KPS ವಿದ್ಯಾರ್ಥಿಗಳ ಉಚಿತ ಬಸ್ ಸೇವೆಯ ಹೊಣೆ ಯಾರದು?; AIDSO ಪ್ರಶ್ನೆ

Date:

ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ಶಾಲೆಗಳಲ್ಲಿ ಉಚಿತ ಸಾರಿಗೆ ಅವಕಾಶ ಕಲ್ಪಿಸುವುದರಿಂದ ಖಾಸಗಿ ಶಾಲೆಗಳ ಹಿರಿಮೆ ಕಡಿಮೆಯಾಗುತ್ತದೆ ಎಂದು ಆಡಳಿತ ಹೇಳುತ್ತದೆ. ಜೊತೆಗೆ, ಕೆಲವು ಕೌಶಲ್ಯಗಳ ಬದಲಾವಣೆ ಮಾಡುವುದರಿಂದ ಪೋಷಕರು ಖಾಸಗಿ ಶಾಲೆಗಳಿಗಿಂತ ಹೆಚ್ಚಾಗಿ ಸರ್ಕಾರಿ ಶಾಲೆಗಳನ್ನೇ ಆಯ್ಕೆ ಮಾಡುತ್ತಾರೆ ಎಂದು ಸರ್ಕಾರ ಅಂದುಕೊಳ್ಳುತ್ತಿದೆ. ಆದರೆ, ಈ ಉಚಿತ ಬಸ್ ವ್ಯವಸ್ಥೆ ಮಾಡುವ ಹೊಣೆಯನ್ನು ಯಾರು ಹೊರಬೇಕು? ಯಾರು ಹಣಕಾಸು ಒದಗಿಸಬೇಕು? ಎಂದು AIDSO ಪ್ರಶ್ನಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಮುಖಂಡರು, “ಸರ್ಕಾರದ ದಾಖಲೆಗಳ ಪ್ರಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ ಒದಗಿಸುವ ಹೊಣೆಯನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC)ಗೆ ವಹಿಸಲಾಗಿದೆ. ಈ SDMCಗಳು ಗ್ರಾಮ ಪಂಚಾಯತಿಗಳಿಂದ ಹಣ ಪಡೆಯಬೇಕಾಗುತ್ತದೆ ಎಂದು ಹೇಳಲಾಗಿದೆ. ಆದರೆ, ನಾಡ ಆಳಿಕೆ ಏಕೆ ಹಣಕಾಸು ನೆರವು ನೀಡುತ್ತಿಲ್ಲ?, ಈ ಹಮ್ಮುಗೆಯಲ್ಲಿ ಕರ್ನಾಟಕ ಸರ್ಕಾರದ ಪಾತ್ರವೇನು?, ಈ ದಾಖಲೆಯಲ್ಲಿ, ಕರ್ನಾಟಕ ಆಳಿಕೆಯು ಅನುದಾನವನ್ನು ಹೇಗೆ ಒದಗಿಸುತ್ತದೆ ಎಂಬುದರ ಬಗ್ಗೆ ಎಲ್ಲೂ ಹೇಳಿಲ್ಲ ಯಾಕೆ?, ಉಚಿತ ಬಸ್ ಸೇವೆಗೆ SDMC ಗಳನ್ನು ಏಕೆ ಒತ್ತಾಯಿಸಲಾಗುತ್ತಿದೆ? SDMC ಗಳು ಗ್ರಾಮ ಪಂಚಾಯಿತಿಗಳಿಂದ ಹಣಕಾಸು ನೆರವು ಹೇಗೆ ಪಡೆಯಬೇಕು?” ಎಂಬುದು ಸೇರಿದಂತೆ ಹಲವು ಪ್ರಶ್ನೆಗಳಿಗೆ ಉತ್ತರ ಅಪೇಕ್ಷಿಸಿದ್ದಾರೆ.

ಇದನ್ನೂ ಓದಿ: ಧಾರವಾಡ | ಡಿ. 10ರಂದು ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನಾ ಧರಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಪ್ರಮುಖ ಹಮ್ಮುಗೆಗೆ ಹಣಕಾಸು ಹಂಚಿಕೆಯ ಬಗ್ಗೆ ಆಡಳಿತ ಮಂಡಳಿ ಸರಿಯಾದ ಮತ್ತು ಪಾರದರ್ಶಕ ಉತ್ತರ ನೀಡಬೇಕಿದೆ. ಉಚಿತ ಸಾರಿಗೆ ವ್ಯವಸ್ಥೆಯೊಂದಿಗೆ ಕಡ್ಡಾಯ ಕಲಿಕೆಯ ಹಕ್ಕಿನ ಜಾರಿಗೆ ಸರಿಯಾದ ಹಣಕಾಸು ಕೊಡದೆ ಈ ಹಮ್ಮುಗೆಯನ್ನು ಏಕೆ ಜಾರಿ ಮಾಡಲು ಹೊರಟಿದೆ? ಇದರ ಹಿಂದೆ ಏನಾದರೂ ಕುತಂತ್ರ ಅಡಗಿದೆಯೇ? ಕಲಿಸುವ ಹೊಣೆಗಾರಿಕೆಯಿಂದ ನಾಡ ಆಡಳಿತ ಉಪಾಯವಾಗಿ ಹಿಂದೆ ಸರಿಯುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...