ಹಾಸನ | ಭತ್ತದ ಆಸೆಗೆ ಮನೆಯ ಕಿಟಕಿ, ಹೆಂಚು ಪುಡಿ ಮಾಡಿದ ಕಾಡಾನೆ

Date:

  • ಪ್ರಾಣ ಭಯದಲ್ಲೇ ರಾತ್ರಿ ಕಳೆದ ಮನೆಯೊಳಗಿದ್ದ ಕುಟುಂಬ
  • ಮೂರು ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಕೆ

ಕಿಟಕಿ ಪಕ್ಕದಲ್ಲಿ ಮೂಟೆಗಳಲ್ಲಿ ಸಂಗ್ರಹಿಸಿಟ್ಟಿದ್ದ ಭತ್ತ ತಿನ್ನುವ ಆಸೆಗೆ ಕಾಡಾನೆಯು ಮನೆ ಮೇಲೆ ದಾಳಿ ಮಾಡಿದ್ದು, ಕಿಟಕಿ ಮತ್ತು ಹೆಂಚುಗಳನ್ನು ಹೊಡೆದುಹಾಕಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕ್ಯಾಮನಹಳ್ಳಿ ಗ್ರಾಮದ ಮುರಳಿ ಎಂಬುವವರ ಮನೆಯ ಮೇಲೆ ರಾತ್ರಿ 11.30ರ ಸುಮಯದಲ್ಲಿ ಕಾಡಾನೆ ದಾಳಿ ಮಾಡಿದೆ. ಕಾಡಾನೆ ಗುದ್ದಿರುವ ರಭಸಕ್ಕೆ ಮನೆಯ ಹೆಂಚುಗಳು ಪುಡಿ ಪುಡಿಯಾಗಿವೆ ಮತ್ತು ಮನೆ ಕಿಟಕಿ ಮುರಿದು ಹೋಗಿದೆ.

ಮುರಳಿ ಮತ್ತು ಕುಟುಂಬಸ್ಥರು ಮನೆಯ ಒಳಗೆ ಮಲಗಿದ್ದ ವೇಳೆಯೇ ಕಾಡಾನೆ ದಾಳಿ ಮಾಡಿದೆ. ಕಾಡಾನೆ ನೋಡಿ ಗಾಬರಿಗೊಂಡ ಮನೆಯವರು ಜೋರಾಗಿ ಕೂಗಾಡಿದ್ದರಿಂದ ಕಾಡಾನೆ ಹೆದರಿ ಹಿಂತಿರುಗಿ ಹೋಗಿದೆ. ಇಡೀ ರಾತ್ರಿ ಭಯದಿಂದಲೇ ಕಾಲ ಕಳೆದಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಡಾನೆಯು ಕ್ಯಾಮನಹಳ್ಳಿಯ ಚಿದಂಬರ ಎಂಬವರ ಮನೆ ಗೇಟು, ಜಯ್ ಮ್ಯಾತ್ಯು ಅವರ ಮನೆಯ ಗೇಟು ಹಾಗೂ ಪೋರ್ಟಿಕೋ, ದಿಲೀಪ್ ಎಂಬುವರ ಶೆಡ್, ಧನಂಜಯ ಅವರ ತೋಟ, ಅಗಲಟ್ಟಿ ಎಸ್ಟೇಟ್ ನ ಸೋಲಾರ್‌ ಬೇಲಿ ಹಾಗೂ ಗೇಟ್ ಗಳಿಗೆ ಹಾನಿ ಮಾಡಿದೆ.

ಕಾಡಾನೆ ಸಕಲೇಶಪುರ

ಮೂರು ಕಾಡಾನೆಗಳಿಗೆ ರೆಡಿಯೊ ಕಾಲರ್‌

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಡಾನೆಗಳ ಚಲನವಲನದ ಮೇಲೆ ನಿಗಾ ಇರಿಸಲು ಅರಣ್ಯ ಇಲಾಖೆ ಮೂರು ಕಾಡಾನೆಗಳನ್ನು ಹಿಡಿದು ರೇಡಿಯೋ ಕಾಲರ್ ಅಳವಡಿಸಿದೆ.

ಅಭಿಮನ್ಯು ನೇತೃತ್ವದಲ್ಲಿ ಪ್ರಶಾಂತ, ಭೀಮ, ಮಹೇಂದ್ರ, ಅಜೇಯ ಸಾಕಾನೆಗಳು, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಕಾಡಾನೆ ಸೆರೆ ಕಾರ್ಯಚರಣೆ ಮಾಡಲಾಗಿತ್ತು. ಸಕಲೇಶಪುರ ತಾಲೂಕಿನ ಕೆರೋಡಿ ಬಳಿ ಹಿಂದೆ ರೆಡಿಯೋ ಕಾಲರ್‌ ಅಳವಡಿಸಿದ್ದ ಹೆಣ್ಣಾನೆಗೆ ಅರಿವಳಿಕೆ ನೀಡಿ ನಿಷ್ಕ್ರಿಯವಾಗಿದ್ದ ಹಳೆಯ ರೇಡಿಯೋ ಕಾಲರ್ ತೆಗೆದು ಹೊಸ ರೇಡಿಯೋ ಕಾಲರ್ ಅಳವಡಿಸಲಾಗಿದೆ.

ಕಾಡಾನೆ ಸಕಲೇಶಪುರ

ಸಕಲೇಶಪುರ ತಾಲೂಕು ಗಡಿಭಾಗದ ಬ್ಯಾದನೆ ಸಮೀಪದ ಕಾಫಿ ತೋಟದಲ್ಲಿ ‘ಭುವನೇಶ್ವರಿ’ ಎಂಬ ಹೆಣ್ಣಾನೆಗೆ ರೇಡಿಯೋ ಕಾಲರ್ ಅಳವಡಿಸಿದ್ದಾರೆ. ಮಂಗಳವಾರ ಹೆಬ್ಬನಹಳ್ಳಿ ಸುತ್ತಮುತ್ತ ಸಂಚರಿಸುತ್ತಿರುವ ‘ಕಾಂತಿ’ ಎಂಬ ಹೆಸರಿನ ಹೆಣ್ಣಾನೆಯನ್ನು ಹಲಸುಲಿಗೆ ಬಳಿ ಸೆರೆಹಿಡಿದು ರೇಡಿಯೋ ಕಾಲರ್ ಅಳವಡಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಮಾಲೂರು | ಮರುಮತ ಎಣಿಕೆಗಾಗಿ ಹೈಕೋರ್ಟ್‌ ಮೊರೆ ಹೋದ ಬಿಜೆಪಿ ಅಭ್ಯರ್ಥಿ

ರೇಡಿಯೋ ಕಾಲರ್‌ ಅಳವಡಿಕೆ ಕಾರ್ಯಾಚರಣೆಯಲ್ಲಿ ಹಾಸನ ಡಿಸಿಎಫ್‌ ಹರೀಶ್, ಎಸಿಫ್ ಸುರೇಶ್, ವಲಯ ಅರಣ್ಯ ಅಧಿಕಾರಿ ಶಿಲ್ಪಾ, ಅರಿವಳಿಕೆ ತಜ್ಞರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...