ತುಮಕೂರಿನಲ್ಲಿ ಎರಡು ದಿನ ದಸಂಸ ಮಹಾಧೀವೇಶನ : ಮಾವಳ್ಳಿ ಶಂಕರ್

Date:

ಕರ್ನಾಟಕದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯಮಟ್ಟದ ಮಹಾಧೀವೇಶನ ಅಕ್ಟೋಬರ್ 05ರ ಶನಿವಾರ ಮತ್ತು ಅಕ್ಟೋಬರ್ ಭಾನುವಾರ ತುಮಕೂರು ನಗರದ ಏಂಪ್ರೆಸ್ ಕೆಪಿಎಸ್‌ಶಾಲೆಯ ಸಭಾಂಗಣದಲ್ಲಿ ಜರುಗಲಿದೆ ಎಂದು ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದರು.

ತುಮಕೂರು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ನಿಯಮದ ಪ್ರಕಾರ ಪ್ರತಿ ಮೂರು ವರ್ಷಗಳಿಗೊಮ್ಮೆ ಸರ್ವ ಸದಸ್ಯರ ಸಭೆ ನಡೆಸುವುದು ಕಡ್ಡಾಯ. ಹಿನ್ನೆಲೆಯಲ್ಲಿ ಅಕ್ಟೋಬರ್ 05-06 ರಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರು,ಸಂಘಟನಾ ಸಂಚಾಲಕರು,ಪದಾಧಿಕಾರಿಗಳು,ತಾಲೂಕು ಪದಾಧಿಕಾರಿಗಳ ಮಹಾಧೀವೇಶವನ್ನು ಆಯೋಜಿಸ ಲಾಗುತ್ತಿದೆ. ರಾಜ್ಯದ ವಿವಿಧ ಮೂಲೆಗಳಿಂದ ತುಮಕೂರಿಗೆ ಆಗಮಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಪ್ರೊ.ಬಿ.ಕೃಷ್ಣಪ್ಪ ಅವರು ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗಾಗಿ ದಲಿತ ಸಂಘರ್ಘ ಸಮಿತಿ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದೆ.ಇತ್ತೀಚಿನ ಸಾಮಾಜಿಕ, ಆರ್ಥಿಕ ಅಸಮಾನತೆಯ ಜೊತೆಗೆ, ಕೋಮುವಾದಿಕರಣವೂ ರಾಜ್ಯವನ್ನು ಕಿತ್ತು ತಿನ್ನುತಿದ್ದು,ಸಂವಿಧಾನಕ್ಕೆ,ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತಿರುವ ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಯಾವ ರೀತಿಯ ಹೆಜ್ಜೆಗಳನ್ನೀಡಬೇಕು.ದಲಿತ ಸಂಘರ್ಷ ಸಮಿತಿಯ ಮುಂದಿರುವ ಆಯ್ಕೆಗಳೇನು ಎಂಬ ವಿಚಾರವಾಗಿ ಚರ್ಚಿಸುವ ನಿಟ್ಟಿನಲ್ಲಿ ಈ ಸರ್ವಸದಸ್ಯರ ಮಹಾಧೀವೇಶನ ಮಹತ್ವದ ಹೆಜ್ಜೆಯಾಗಿದೆ.ಯುವಜನರಿಗೆ ಹೆಚ್ಚಿನ ಅದ್ಯತೆ ನೀಡಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಟೋಬರ್ 05ರಂದು ನಡೆಯುವ ದಲಿತ ಸಂಘರ್ಷ ಸಮಿತಿಯ ಮಹಾಧೀವೇಶನವನ್ನು ಬಂಡಾಯ ಸಾಹಿತಿ ನಾಡೋಜ ಬರಗೂರ ರಾಮಚಂದ್ರಪ್ಪ ಅವರು ಉದ್ಘಾಟಿಸಲಿದ್ದು,ಸಹಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ,ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್,ಇಂದಿರಾ ಕೃಷ್ಣಪ್ಪ,ನಟರಾಜ್ ಬೂದಾಳ್, ಜಿ.ವಿ.ಆನಂದಮೂರ್ತಿ, ಕೆ.ದೊರೆರಾಜು ಮತ್ತಿತರರ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಮಾವಳ್ಳಿ ಶಂಕರ್ ತಿಳಿಸಿದರು.

