ಕೊಲೆ ಪ್ರಕರಣದಲ್ಲಿ ಅಪರಾಧ ಸಾಬೀತಾದರೂ ಮಹಿಳೆಗೆ ಇಲ್ಲ ‘ಶಿಕ್ಷೆ’: ಮಂಗಳೂರು ನ್ಯಾಯಾಲಯದಿಂದ ವಿಶಿಷ್ಟ ತೀರ್ಪು!

Date:

ಕೊಲೆ ಪ್ರಕರಣವೊಂದರಲ್ಲಿ ಆರೋಪಿಯು ಕೊಲೆ ಮಾಡಿರುವ ಅಪರಾಧ ಸಾಬೀತಾದರೂ ಕೂಡ ನ್ಯಾಯಾಲಯವು ಜೈಲು ಶಿಕ್ಷೆ ನೀಡದೆ, ಅಪರಾಧಿಕ ಹೊಣೆಯಿಂದ ದೋಷ ಮುಕ್ತಗೊಳಿಸಿರುವ ವಿಶೇಷ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022ರಲ್ಲಿ ನಡೆದ ಪತಿಯ ಹತ್ಯೆ ಪ್ರಕರಣದ ತೀರ್ಪು ಇಂದು ಹೊರಬಿದ್ದಿದ್ದು, ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ -೧ (ಪೋಕ್ಸೋ) ದ ನ್ಯಾಯಾಧೀಶರಾದ ಮೋಹನ ಜೆ.ಎಸ್. ಅವರು, ಪತಿಯನ್ನು ಕೊಂದಿದ್ದ ಕೊಲೆ ಆರೋಪಿ, ಪತ್ನಿ ಎಲಿಯಮ್ಮ ಅವರನ್ನು ಅಪರಾಧಿಕ ಹೊಣೆಯಿಂದ ಮುಕ್ತಗೊಳಿಸುವ ಮೂಲಕ ವಿಶೇಷ ತೀರ್ಪನ್ನು ಪ್ರಕಟಿಸಿದ್ದಾರೆ.

ದಿನಾಂಕ 05-07-2022 ರಂದು ಬೆಳಗ್ಗೆ 5:30ಕ್ಕೆ ಪತಿ ಯೋಹಾನನ್ ಅಲಿಯಾಸ್ ಬೇಬಿ ಅವರನ್ನು ಎಲಿಯಮ್ಮ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದರು. ಪೊಲೀಸರ ವಿಚಾರಣೆಯ ವೇಳೆ ಆರೋಪಿ ಎಲಿಯಮ್ಮ, “ತನ್ನ ಪತಿಯನ್ನು ತಾನು ಕೊಂದಿರುವುದು ಹೌದು” ಎಂದು ಒಪ್ಪಿಕೊಂಡಿದ್ದರು. ಆದರೂ ನ್ಯಾಯಾಲಯ ಪೂರ್ಣ ಸಾಕ್ಷಿ ವಿಚಾರಣೆ ನಡೆಸಿತ್ತು. ಅಭಿಯೋಜನೆ ಪರ ಸಾಕ್ಷಿಗಳು ಕೃತ್ಯವನ್ನು ದೃಢಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 47
ಕೊಲೆಗೀಡಾಗಿದ್ದ ಪತಿ ಯೋಹಾನನ್ ಹಾಗೂ ಆರೋಪಿಯಾಗಿದ್ದ ಪತ್ನಿ ಎಲಿಯಮ್ಮ

