ತುರುವೇಕೆರೆ | ದೊಂಬರನಹಳ್ಳಿ ಮುತ್ತಿನಮ್ಮ ಜಾತ್ರೆಯಲ್ಲಿ ಗಾವು ಸಿಗಿತಕ್ಕೆ ತಡೆ ಬೀಳಲಿದೆಯಾ ? 

Date:

ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿಯ ದೊಂಬರನಹಳ್ಳಿ ಗ್ರಾಮದಲ್ಲಿ ಏ.22 ರಿಂದ 24 ರವರೆಗೆ ಗ್ರಾಮದೇವತೆಯಾದ ಮುತ್ತಿನಮ್ಮ ಜಾತ್ರಾ ಮಹೋತ್ಸವದಲ್ಲಿ ನಡೆಯುವ ಪ್ರಾಣಿ ಬಲಿ ಹಾಗೂ ಗಾವು ಸಿಗಿತ ಕೃತ್ಯವನ್ನು ತಡೆಯುವಂತೆ ತುರುವೇಕೆರೆ ತಹಶೀಲ್ದಾರ್ ಆರಕ್ಷಕ ವೃತ್ತ ನಿರೀಕ್ಷಕರಿಗೆ ನಿರ್ದೇಶನ ನೀಡಿ ಆದೇಶ ಹೊರಡಿಸಿದಾರೆ.

ಧಾರ್ಮಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ನಿಷೇಧ ಕಾಯ್ದೆಯು ಅನ್ವಯವಾಗುತ್ತದೆ ಎಂಬ ಅಂಶವನ್ನು ಸಂಬಂಧಿಸಿದ ಜಾತ್ರಾ ಆಯೋಜಕರಿಗೆ ಮತ್ತು ಗ್ರಾಮಸ್ಥರಿಗೆ ಮನವರಿಕೆ ಮಾಡಿ, ಸದರಿ ಕೃತ್ಯ ನಡೆಯುವುದನ್ನು ತಡೆಯಲು ನಿಯಮಾನುಸಾರ ಕ್ರಮ ಕೈಗೊಂಡು ವರದಿ ನೀಡಲು ಸೂಚಿಸಿರುತ್ತಾರೆ.

ಜಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಾರೆ. ಮಕ್ಕಳು ಕೂಡ ಬರುವುರಿಂದ ಪ್ರಾಣಿ ಬಲಿ ಮತ್ತು ಗಾವು ಸಿಗಿತದಂತಹ ಆಚರಣೆಗಳಿಂದ ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಮತ್ತು ಕಾನೂನು ಉಲ್ಲಂಘನೆಯೂ ಆಗಲಿದೆ. ಜಾತ್ರೆಯಲ್ಲಿ ಹತ್ತಾರು ಕೋಣಗಳ ತಲೆಗಳು ನೆಕ್ಕುರುಳಲಿವೆ, ಮೇಕೆಯ ಕತ್ತನ್ನು ಬಾಯಿಯಲ್ಲಿಯೇ ಸಿಗಿಯುವ ಆಚರಣೆ ನಡೆಯುತ್ತಾ ಬಂದಿದೆ. ಆದ್ದರಿಂದ ಈ ಆಚರಣೆಯನ್ನು ನಿಲ್ಲಿಸಬೇಕೆಂದು ಸಾರ್ವಜನಿಕರು ಅಪರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಇದನ್ನು ಗಂಭಿರವಾಗಿ ಪರಿಗಣಿಸಿರುವ ಎಡಿಸಿ ಅವರು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ತುರುವೇಕೆರೆ ತಹಶೀಲ್ದಾರ್ ಅವರಿಗೆ ಪತ್ರವನ್ನು ವರ್ಗಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರಿಗಳ ಮೇಲೆ ಅನುಮಾನ!:  ಹಿಂದೊಮ್ಮೆ ಇದೇ ಜಾತ್ರೆಯಲ್ಲಿ ಗಾವು ಸಿಗಿತ ಮತ್ತು ಪ್ರಾಣಿ ಬಲಿ ನಡೆಯಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ತಹಶೀಲ್ದಾರ್ ಮೌಢ್ಯ ತಡೆಯುವ ಭರವಸೆ ನೀಡಿದ್ದಾಗ್ಯೂ ಗ್ರಾಮಸ್ಥರು ಮತ್ತು ಪ್ರಭಾವಿಗಳೊಂದಿಗೆ ಶಾಮೀಲಾದ ಪೊಲೀಸರು ಬೆಳಗಿನ ಜಾವದಲ್ಲಿ ತಮ್ಮ ನಿರ್ಲಕ್ಷ್ಯತನದಿಂದ ಕೋಣ ಬಲಿಗೆ ಅವಕಾಶ ಮಾಡಿಕೊಟ್ಟರು ಎಂದು ದೂರುದಾರರು ಹೇಳಿದರು.

ಈ ಪ್ರಕರಣ ಮರುಕಳಿಸಿದರೆ ಅಧಿಕಾರಿಗಳನ್ನು ಅಮಾನತ್ತು ಮಾಡುವ ಕೆಲಸವಾಗಬೇಕು. ಸರ್ಕಾರ ರಚಿಸಿದ ಕಾನೂನನ್ನು ಅನುಷ್ಠಾನಕ್ಕೆ ತರುವಲ್ಲಿ ಅಧಿಕಾರಿಗಳು ವಿಫಲರಾದರೆ ಅವರಿಗೆ ಶಿಕ್ಷೆಯಾಗಲೇ ಬೇಕು. ಮುಖ್ಯವಾಗಿ ಕಾನೂನು ಸುವ್ಯವಸ್ಥೆಯ ಹೊಣೆ ಹೊತ್ತ ಪೊಲೀಸ್ ಇಲಾಖೆ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

” ಮೇಲಾಧಿಕಾರಿಗಳಿಂದ ಸೂಚನಾ ಪತ್ರ ಬಂದಿದೆ. ಪ್ರಾಣಿ ಬಲಿ ಮತ್ತು ಗಾವು ಸಿಗಿತ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ವೃತ್ತ ನಿರೀಕ್ಷಕರಿಗೂ ನಿರ್ದೇಶನ ನೀಡಿದ್ದೇನೆ. ಈ ಮೌಢ್ಯ ಆಚರಣೆಯನ್ನು ತಡೆಯುವ ಪ್ರಯತ್ನ ಮಾಡಲಾಗುವುದು ಎಂದು ತುರುವೇಕೆರೆ ತಹಶೀಲ್ದಾರ್  ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...