ಮಣ್ಣುಗಣಿಗಾರಿಕೆಯಿಂದ ರಿಪಬ್ಲಿಕ್ ಬಳ್ಳಾರಿಯಂತಾಗುತ್ತಿಯೇ ಹರಿಹರ?; ಮಂಜುನಾಥ ಕುಂದುವಾಡ ಅನುಮಾನ

Date:

ಹರಿಹರ ತಾಲೂಕಿನ ಹತ್ತಾರು ಗ್ರಾಮಗಳಲ್ಲಿ ವಿಶೇಷವಾಗಿ ನದಿ ದಡದ ಗ್ರಾಮಗಳ ಪಟ್ಟಾ ಹಾಗೂ ಸರ್ಕಾರಿ ಜಮೀನುಗಳಲ್ಲಿ ಅಕ್ರಮವಾಗಿ ಮಣ್ಣುಗಣಿಗಾರಿಕೆ ನಡೆಯುತ್ತಿದ್ದು, ಅದನ್ನು ತಕ್ಷಣ ತಡೆಯಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ ಆಗ್ರಹಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಈ ಹಿಂದಿನ ವರ್ಷಗಳಲ್ಲಿ ಹರಿಹರ ತಾಲೂಕಿನ ಹರ್ಲಾಪುರ, ಗುತ್ತೂರು, ಸಾರಥಿ, ಪಾಮೇನಹಳ್ಳಿ, ದೀಟೂರು, ಚಿಕ್ಕಬಿದರಿ, ಕರಲಹಳ್ಳಿ, ಬುಳ್ಳಾಪುರ, ಹಲಸಬಾಳು, ರಾಜನಹಳ್ಳಿ, ತಿಮ್ಲಾಪುರ, ಧೂಳೆಹೊಳೆ, ಇಂಗಳಗೊಂದಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿನ ಪಟ್ಟಾ ಹಾಗೂ ಸರ್ಕಾರಿ ಜಮೀನುಗಳಲ್ಲಿ ಅಕ್ರಮವಾಗಿ ಮಣ್ಣಿನ ಗಣಿಗಾರಿಕೆಯನ್ನು ಅವ್ಯಾಹತವಾಗಿ ನಡೆಸಲಾಗಿದೆ. ಈ ವರ್ಷವೂ ಆ ಪ್ರದೇಶಗಳಲ್ಲಿ ಗಣಿಗಾರಿಕೆ ನಡೆಸಲಾಗುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

‌‌ “ತುಂಗಭದ್ರಾ ನದಿ ದಡದ ಹಲವಾರು ಗ್ರಾಮಗಳಲ್ಲಿ 15 ರಿಂದ 20 ಅಡಿಗಳ ಆಳದವರೆಗೆ ಜೆಸಿಬಿ, ಇಟಾಚಿಯಂತಹ ಬೃಹತ್ ಯಂತ್ರಗಳಿಂದ ಗುಂಡಿಗಳನ್ನು ತೋಡುತ್ತ ಅಕ್ರಮವಾಗಿ ಮಣ್ಣುಗಣಿಗಾರಿಕೆ ನಡೆಸಲಾಗಿದೆ. ಅಕ್ರಮ ಮಣ್ಣು ಗಣಿಗಾರಿಕೆಯಿಂದ ಹತ್ತಾರು ಗ್ರಾಮಗಳ ವ್ಯಾಪ್ತಿಯ ಸಾವಿರಾರು ಎಕರೆ ಪಟ್ಟಾ ಹಾಗೂ ನದಿ ಖರಾಬ್(ಸರ್ಕಾರಿ) ಜಮೀನುಗಳ ಬದಿಯಲ್ಲಿ ನೂರಾರು ವರ್ಷಗಳಿಂದ ಬೆಳೆದು ನಿಂತಿದ್ದ ಸಾವಿರಾರು ಮರಗಳ ಮಾರಣಹೋಮವಾಗಿದೆ. ಈ ಗ್ರಾಮಗಳ ರೈತರು, ಜನಸಾಮಾನ್ಯರು ದನಕರುಗಳಿಗೆ ಸ್ನಾನ ಮಾಡಿಸಲು, ಬಟ್ಟೆ ತೊಳೆಯಲು, ಹಬ್ಬ ಹರಿದಿನಗಳಲ್ಲಿ ನದಿಗೆ ಹೋಗದಂತಾಗಿದೆ.‌ ನದಿ ದಡದ ಹಲವು ಸಾರ್ವಜನಿಕ ಬಂಡಿ ರಸ್ತೆ, ಕಾಲುದಾರಿಗಳು ಕಣ್ಮರೆಯಾಗಿವೆ. ನದಿ ದಡದ ಗ್ರಾಮಗಳ ಗುತ್ತೂರು, ಹಳೆ ಹರ್ಲಾಪುರ, ರಾಜನಹಳ್ಳಿ ಹಿಂದೂ ರುದ್ರಭೂಮಿ, ಮುಸ್ಲಿಮರ ಖಬರಸ್ಥಾನ್‌ಗಳಲ್ಲಿ ಕೆಲವು ನಾಶವಾಗಿದ್ದರೆ, ಇನ್ನೂ ಕೆಲವು ನಾಶವಾಗುವ ದಾರಿಯಲ್ಲಿವೆ. ಸಾಧು ಸಿದ್ಧಪ್ಪಜ್ಜನ ಮಠ ಹಾಗೂ ಗುತ್ತೂರು ಗ್ರಾಮದೇವತೆ ಉಡಿಸಲಮ್ಮ ದೇವಿಯ ಮೂಲ ದೇವಾಲಯಗಳು ಅಳಿವಿನಂಚಿಗೆ ಬಂದಿವೆ” ಎಂದು ಆತಂಕದ ಪರಿಸ್ಥಿತಿ ಬಿಚ್ಚಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೂ ವಿಜ್ಞಾನ ಮತ್ತು ಗಣಿ, ಕಂದಾಯ ಹಾಗೂ ಕೃಷಿ ಇಲಾಖೆಯಿಂದ ಅನುಮತಿ ಪಡೆದು ಏರಿ ಅಥವಾ ಕಲ್ಲುಗಳಿದ್ದರೆ ಮೂರು ಅಡಿಯಷ್ಟು ಮಾತ್ರ ಜಮೀನುಗಳನ್ನು ಸಮತಟ್ಟು ಮಾಡಲು ಅವಕಾಶವಿದೆ. ಮೂರು ಅಡಿಗಿಂತ ಹೆಚ್ಚು ಮಣ್ಣನ್ನು ತೆಗೆಸಿದರೆ ಅಂತಹ ಪಟ್ಟಾ ಜಮೀನುಗಳನ್ನು ಸರ್ಕಾರ ಭೂ ಕಂದಾಯ ಕಾಯ್ದೆ ಅನ್ವಯ ತನ್ನ ಸುಪರ್ದಿಗೆ ಪಡೆಯಲು ಅವಕಾಶವಿದೆ. ಆದರೂ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತಗಳು ಕಣ್ಮುಚ್ಚಿ ಕುಳಿತಿವೆ” ಎಂದು ಆರೋಪಿಸಿದರು.