ಆದರೆ, ಕ್ರಾಸ್ ಎಕ್ಸಾಮಿನೇಷನ್ (ಪಾಟಿ ಸವಾಲು) ಸಂದರ್ಭದಲ್ಲಿ ಪ್ರಕರಣಕ್ಕೆ ತಿರುವು ಸಿಕ್ಕಿತು. ಆರೋಪಿಗೆ ದೀರ್ಘಕಾಲದ ಮಾನಸಿಕ ಆರೋಗ್ಯದ ಸಮಸ್ಯೆಗಳಿರುವುದು ಮತ್ತು ಆಕೆ “Delusional Disorder” (ಭ್ರಮಾಧೀನ ಕಾಯಿಲೆ) ನಿಂದ ಬಳಲುತ್ತಿದ್ದಾರೆ ಎಂಬ ಬಗ್ಗೆ ಪ್ರಬಲ ಸಾಕ್ಷ್ಯಗಳು ದೊರೆತವು. ಇದನ್ನು ಆಧರಿಸಿ ವಾದ ಮಂಡಿಸಿದ ಆರೋಪಿ ಪರ ವಕೀಲರಾದ ವಿಕ್ರಮ್ ರಾಜ್ ಎ., “ಆರೋಪಿ ಕೃತ್ಯ ನಡೆಸಿದ್ದು ಹೌದಾದರೂ, ಆಕೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರಣ, ಆಕೆಗೆ ತಾನು ತಪ್ಪು ಮಾಡುತ್ತಿದ್ದೇನೆ ಎನ್ನುವ ಅರಿವಿಲ್ಲದ ಕಾರಣ, ಕಾನೂನು ರೀತಿಯ ಆಕೆ ಅಪರಾಧ ಎಸಗಿಲ್ಲ. ಆಕೆಗೆ ಕಾನೂನಿನ ರಕ್ಷಣೆ ಇದೆ” ಎಂದು ಬಲವಾಗಿ ಪ್ರತಿಪಾದಿಸಿದರು.

“ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರಣ, ಆಕೆಗೆ ತಾನು ಮಾಡುತ್ತಿರುವ ಕೃತ್ಯ ತಪ್ಪು ಎಂಬ ಅರಿವು ಇರಲಿಲ್ಲ. ಆದ್ದರಿಂದ ಆಕೆ ಅಪರಾಧ ಎಸಗಿಲ್ಲ” ಎಂದು ವಕೀಲರು ವಾದಿಸಿದ್ದರು. ಈ ವಾದವನ್ನು ಮನ್ನಿಸಿದ ನ್ಯಾಯಾಧೀಶರಾದ ಮೋಹನ ಜೆ.ಎಸ್., ಡಿಸೆಂಬರ್ 23ರಂದು ಕಾಯ್ದಿರಿಸಿದ್ದ ತೀರ್ಪನ್ನು ಇಂದು ಪ್ರಕಟಿಸಿದ್ದಲ್ಲದೇ, ಅಪರಾಧಿಕ ಹೊಣೆಯಿಂದ ದೋಷ ಮುಕ್ತಗೊಳಿಸಿದ್ದಾರೆ.

ಇದನ್ನು ಓದಿದ್ದೀರಾ? ದ.ಕ. | ಪಾಸ್‌ಪೋರ್ಟ್‌ ವೆರಿಫಿಕೇಶನ್‌ ವೇಳೆ ಸುಳ್ಳು ದಾಖಲೆ ಸೃಷ್ಟಿ: ಪೊಲೀಸ್ ಸಿಬ್ಬಂದಿಯನ್ನೇ ಬಂಧಿಸಿದ ಪೊಲೀಸರು!

“ಎಲಿಯಮ್ಮ ಗಂಡನನ್ನು ಕೊಂದಿರುವುದು ಸಾಬೀತಾಗಿದೆ, ಆದರೆ ಆಕೆ ಮಾನಸಿಕ ಅಸ್ವಸ್ಥರಾಗಿದ್ದರಿಂದ ಅಪರಾಧಿಕ ಹೊಣೆ(Criminal Liability) ಇಲ್ಲ ಎಂದು ತೀರ್ಪು ನೀಡಿದ್ದಾರೆ. ತೀರ್ಪಿನ ಅನ್ವಯ, ಜೈಲು ಅಧೀಕ್ಷಕರು ಆರೋಪಿಯನ್ನು ಬೆಂಗಳೂರಿನ ನಿಮ್ಹಾನ್ಸ್‌ಗೆ (NIMHANS) ಕಳುಹಿಸಿ, ಆಕೆ ಬಿಡುಗಡೆಗೆ ಯೋಗ್ಯಳೇ ಮತ್ತು ಆಕೆ ತನಗೆ ಅಥವಾ ಸಮಾಜಕ್ಕೆ ಅಪಾಯಕಾರಿಯೇ” ಎಂಬ ಬಗ್ಗೆ ವರದಿ ಪಡೆಯುವಂತೆ ನ್ಯಾಯಾಲಯವು ಆದೇಶಿಸಿದೆ.

ಈ ಪ್ರಕರಣದಲ್ಲಿ ಆರೋಪಿ ಪರವಾಗಿ ನ್ಯಾಯವಾದಿಗಳಾದ ವಿಕ್ರಮ್ ರಾಜ್ ಎ ಮತ್ತು ಜೀವನ್ ಎ.ಎಂ. ವಾದ ಮಂಡಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...