ಕನ್ನಡ ಸಾರಸ್ವತ ಲೋಕದಲ್ಲಿ ಬ್ಯಾರಿ ಬರಹಗಾರರು ಗುರುತಿಸಿಕೊಂಡಿಲ್ಲವೇಕೆ; ಮುಹಮ್ಮದ್ ಅಲಿ ಉಚ್ಚಿಲ್ ಪ್ರಶ್ನೆ

Date:

ಸಾಹಿತ್ಯದಲ್ಲಿ ಅಧಿಕ ಸಂಖ್ಯೆಯ ಬ್ಯಾರಿ ಲೇಖಕ – ಲೇಖಕಿಯರು ತೊಡಗಿಸಿಕೊಂಡಿದ್ದಾರೆ. ಆದರೆ, ಕನ್ನಡ ಸಾರಸ್ವತ ಲೋಕದಲ್ಲಿ ಈ ಬ್ಯಾರಿ ಬರಹಗಾರರು ಯಾಕೆ ಕಾಣಿಸುತ್ತಿಲ್ಲ, ಗುರುತಿಸಿಕೊಂಡಿಲ್ಲ? ಬ್ಯಾರಿ ಸಮುದಾಯದಲ್ಲೇ ಹುಟ್ಟಿ ಬೆಳೆದ ಸಾಹಿತಿ ಬೊಳುವಾರು ಮುಹಮ್ಮದ್ ಕುಂಞಿ, ಫಕೀರ್ ಮುಹಮ್ಮದ್ ಕಟ್ಪಾಡಿ ಕನ್ನಡ ಸಾರಸ್ವತ ಲೋಕದಲ್ಲಿ ನಿರೀಕ್ಷೆಗೂ ಮೀರಿ ಸಾಧಿಸಿದ್ದಾರೆ. ಆದರೆ, ಆ ಮಟ್ಟಕ್ಕೆ ಇತರ ಬ್ಯಾರಿ ಲೇಖಕ-ಲೇಖಕಿಯರು ಇನ್ನೂ ಯಾಕೆ ಬೆಳೆದಿಲ್ಲ ಎಂದು ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಸ್ಥಾಪಕಾಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಪ್ರಶ್ನಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲದಲ್ಲಿ ಆಯೋಜಿಸಿದ್ದ, ‘ಮೇಲ್ತೆನೆ’ ಸಂಘಟನೆ ಪ್ರಕಟಿಸಿದ ಕವಿ ಬಶೀರ್ ಅಹ್ಮದ್ ಕಿನ್ಯಾ ರಚಿಸಿರುವ ‘ಕವಿಯಲ್ಲ-ನಾನೊಬ್ಬ ಹಾಡುಗಾರ’ ಕವನ ಸಂಕಲನವನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು. “ಬಶೀರ್ ಅಹ್ಮದ್ ಕಿನ್ಯಾ ಸಾತ್ವಿಕ ಕವಿ. ಸಂವೇದನಾಶೀಲ ಬರಹಗಾರ. ಆದರೆ, ಪ್ರೋತ್ಸಾಹದ ಕೊರತೆಯಿಂದ ಅವರು ಸೇರಿದಂತೆ ಹಲವಾರು ಬ್ಯಾರಿ ಬರಹಗಾರರು ಹಿಂದೆ ಬಿದ್ದಿದ್ದಾರೆ. ಅಂತಹವರನ್ನು ಪ್ರೋತ್ಸಾಹಿಸುವ ಜವಾಬ್ದಾರಿ ನಮ್ಮದಾಗಿದೆ” ಎಂದು ಮುಹಮ್ಮದ್ ಅಲಿ ಉಚ್ಚಿಲ್ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಮಾತನಾಡಿ “ಕಲುಷಿತ ಸಮಾಜದಲ್ಲಿ ಮನಸುಗಳನ್ನು ಬೆಸೆಯಲು ಬಶೀರ್ ಅಹ್ಮದ್ ಕಿನ್ಯಾರಂತಹ ಬರಹಗಾರರ ಅಗತ್ಯವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಮುಖಂಡ ಫಾರೂಕ್ ಉಳ್ಳಾಲ್, ನಝೀರ್ ಉಳ್ಳಾಲ್, ಪತ್ರಕರ್ತ ಎ.ಕೆ. ಕುಕ್ಕಿಲ, ಉಳ್ಳಾಲ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ ಕೊಣಾಜೆ ಭಾಗವಹಿಸಿ ಮಾತನಾಡಿದರು.

ನಿವೃತ್ತ ಪ್ರಾಂಶುಪಾಲ ಇಸ್ಮಾಯೀಲ್ ಮಾಸ್ಟರ್ ಕೃತಿ ಪರಿಚಯಿಸಿದರು. ಬಶೀರ್ ಅಹ್ಮದ್ ಕಿನ್ಯ ಅನಿಸಿಕೆ ವ್ಯಕ್ತಪಡಿಸಿದರು. ಮೇಲ್ತೆನೆಯ ಮಾಜಿ ಅಧ್ಯಕ್ಷರಾದ ಮನ್ಸೂರ್ ಅಹ್ಮದ್ ಸಾಮಣಿಗೆ ಮತ್ತು ಮುಹಮ್ಮದ್ ಬಾಷಾ ನಾಟೆಕಲ್, ಕೋಶಾಧಿಕಾರಿ ಇಬ್ರಾಹೀಂ ಹಾಜಿ ನಡುಪದವು, ಸದಸ್ಯ ಮಂಗಳೂರು ರಿಯಾಝ್ ಉಪಸ್ಥಿತರಿದ್ದರು.
ಮೇಲ್ತೆನೆಯ ಅಧ್ಯಕ್ಷ ಅಶೀರುದ್ದೀನ್ ಸಾರ್ತಬೈಲ್ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಬಶೀರ್ ಕಲ್ಕಟ್ಟ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಹಂಝ ಮಲಾರ್ ಕಾರ್ಯಕ್ರಮ ನಿರೂಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...