ಸರಕಾರದ ಮುಂದೆ ದಲಿತರ ಹಲವಾರು ಬೇಡಿಕೆಗಳಿವೆ.ಪ್ರಮುಖವಾಗಿ ಒಳ ಮೀಸಲಾತಿ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ದೇವರಾಜ ಅರಸು ಅವರ ಉಳುವವನೇ ಭೂಮಿಯ ಒಡೆಯ ಕಾಯ್ದೆ ನಂತರವೂ ಶೇ5 ರಷ್ಟು ದಲಿತರ ಕೈಯಲ್ಲಿ ಮಾತ್ರ ಭೂಮಿಯ ಒಡೆತನವಿದೆ. ದಲಿತರು ಅರ್ಜಿ ಸಲ್ಲಿಸಿರುವ ಸುಮಾರು 7ಲಕ್ಷ ಹೆಕ್ಟೇರ್ ಬಗುರ್ ಹುಕ್ಕಂ ಸಾಗುವಳಿ ಚೀಟಿ ವಿತರಣೆ ಬಾಕಿ ಇದೆ.ಶೋಷಿತ ಸಮುದಾಯಗಳ ಸಬಲೀಕರಣಕ್ಕೆ ಜಾರಿಗೆ ಬಂದ ಎಸ್ಸಿಪಿ ಮತ್ತು ಟಿಎಸ್ಸಪಿ ಹಣವನ್ನು ಬೇರೆ ವಿಷಯಗಳಿಗೆ ವರ್ಗಾವಣೆಯಾಗುತ್ತಿವೆ.ಈ ಎಲ್ಲಾ ವಿಚಾರಗಳನ್ನು ಈಗಾಗಲೆ ಸರಕಾರದ ಗಮನಕ್ಕೆ ತರಲಾಗಿದೆ. 2013ರಿಂದ 2024ರವರೆಗೆ ಸುಮಾರು 1.50ಲಕ್ಷ ಕೋಟಿ ಹಣ ಎಸ್ಸಿಪಿ, ಟಿ.ಎಸಪಿ ಹಣ ದಾಖಲೆಯಲ್ಲಿ ಖರ್ಚಾಗಿದೆ. ಇದರಿಂದ ದಲಿತ ಉದ್ದಾರವೆಸ್ಟಾಗಿದೆ ಎಂಬುದು ಅವಲೋಕನವಾಗಬೇಕಿದೆ. ಈ ಎಲ್ಲಾ ಅಂಶಗಳನ್ನು ಮುಂದಿಟ್ಟುಕೊಂಡು ದಲಿತ ಸಂಘರ್ಷ ಸಮಿತಿಯ ರಾಜ್ಯ ಮಹಾಧೀವೇಶನವನ್ನು ಕರೆಯಲಾಗಿದೆ.ನಾಡಿನ ದಲಿತಪರ ಸಂಘಟನೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮಾವಳ್ಳಿ ಶಂಕರ್ ಮನವಿ ಮಾಡಿದರು.

WhatsApp Image 2024 10 02 at 4.33.45 PM

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದದ ತುಮಕೂರು ಜಿಲ್ಲಾಧ್ಯಕ್ಷ ಕುಂದೂರು ತಿಮ್ಮಯ್ಯ ಮಾತನಾಡಿ, ರಾಜ್ಯದ ಚಳವಳಿಗಳಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿಯ ಹೋರಾಟ ರೋಚಕವಾದುದ್ದು,ಹಲವಾರು ನಾಯಕರು ಚಳವಳಿಯ ರಥ ಎಳೆದಿದ್ದಾರೆ.ಅವುಗಳನ್ನು ಮೆಲುಕು ಹಾಕುವ ಜೊತೆಗೆ,ಮುಂದೇನು ಎಂಬ ಪ್ರಶ್ನೆಗೂ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಮಹಾಧೀವೇಶನ ಮಹತ್ವ ಪಡೆದಿದೆ.ರಾಜ್ಯದ ವಿವಿಧೆಡೆಗಳಿಂದ ಸುಮಾರು 400 ಜನರು ಭಾಗವಹಿಸಲಿದ್ದು, ಜಿಲ್ಲೆಯಿಂದ 200 ಜನರು ಪಾಲ್ಗೊಳ್ಳಲಿದ್ದಾರೆ. ಹೊರಗಿನಿಂದ ಬರುವ ಕಾರ್ಯಕರ್ತರಿಗೆ ಏಂಪ್ರೆಸ್ ಶಾಲೆಯಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆೆ.ಎರಡು ದಿನವೂ ಊಟ, ತಿಂಡಿ ವ್ಯವಸ್ಥೆಯಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಚೇಳೂರು ಶಿವನಂಜಪ್ಪ, ವಿರೂಪಾಕ್ಷ ಡ್ಯಾಗೇರಹಳ್ಳಿ, ಮುರುಳಿ ಕುಂದೂರು, ಶ್ರೀನಿವಾಸ್,ತಾಯಪ್ಪ,ನಾಗಣ್ಣ ಬಡಿಗೇರ್,ವೀರೇಶ್ ಹಿರೇಹಳ್ಳಿ,ಡಾ.ಮಹೇಶ್, ಸಿದ್ದಪ್ಪ ಕಾಂಬ್ಳೆ ಮತ್ತಿತರರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...