ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಯಲ್ಲಿ ʼಮಾದಿಗ ಸಮುದಾಯಕ್ಕೆ ಅನ್ಯಾಯʼವಾದರೆ ಸಹಿಸುವುದಿಲ್ಲ: ಮಂಜುನಾಥ ಕೊಂಡಪಲ್ಲಿ

Date:

ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಹಿನ್ನೆಲೆಯಲ್ಲಿ ʼಮಾದಿಗ ಸಮುದಾಯಕ್ಕೆ ಅನ್ಯಾಯʼವಾದರೆ ಸಹಿಸುವುದಿಲ್ಲ ಎಂದು ಮಾದಿಗ ದಂಡೋರ ಎಂಆರ್‌ಪಿಎಸ್‌ ಉತ್ತರ ಕರ್ನಾಟಕ ಅಧ್ಯಕ್ಷ ಶ್ರೀ ಮಂಜುನಾಥ ಕೊಂಡಪಲ್ಲಿ ಎಚ್ಚರಿಕೆ ನೀಡಿದ್ದಾರೆ.

ಧಾರವಾಡದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಮಾದಿಗ ಸಮುದಾಯಕ್ಕೆ ಟಿಕೆಟ್ ತಪ್ಪಿಸಲು ನಡೆಯುತ್ತಿರುವ ಷಡ್ಯಂತ್ರಗಳನ್ನು ಇಡೀ ರಾಜ್ಯದ ಮಾದಿಗ ಸಮುದಾಯ ಎಚ್ಚರಿಕೆಯಿಂದ ಪಕ್ಷಾತೀತವಾಗಿ ಗಮನಿಸುತ್ತಿದೆ” ಎಂದರು.

“ಪರಿಶಿಷ್ಟ ಜಾತಿಗಳಲ್ಲಿಯೇ ಅತ್ಯಂತ ಬಹುಸಂಖ್ಯಾತರಾದ ಮಾದಿಗ ಸಮುದಾಯವನ್ನು ರಾಜಕೀಯವಾಗಿ ಮೂಲೆಗುಂಪು ಮಾಡಲು ನಡೆಯುತ್ತಿರುವ ಪ್ರಯತ್ನಗಳು ಇದೇ ಮೊದಲೇನಲ್ಲ. ಆದರೆ ಈ ಬಾರಿ ಕಾಂಗ್ರೆಸ್ ಪಕ್ಷದಲ್ಲಿನ ಮಾದಿಗ ವಿರೋಧಿ ಶಕ್ತಿಗಳು ತೀರ ಮುಸುಕಿನಿಂದ ಹೊರಬಂದು ಎಡಗೈ ಸಮುದಾಯಕ್ಕೆ ಟಿಕೆಟ್ ಕೊಡಲೇಬಾರದೆಂದು ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವುದು ನಮ್ಮನ್ನು ಕೆರಳಿಸಿದೆ. ಇದರ ಪರಿಣಾಮವನ್ನು ಪ್ರಸಕ್ತ ಚುನಾವಣೆಯಲ್ಲಿ ಖಂಡಿತ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿರುಪದ್ರವಿಯಾಗಿರುವ ಮಾದಿಗ ಸಮುದಾಯ ಯಾವತ್ತಿಗೂ ಎಡಗೈ ಬಲಗೈ ಎಂಬ ಮನೋಭಾವನೆಯನ್ನು ಇಟ್ಟುಕೊಂಡು ಮಾತನಾಡಿದ ಉದಾಹರಣೆಗಳಿಲ್ಲ. 60ರ ದಶಕದ ಬಿ ಶಂಕರಾನಂದ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಂದ ಹಿಡಿದು ಇತ್ತೀಚಿನ ಎಚ್ ಸಿ ಮಹದೇವಪ್ಪನವರವರೆಗೆ ಎಲ್ಲ ಬಲಗೈ ನಾಯಕರನ್ನೂ ನಮ್ಮವರೆಂದು ಅಪ್ರತಿಮವಾಗಿ ಗೌರವಿಸಿದ ಇತಿಹಾಸ ಎಡಗೈ ಸಮುದಾಯದ್ದಾಗಿದೆ. ಆದರೆ ಕೋಲಾರದ ಬೆಳವಣಿಗೆಗಳು ಈ ಸೌಹಾರ್ದವನ್ನು ಹಾಳುಗೆಡವಲು ಮಾಡಿರುವ ಆತಂಕಕಾರಿ ಪಿತೂರಿಯಾಗಿದೆ. ಇದು ವಿರೋಧಿ ಬಣದ ವಾಸ್ತವ ಮನಸ್ಥಿತಿಯನ್ನು ತಿಳಿಸುವ ಒಂದು ಎಚ್ಚರಿಕೆಯ ಘಂಟೆಯಾಗಿದೆ” ಎಂದರು.‌

ಈ ಸುದ್ದಿ ಓದಿದ್ದೀರಾ? ಧಾರವಾಡ | ನಾಲ್ಕೈದು ಮಂದಿ ಬಂದು ನನ್ನಿಂದ ಒತ್ತಾಯವಾಗಿ ಸಹಿ ಹಾಕಿಸಿಕೊಂಡರು: ಮಲ್ಲಿಕಾರ್ಜುನ ಸ್ವಾಮೀಜಿ

“ಸಮುದಾಯದ ರಾಷ್ಟ್ರೀಯ ನಾಯಕ ಮಂದಕೃಷ್ಣ ಮಾದಿಗ ಅವರ ನಾಯಕತ್ವದಲ್ಲಿ ನಾವು ಮಾದಿಗರ ವಿರುದ್ಧ ನಡೆಯುತ್ತಿರುವ ಈ ರೀತಿಯ ಕುತಂತ್ರಗಳನ್ನು ಬಯಲಿಗೆಳೆದು ವಿರೋಧಿ ಶಕ್ತಿಗಳಿಗೆ ತಕ್ಕ ಪಾಠ ಕಲಿಸಲಿದ್ದೇವೆ” ಎಂದು ಹೇಳಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...