ಪದವೀಧರ ಯುವಕ-ಯುವತಿಯರಿಗೆ ರಾಜಕೀಯ ತರಬೇತಿ ನೀಡುತ್ತೇವೆ: ಸಭಾಧ್ಯಕ್ಷ ಯು ಟಿ ಖಾದರ್‌

Date:

  • ‘ಸಭಾಪತಿ ಬಸವರಾಜ ಹೊರಟ್ಟಿ ಅವರ ಜೊತೆಗೂ ಚರ್ಚಿಸಿದ್ದೇನೆ’
  • ಸೂಕ್ತ ಸ್ಥಳದಲ್ಲಿ ಸಂಸ್ಥೆಯನ್ನು ಆರಂಭಿಸುತ್ತೇವೆ: ಯು ಟಿ ಖಾದರ್‌

ಪದವೀಧರ ಯುವಕ ಮತ್ತು ಯುವತಿಯರಿಗೆ ಒಂದು ವರ್ಷದ ರಾಜಕೀಯ ತರಬೇತಿ ನೀಡುವ ಸಂಸ್ಥೆಯನ್ನು ಸ್ಥಾಪಿಸುವ ಪ್ರಸ್ತಾಪ ಇದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿ, “ಇಂತಹ ಪ್ರಸ್ತಾವ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಪುಣೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯೊಂದು ಇಂತಹ ತರಬೇತಿ ನೀಡುತ್ತಿದೆ. ಬೇರೆಲ್ಲೂ ರಾಜಕೀಯ ತರಬೇತಿ ನೀಡುವ ಸಂಸ್ಥೆ ಇಲ್ಲ. ನಮ್ಮಲ್ಲೂ ಇದು ಆರಂಭವಾಗಬೇಕು” ಎಂದರು.

“ರಾಜಕೀಯ ತರಬೇತಿ ಸಂಸ್ಥೆ ಆರಂಭಿಸುವ ಕುರಿತು ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ಜೊತೆಗೂ ಚರ್ಚಿಸಿದ್ದೇನೆ. ಸೂಕ್ತ ಸ್ಥಳದಲ್ಲಿ ಸಂಸ್ಥೆಯನ್ನು ಆರಂಭಿಸುತ್ತೇವೆ. ಇದಕ್ಕೆ ಪ್ರಾಂಶುಪಾಲರು ಮತ್ತು ಬೋಧಕ ಸಿಬ್ಬಂದಿ ಇರುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರು ತಿಂಗಳ ತರಬೇತಿ ಹಾಗೂ ಪ್ರಾಯೋಗಿಕ ಅನುಭವಕ್ಕಾಗಿ ಆರು ತಿಂಗಳ ಇಂಟರ್ನ್ ಷಿಪ್‌ಗೆ ಅವಕಾಶ ಕಲ್ಪಿಸುತ್ತೇವೆ. ಶಾಸಕರು, ಸಚಿವರು, ನನ್ನ ಕಚೇರಿಯೂ ಸೇರಿ ವಿವಿಧ ಸರ್ಕಾರಿ ಕಚೇರಿಗಳಲ್ಲೂ ಇಂಟರ್ನ ಷಿಪ್ ಮಾಡಲು ಅವಕಾಶ ನೀಡಬಹುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನತಂತ್ರವೆಂಬುದು ಭಾರತದ ವಂಶವಾಹಿಯಲ್ಲಿದೆಯೇ ಮೋದಿಯವರೇ, ಹೌದೇ?

“ಮುತ್ಸದ್ದಿ ರಾಜಕಾರಣಿಗಳು, ಐಎಎಸ್ ಅಧಿಕಾರಿಗಳ ಜೊತೆಗೂ ಆಗಾಗ ಸಂವಾದ ಏರ್ಪಡಿಸಿ, ವಿದ್ಯಾರ್ಥಿಗಳು ಅವರ ಅನುಭವದ ಪ್ರಯೋಜನ ಪಡೆಯಲು ಅವಕಾಶ ಕಲ್ಪಿಸುತ್ತೇವೆ. ಇನ್ನಷ್ಟು ಸಮಾಲೋಚನೆ ನಡೆಸಿ ಸಂಸ್ಥೆಯನ್ನು ಕಾರ್ಯರೂಪಕ್ಕೆ ತರುತ್ತೇವೆ” ಎಂದರು.

“ಇದಕ್ಕಾಗಿ ಪುಣೆಯ ಸಂಸ್ಥೆಯ ನೆರವು ಪಡೆದು ಪಠ್ಯಕ್ರಮವನ್ನು ಶೀಘ್ರವೇ ರೂಪಿಸಲಾಗುತ್ತದೆ. ಭವಿಷ್ಯದಲ್ಲಿ ಉತ್ತಮ ರಾಜಕಾರಣಿಗಳನ್ನು ರೂಪಿಸಲು ಈ ಸಂಸ್ಥೆ ನೆರವಾಗಬೇಕು ಎಂಬ ಆಶಯ ನಮ್ಮದು” ಎಂದು ವಿವರಿಸಿದರು.

ಜುಲೈ 3ರಿಂದ ಅಧಿವೇಶನ

“ಜುಲೈ 3ರಿಂದ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ. ಅಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಜಂಟಿ ಸದನ ಉದ್ದೇಶಿಸಿ ಮಾತನಾಡುತ್ತಾರೆ. ಜುಲೈ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಲಿದ್ದಾರೆ” ಎಂದು ಇದೇ ವೇಳೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...