ಶಾಂತಿ ಕದಡಿದರೆ ಬಜರಂಗದಳ, ಆರ್‌ಎಸ್‌ಎಸ್‌ ಸಂಘಟನೆಗಳ ನಿಷೇಧ : ಪ್ರಿಯಾಂಕ್‌ ಖರ್ಗೆ

Date:

  • ಯಾವುದೇ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ
  • ಹಿಜಾಬ್, ಹಲಾಲ್ ಕಟ್ ಹಾಗೂ ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧ ಹಿಂದಕ್ಕೆ

ರಾಜ್ಯದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ. ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, “ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ. ಒಂದು ವೇಳೆ ಶಾಂತಿ ಕದಡಿದರೆ ಅದು ಬಜರಂಗದಳ ಅಥವಾ ಆರ್‌ಎಸ್‌ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

“ಹಿಜಾಬ್, ಹಲಾಲ್ ಕಟ್ ಮತ್ತು ಗೋ ಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಕಳೆದ ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಬಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ” ಎಂದು ಹೇಳಿದ್ದಾರೆ.

“ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕುವ ಕಾನೂನು ನಮಗೆ ಬೇಕಾಗಿದೆ. ಯಾರೋ ನಾಗಪುರದವರು ಆದೇಶಿಸುವ ಕಾನೂನು ನಮಗೆ ಬೇಕಾಗಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ‘ಪುಣ್ಯಕೋಟಿ’ ಯೋಜನೆ ಪ್ರಾರಂಭ ಆಯಿತು. ಬಿಜೆಪಿ ಶಾಸಕರು ಯಾರೂ ಒಂದೇ ಒಂದು ಹಸುವನ್ನೂ ದತ್ತು ಪಡೆಯಲಿಲ್ಲ” ಎಂದು ಪ್ರಿಯಾಂಕ್‌ ಖರ್ಗೆ ಟಾಂಗ್‌ ನೀಡಿದರು.

ಈ ಸುದ್ದಿ ಓದಿದ್ದೀರಾ? ಷರತ್ತು ಇಲ್ಲದೆ ಗ್ಯಾರಂಟಿ ಯೋಜನೆ ಜಾರಿ ಮಾಡಿ, ಇಲ್ಲದಿದ್ದರೆ ವಿರೋಧಿ ಅಭಿಯಾನ: ಎಚ್‌ಡಿಕೆ ಎಚ್ಚರಿಕೆ

“ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರೀಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...