಾಜ್ ವಿಷಾದ ವ್ಯಕ್ತಪಡಿಸಿದರು.

‘ಮೇ ಸಾಹಿತ್ಯ ಮೇಳ’ದ ಅಂಗವಾಗಿ ಶನಿವಾರ ನಡೆದ ‘ಸಂವಿಧಾನದ ಚಿಂತನೆಗಳುʼ ಕುರಿತ ಮೊದಲ ಗೋಷ್ಠಿಯಲ್ಲಿ ʼಭಾರತದಲ್ಲಿನ ಕೋಮುರಾಜಕಾರಣದ ಇತಿಹಾಸʼದ ಕುರಿತು ಮಾತನಾಡಿ, “ಸಂಘ ಪರಿವಾರವು ಎಲ್ಲ ವಲಯವನ್ನೂ ವ್ಯಾಪಿಸಿದ್ದು, ಈವರೆಗೆ ಆಎಸ್‌ಎಸ್ 75 ಸಂಘಟನೆಗಳನ್ನು ಸ್ಥಾಪಿಸಿದೆ. ಇದರ ಪರಿಣಾಮವಾಗಿ ಹಿಂದೂ ರಾಷ್ಟ್ರವಾದದ ಪರಿಕಲ್ಪನೆ ಎಲ್ಲೆಡೆ ಬೇರೂರಿದೆ. ಹಿಂದೂತ್ವ ಯಾವ ಬಗೆಯಲ್ಲಿ ಎಲ್ಲ ವಲಯಗಳನ್ನು ಬಾಧಿಸುತ್ತಿದೆ ಎಂಬುದನ್ನು ಜನರಿಗೆ ತಿಳಿಸಬೇಕಿದೆ” ಎಂದು ಹೇಳಿದರು.

“ಮತೀಯ ಮತ್ತು ಜಮೀನ್ದಾರಿ ವ್ಯವಸ್ಥೆ ಪರ ಇರುವ ಸಂಘ ಪರಿವಾರ, ಆರಂಭದಿಂದಲೇ ಸಂವಿಧಾನದ ವಿರೋಧಿ ಆಶಯಗಳನ್ನು ಹೊಂದಿದೆ. ಮುಸ್ಲಿಂ, ಕ್ರಿಶ್ಚಿಯನ್ನರ ಬಗ್ಗೆ ಸಮಾಜದಲ್ಲಿ ಭಯ ಮೂಡಿಸಿ, ಹಿಂದೂಗಳನ್ನು ಒಗ್ಗೂಡಿಸುವ ತಂತ್ರಗಾರಿಕೆಯನ್ನು ಅದು ಅನುಸರಿಸುತ್ತಿದೆ. 1940ರಲ್ಲಿ ನೂರು ಶಾಖೆಗಳನ್ನು ಹೊಂದಿದ್ದ ಆರ್‌ಎಸ್‌ಎಸ್, 2015ರ ಹೊತ್ತಿಗೆ 55,000 ಶಾಖೆಗಳನ್ನು ತೆರೆದಿದೆ. ನಿರಂತರವಾಗಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ವಿರುದ್ಧ ವಿದ್ರೋಹದ ಹೋರಾಟ ನಡೆಸುತ್ತಿರುವ ಕೆಳವರ್ಗದ ಸಂಘ ಪರಿವಾರದ ಕೆಲಸಗಳು ಮೇಲ್ನೋಟಕ್ಕೆ ಕಾಣುವುದಿಲ್ಲ. ಅದು ತಳಮಟ್ಟದಲ್ಲಿ ಕೆಲಸ ಮಾಡುತ್ತಿದೆ” ಎಂದು ವಿಶ್ಲೇಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಲಿತ, ಬೌದ್ಧ, ಮುಸ್ಲಿಂ ಘಟಕಗಳನ್ನು ಸ್ಥಾಪಿಸಿರುವ ಆರ್‌ಎಸ್‌ಎಸ್, ಕಾರ್ಮಿಕ ಹಾಗೂ ಶಿಕ್ಷಣ ವಲಯಕ್ಕೂ ಪ್ರವೇಶಿಸಿದೆ. ಅದರಲ್ಲೂ ಕೆಳವರ್ಗದ ಯುವ ಪೀಳಿಗೆಯ ತಲೆಯಲ್ಲಿ ಹಿಂದೂ ರಾಷ್ಟ್ರವಾದಿ ಯೋಚನಾಲಹರಿಯನ್ನು ತುಂಬಿ, ಹೋರಾಟಕ್ಕೂ ಆ ವರ್ಗದ ಯುವಕ- ಯುವತಿಯರನ್ನೇ ಕಳಿಸುವ ತಂತ್ರಗಾರಿಕೆ ಸಂಘ ಪರಿವಾರ ಹೊಂದಿದೆ. ತಳಸಮುದಾಯದ ಯುವಕನೊಬ್ಬನನ್ನು ಹೋರಾಟಕ್ಕೆ ಹಚ್ಚುವ ಆ ಮೂಲಕ ಹಿಂದೂ ರಾಷ್ಟ್ರವಾದವನ್ನು ಮತ್ತಷ್ಟು ಪ್ರಖರಗೊಳಿಸುವ ಹುನ್ನಾರವು ʼಕಾಂತಾರʼ ಚಿತ್ರದ ಮೂಲಕ ಅನಾವರಣಗೊಂಡಿದೆ” ಎಂದು ಟೀಕಿಸಿದರು.

ʼಸಂವಿಧಾನ ಪೀಠಿಕಾ ಭಾಗ, ಆದರ್ಶ- ಅವಲೋಕನʼ ಕುರಿತು ಹಿರಿಯ ನ್ಯಾಯವಾದಿ ಮೋಹನ ಕಾತರಕಿ ಮಾತನಾಡಿ, “ಹಿಂದೂ ಎಂಬ ಪದ ಅಥವಾ ಧರ್ಮವು ಬಿಜೆಪಿ ಅಥವಾ ಸಂಘ ಪರಿವಾರದ ಆಸ್ತಿಯಲ್ಲ. ಭಾರತದ ಸಂವಿಧಾನ ಒಂದು ವೇಳೆ ಒಬಿಸಿ ಅಥವಾ ದಲಿತರಿಗೆ ಸವಲತ್ತು ಕೊಟ್ಟಿರದಿದ್ದರೆ, ಹಿಂದೂ ಧರ್ಮ ಉಳಿಯುತ್ತಿರಲಿಲ್ಲ. ಆ ಬಗ್ಗೆಯೂ ಯೋಚಿಸಬೇಕು. ಹಿಂದೂ ಧರ್ಮದ ಬಗ್ಗೆ ಬಿಜೆಪಿಗೆ ಒಲವಿಲ್ಲ. ಅದೊಂದು ಮತಗಳಿಕೆಯ ಅಸ್ತ್ರವಷ್ಟೇ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಗುಜರಾತ್ | ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಭಾರೀ ಬೆಂಕಿ ಅವಘಡ; 20 ಮಂದಿ ಮೃತ್ಯು

ಡಾ. ರಾಜಶೇಖರ ನಾರನಾಳ, ಸವಿತಾ ಅಂಗಡಿ, ಹಿರಿಯ ಸಾಹಿತಿ ಎಚ್.ಎಸ್.ಪಾಟೀಲ ಉಪಸ್ಥಿತರಿದ್ದರು. ಪತ್ರಕರ್ತ ಶರಣಪ್ಪ ಬಾಚಲಾಪುರ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...