ಉಡುಪಿ | ಶೌಚಾಲಯದಲ್ಲಿ ಹಿಡನ್‌ ಕ್ಯಾಮರಾ ಇರಲಿಲ್ಲ, ಇದು ಬ್ರೇಕಿಂಗ್ ನ್ಯೂಸ್ ಅಲ್ಲ: ಖುಷ್ಬೂ ಸುಂದರ್‌ ಸ್ಪಷ್ಟನೆ

Date:

  • ಕೋಮು ಬಣ್ಣಕ್ಕೆ ತಿರುಗಿರುವ ಉಡುಪಿ ಕಾಲೇಜಿನ ವಿಡಿಯೋ ಪ್ರಕರಣ
  • ‘ಇದು ಬ್ರೇಕಿಂಗ್ ನ್ಯೂಸ್ ಅಲ್ಲ’ ಎಂದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ

ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಉಡುಪಿಗೆ ಆಗಮಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಪ್ರತಿನಿಧಿ ಖುಷ್ಬೂ ಸುಂದರ್‌, ಶೌಚಾಲಯದಲ್ಲಿ ಯಾವುದೇ ಹಿಡನ್‌ ಕ್ಯಾಮೆರಾಗಳು ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿ ಪೊಲೀಸರೊಂದಿಗೆ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ ಇದೆ ಎಂಬ ವದಂತಿ ಹರಡಿದೆ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಸುಳ್ಳು ವೀಡಿಯೋ ಹರಿದಾಡುತ್ತಿದೆ. ಇದೊಂದು ಶೈಕ್ಷಣಿಕ ಸಂಸ್ಥೆ. ಹಾಗಾಗಿ ಹಿಡನ್‌ ಕ್ಯಾಮೆರಾಗಳು ಇರಲು ಸಾಧ್ಯವಿಲ್ಲ ಎಂದರು.

ಯಾರಾದರೂ ಆರೋಪ ಮಾಡಿದ್ದಾರೆ ಎಂಬ ಕಾರಣಕ್ಕೆ ಅದನ್ನು ನಾವು ಪುರಸ್ಕರಿಸಲು ಆಗಲ್ಲ. ನಮಗೆ ದಾಖಲೆಗಳು ಬೇಕು. ಅದಕ್ಕಾಗಿ ತಾಳ್ಮೆಯಿಂದ ಕಾಯಬೇಕು ಎಂದು ಖುಷ್ಬೂ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ ಇದೆ ಎಂಬುದು ಕೇವಲ ವದಂತಿಯಷ್ಟೇ. ಮಾಧ್ಯಮದವರೂ ಕೂಡ ಇದೇ ವದಂತಿಯನ್ನು ನಂಬಿಕೊಂಡು ನನ್ನಲ್ಲಿ ಪ್ರಶ್ನೆ ಕೇಳುತ್ತಿದ್ದಾರೆ. ಇದು ಬೇಸರ ತರಿಸುತ್ತಿದೆ. ಈ ಪ್ರಕರಣದ ಕುರಿತು ಈಗಲೇ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.

ಇದನ್ನು ಓದಿದ್ದೀರಾ? ಉಡುಪಿ ವಿವಾದ | ಘಟನೆ ನಡೆದಿಲ್ಲ ಅಂತ ಎಲ್ಲೂ ಹೇಳಿಲ್ಲ: ಎಬಿವಿಪಿ ಕಾರ್ಯಕರ್ತರಿಗೆ ಎಸ್‌ಪಿ ಸ್ಪಷ್ಟನೆ

ಕಾಲೇಜಿನಲ್ಲಿ ನಾಲ್ಕು ಗಂಟೆ ತಪಾಸಣೆ ನಡೆಸಿಯೂ ಏನೂ ಸಿಕ್ಕಿಲ್ಲವೇ ಎಂದು ಕೇಳಿದ ಪತ್ರಕರ್ತನಿಗೆ ಉತ್ತರ ನೀಡಿದ ಖುಷ್ಬೂ ಸುಂದರ್, ‘ಇದು ಬ್ರೇಕಿಂಗ್ ನ್ಯೂಸ್ ಅಲ್ಲ. ಇದು ವಿದ್ಯಾರ್ಥಿಗಳ ಬಗೆಗಿನ ವಿಷಯ. ಮಹಿಳೆಯರ ವಿಚಾರ. ಎಲ್ಲರೂ ತಾಳ್ಮೆಯಿಂದ ವರ್ತಿಸಬೇಕು. ಇದು ಎರಡು ನಿಮಿಷದಲ್ಲಿ ತಯಾರಾಗುವ ನೂಡಲ್ಸ್ ಅಲ್ಲ” ಎಂದು ಖಡಕ್ ಆಗಿಯೇ ಉತ್ತರಿಸಿದರು.

‘ರಾಷ್ಟ್ರೀಯ ಮಹಿಳಾ ಆಯೋಗವು ಪೊಲೀಸರೊಂದಿಗೆ ಸೇರಿ ಕೆಲಸ ಮಾಡುತ್ತಿದೆ. ನಾವೂ ಕೂಡ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಹಾಗಾಗಿ ಯಾವುದೇ ಮಾಹಿತಿಗಳನ್ನು ಈಗಲೇ ಹೇಳಲು ಸಾಧ್ಯವಿಲ್ಲ’ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...