“ಅಕ್ರಮವಾಗಿ ಮಣ್ಣುಗಣಿಗಾರಿಕೆ ನಡೆಯುತ್ತಿರುವುದರಿಂದ ಈಗಾಗಲೇ ತಾಲೂಕಿನ ಪರಿಸರ ನಲುಗಿದೆ. ಮಣ್ಣುಗಣಿಗಾರಿಕೆಗೆ ಪಟ್ಟಭದ್ರರು ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳನ್ನು ಸಂಪರ್ಕಿಸಿ ಅವರ ಅನೌಪಚಾರಿಕ ಅನುಮತಿಗಾಗಿ ಕೋರಿಕೊಂಡಿದ್ದು, ಅಲಿಖಿತವಾಗಿ ಅವಕಾಶ ನೀಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ತಾಲೂಕಿನ ಭೌಗೋಳಿಕ ರಚನೆ ಏರುಪೇರಾಗಿ ತೀವ್ರ ದುಷ್ಪರಿಣಾಮ ಬೀರುವ ಅಪಾಯವಿದೆ. ಪಕ್ಕದ ಜಮೀನಿನ ಬಡ ರೈತನಿಗೆ ಕೃಷಿ ಕಾರ್ಯ ನಡೆಸಲು ಅಸಾಧ್ಯ ಎನಿಸುವಷ್ಟು ತೊಂದರೆಯಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

”ಹರಿಹರ ತಾಲೂಕಿನಲ್ಲಿ ಈವರೆಗೆ ನಡೆದಿರುವ ಅಕ್ರಮ ಮಣ್ಣು ಗಣಿಗಾರಿಕೆಯ ದುಷ್ಪರಿಣಾಮ ಗಮನಿಸಿದರೆ ಹರಿಹರವು ರಿಪಬ್ಲಿಕ್ ಬಳ್ಳಾರಿ ಯಂತೆ ತಪ್ಪು ಹೆಜ್ಜೆಯತ್ತ ಸಾಗುತ್ತಿದೆಯೇ? ಎಂಬ ಅನುಮಾನ ದಟ್ಟವಾಗಿ ಮೂಡುತ್ತಿದೆ. ಕೂಡಲೆ ರಾಜ್ಯ ಸರ್ಕಾರವು ಹರಿಹರ ತಾಲ್ಲೂಕಿನ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸಲು ದ್ರೋಣ್ ಯಂತ್ರದ ಸಹಾಯ ಪಡೆಯಬೇಕು. ಅಕ್ರಮಕ್ಕೆ ಸಹಕಾರ ನೀಡಿದ ಸಂಬಂಧಿತ ಹಿಂದಿನ, ಈಗಿನ ಇಲಾಖಾಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಸಂಘಟನೆ ಆಗ್ರಹಿಸುತ್ತದೆ” ಎಂದು ಮುಖಂಡರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಬಾಲ್ಯ ವಿವಾಹ; ಐವರಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ

“ಎಷ್ಟೇ ಒತ್ತಡ ಬಂದರೂ ಕೂಡ ಮಣ್ಣುಗಣಿಗಾರಿಕೆಗೆ ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ನೀಡಿದಲ್ಲಿ ನಮ್ಮ ಸಂಘಟನೆಯು ಇತರೆ ಪ್ರಗತಿಪರ ಹಾಗೂ ಪರಿಸರ ಸಂಘಟನೆಗಳ ಸಹಕಾರದೊಂದಿಗೆ ತೀವ್ರತರವಾದ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ” ಎಂದು ದಸಂಸ ಮುಖಂಡರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಹರಿಹರ ತಾಲೂಕು ಸಂಚಾಲಕ ಮಹಾಂತೇಶ್ ಪಿ ಜೆ, ಪರಿಸರ ವೇದಿಕೆ ಅಧ್ಯಕ್ಷ ಗಿರೀಶ್ ದೇವರಮನೆ, ಸುನಿಲ್ ಹೊಟ್ಟೆಗೇನಹಳ್ಳಿ, ಕೆ ಗೋಪಿನಾಥಾಚಾರಿ, ಮಂಜುನಾಥ್, ಮಹಾಂತೇಶ ಹಾಲವರ್ತಿ, ಶಿವಶಂಕರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...