ಉಡುಪಿ | ಕೇಂದ್ರ-ರಾಜ್ಯ ಸರ್ಕಾರಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನಾ ಅಭಿಯಾನ – ವಿಮೆನ್ ಇಂಡಿಯಾ ಮೂವ್ಮೆಂಟ್

Date:

ಈಗಾಗಲೇ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನತೆಗೆ ಅತ್ತ ಕೇಂದ್ರ ಬಿಜೆಪಿ ಸರ್ಕಾರ ಅಡುಗೆ ಅನಿಲ ದರವನ್ನು ಹೆಚ್ಚಿಸಿದರೆ, ಇತ್ತ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್, ಹಾಲು, ನೀರು, ಬಸ್ ದರಗಳನ್ನು ಏರಿಸಿದ್ದು ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಅದರ ಜೊತೆಗೆ ಜನಸ್ನೇಹಿಯಾಗಿದ್ದ ನಮ್ಮ ಮೆಟ್ರೋ ರೈಲಿನ ದರ ಏರಿಕೆಯಿಂದ ಜನಸಾಮಾನ್ಯರು ಮತ್ತೆ ತಮ್ಮ ಖಾಸಗಿ ವಾಹನಗಳ ಕಡೆ ಮುಖ ಮಾಡುವಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜ್ಯದ ಜನತೆಯ ಮೇಲೆ ಮಿತಿಮೀರಿದ ಆರ್ಥಿಕ ಹೊರೆಯನ್ನು ಹೇರುತ್ತಿರುವುದರ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾ ಸಮಿತಿಯು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ನ ಉಡುಪಿ ಜಿಲ್ಲಾಧ್ಯಕ್ಷೆ ನಾಝಿಯಾ ನಸ್ರುಲ್ಲ ಹೇಳಿದರು.

ಉಡುಪಿಯ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕವಾಗಿ ತೈಲ ಬೆಲೆಗಳು ಇಳಿಯುತ್ತಿದ್ದರೂ ಸಹ ತೈಲಗಳ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡುವ ಮೂಲಕ ಸರ್ಕಾರ ಹಗಲು ದರೋಡೆಗೆ ಇಳಿದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಕಚ್ಚಾತೈಲಗಳ ಬೆಲೆ ಕುಸಿತದ ಲಾಭ ಜನ ಸಾಮಾನ್ಯರಿಗೆ ದೊರಕದಂತೆ ಮಾಡಲಾಗಿದೆ. ಬಡ, ಮಧ್ಯಮ ವರ್ಗಗಳಿಗೆ ಅಭಿವೃದ್ಧಿಯ ಭರವಸೆ ನೀಡಿ ಅಧಿಕಾರಕ್ಕೆ ಏರಿರುವ ಸರ್ಕಾರಗಳು ಇದೀಗ ಜನತೆಯ ದೈನಂದಿನ ಜೀವನವನ್ನೇ ತ್ರಾಸದಾಯಕವನ್ನಾಗಿಸಿವೆ.

ಒಂದು ಕಡೆ ಅಚ್ಛೇದಿನ್ ಹೆಸರಲ್ಲಿ ಕೇಂದ್ರ ಸರ್ಕಾರ, ಗ್ಯಾರಂಟಿ ಯೋಜನೆಗಳ ಮೂಲಕ ತಮ್ಮದು ಜನಪರ ಸರ್ಕಾರ ಎನ್ನುವ ರಾಜ್ಯ ಸರ್ಕಾರ ಎರಡೂ ಸೇರಿಕೊಂಡು ಬೆಲೆ ಏರಿಕೆಯಿಂದ ಜನರನ್ನೇ ಲೂಟಿ ಮಾಡುತ್ತಿವೆ. ಇದು ಸಾಲದೆಂಬಂತೆ ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿ ಜನರ ಗಮನ ಅತ್ತಕಡೆ ಸೆಳೆದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಕೇಂದ್ರ ಬಿಜೆಪಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರಗಳು ನಿರಂತರವಾಗಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಮಾಡುತ್ತಿವೆ‌ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಸಾಹತುಶಾಹಿ ಬ್ರಿಟಿಷರ ಜನವಿರೋಧಿ ನೀತಿಗಳಂತೆ ಇಂದು ಕೂಡ ಅಗತ್ಯ ಸೇವಾ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸಿ ದೇಶದ ಜನತೆಯನ್ನು ಆರ್ಥಿಕ ಸಂಕಷ್ಟಕ್ಕೆ ಈಡುಮಾಡಲಾಗುತ್ತಿದೆ. ಅತ್ಯವಶ್ಯಕ ವಸ್ತುಗಳ ಖರೀದಿಗೂ ಭಾರಿ ತೆರಿಗೆ ಪಾವತಿಸಬೇಕಾದಂತ ದುಸ್ಥಿತಿ ಉಂಟಾಗಿದೆ ಎಂದು ಹೇಳಿದರು.

ಜನರ ಹಿತಾಸಕ್ತಿ ಕಾಪಾಡುವಲ್ಲಿ ಸಂಪೂರ್ಣ ಎಡುವಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಏಪ್ರಿಲ್‍ 18 ರಿಂದ 28 ರ ವರೆಗೆ ರಾಜ್ಯದಾದ್ಯಂತ ಪ್ರತಿಭಟನಾ ಅಭಿಯಾನ ಹಮ್ಮಿಕೊಳ್ಳಲು ವಿಮೆನ್ ಇಂಡಿಯಾ ಮೂವ್ಮೆಂಟ್ ತೀರ್ಮಾನಿಸಿದ್ದು ಇದರ ಅಂಗವಾಗಿ ದಿನಾಂಕ 26-04-2025 ರಂದು ಕಾಪುವಿನಲ್ಲಿ ಹಾಗೂ 28-04-2025 ರಂದು ಉಡುಪಿ DC ಕಛೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಾಲ್ಲಾ ಉಪಾಧ್ಯಕ್ಷೆ ನಸೀಮಾ, ಜಿಲ್ಲಾ ಸಮಿತಿ ಸದಸ್ಯರಾದ ನಸೀಮ್ ಫಾತಿಮಾ, ಜೋಹಾರ, ರಹಮತುನ್ನಿಸಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...