ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆಯ ವಿಶ್ವ ಭಾರತಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವಭಾರತಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ, ತಾಲ್ಲೂಕು ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್ ಮಾತನಾಡಿ, “1988 ರಿಂದ ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತದೆ. ಇದು ಹೆಚ್ಐವಿ ಸೋಂಕಿನ ಹರಡುವಿಕೆಯಿಂದ ಉಂಟಾಗುವ ಏಡ್ಸ್ ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ಕಾಯಿಲೆಯಿಂದ ಸಾವನ್ನಪ್ಪಿದವರನ್ನು ಶೋಕಿಸಲು ಮೀಸಲಾಗಿರುವ ಅಂತರರಾಷ್ಟ್ರೀಯ ದಿನವಾಗಿದೆ”.
“ಸ್ವಾಧೀನಪಡಿಸಿಕೊಂಡ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್ (AIDS) ಮಾನವ ಇಮ್ಯುನೊ ಡಿಫಿಷಿಯನ್ಸಿ ವೈರಸ್ (HIV) ನಿಂದ ಉಂಟಾಗುವ ಮಾರಣಾಂತಿಕ ಸ್ಥಿತಿಯಾಗಿದೆ. ಹೆಚ್ಐವಿ ವೈರಸ್ ರೋಗಿಯ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ದಾಳಿ ಮಾಡುತ್ತದೆ ಮತ್ತು ಇತರ ರೋಗಗಳಿಗೆ ಅದರ ಪ್ರತಿರೋಧವನ್ನು ಕಡಿಮೆ ಮಾಡುತ್ತದೆ. ಕೆಂಪು ರಿಬ್ಬನ್ ಎಚ್ಐವಿ-ಪಾಸಿಟಿವ್ ಜನರು ಮತ್ತು ಏಡ್ಸ್ ಪೀಡಿತರೊಂದಿಗೆ ಒಗ್ಗಟ್ಟಿನ ಜಾಗತಿಕ ಸಂಕೇತವಾಗಿದೆ”.
2020ರ ಹೊತ್ತಿಗೆ , ಏಡ್ಸ್ ವಿಶ್ವಾದ್ಯಂತ 27.2 ಮಿಲಿಯನ್ ಮತ್ತು 47.8 ಮಿಲಿಯನ್ ಜನರನ್ನು ಕೊಂದಿದೆ ಮತ್ತು ಅಂದಾಜು 37.7 ಮಿಲಿಯನ್ ಜನರು ಹೆಚ್ಐವಿಯೊಂದಿಗೆ ವಾಸಿಸುತ್ತಿದ್ದಾರೆ. ಇದು ದಾಖಲಾದ ಇತಿಹಾಸದಲ್ಲಿ ಅತ್ಯಂತ ಪ್ರಮುಖ ಜಾಗತಿಕ ಸಾರ್ವಜನಿಕ ಆರೋಗ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ಪ್ರಪಂಚದ ಅನೇಕ ಪ್ರದೇಶಗಳಲ್ಲಿ ಆಂಟಿರೆಟ್ರೋವೈರಲ್ ಚಿಕಿತ್ಸೆಗೆ ಇತ್ತೀಚಿನ ಸುಧಾರಿತವಾಗಿ, 2004ರಲ್ಲಿ ಉತ್ತುಂಗದಲ್ಲಿದ್ದ ಏಡ್ಸ್ ಸಾಂಕ್ರಾಮಿಕ ರೋಗದಿಂದ ಸಾವಿನ ಪ್ರಮಾಣವು ಶೇ.64% ರಷ್ಟು ಕಡಿಮೆಯಾಗಿದೆ (2004 ರಲ್ಲಿ 1.9 ಮಿಲಿಯನ್, 2020ಕ್ಕೆ ಹೋಲಿಸಿದರೆ) ಎಂದು ಹೇಳಿದರು.
ಪ್ಯಾನೆಲ್ ವಕೀಲರಾದ ಪಣಿರಾಜು ಮಾತನಾಡಿ, ಎಚ್ಐವಿ ಸೋಂಕು ಹೇಗೆ ಹರಡುತ್ತದೆ ಮತ್ತು ನಾವು ಹೇಗೆ ಜಾಗರೂಕತೆ ವಹಿಸಬೇಕು ಎಂದು ತಿಳಿಸಿದರು. ವಕೀಲರಾದ ನಾಗಶ್ರೀ ಮಾತನಾಡಿ, ಎಚ್ಐವಿ ಏಡ್ಸ್ ರೋಗಿಯು ಅವರು ಪಡೆಯುವ ಹಕ್ಕುಗಳ ಬಗ್ಗೆ ತಿಳಿಸಿದರು. ಪ್ಯಾನೆಲ್ ವಕೀಲರಾದ ಅಭಿಕುಮಾರ್ ಮಾತನಾಡಿ ರೋಗಿಗಳು ಕಾಲಕಾಲಕ್ಕೆ ಔಷಧಿಗಳನ್ನು ತೆಗೆದುಕೊಳ್ಳಬೇಕು ಮತ್ತು ಮುಂಜಾಗ್ರತೆ ವಹಿಸಬೇಕು ಮತ್ತು ತಮ್ಮ ಆರೋಗ್ಯವನ್ನು ತಾವೇ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ವಕೀಲ ಸಂಘದ ಅಧ್ಯಕ್ಷರಾದ ಗಂಗರಾಜು ಮಾತನಾಡಿ, ಈಗಿನ ಯುವಕರು ಮೋಜು ಮಸ್ತಿಗಾಗಿ ಡ್ರಗ್ಸ್ ಮತ್ತು ಮಾದಕ ವಸ್ತುಗಳನ್ನು ಸೇವನೆ ಮಾಡಿ. ಆ ಸಮಯದಲ್ಲಿ ಅವರಿಗೆ ಗೊತ್ತಾಗದೆ ಹಾಗೆ ದೈಹಿಕ ಸಂಪರ್ಕಿಕವಾಗಿ ಈ ರೀತಿ ರೋಗಗಳಿಗೆ ತುತ್ತಾಗುತ್ತಾರೆ. ಆದ್ದರಿಂದ, ಮೋಜು ಮಸ್ತಿಯನ್ನು ಮಾಡಬಾರದು. ಎಲ್ಲಾ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನವನ್ನು ಹರಿಸಿ ಜೀವನದಲ್ಲಿ ಒಳ್ಳೆ ಉದ್ಯೋಗಕ್ಕೆ ಸೇರಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.
ಈ ಸುದ್ದಿ ಓದಿದ್ದೀರಾ? ಸೋಮವಾರಪೇಟೆ | ಐಗೂರಿನಲ್ಲಿ ಫೆ.9ರಂದು ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ
ಕಾರ್ಯಕ್ರಮದಲ್ಲಿ ವಿಶ್ವಭಾರತಿ ಪ್ರಥಮ ದರ್ಜೆ ಕಾಲೇಜಿನ ಸಂಯೋಜಕ ಶಿವರಾಜು, ಪ್ರಾಂಶುಪಾಲ ಕಂದಸ್ವಾಮಿ, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ರವಿರಾಜ್ ಶರಣಪ್ಪ, ಅಶೋಕ್, ಅರಲಪ್ಪ, ಅಶೀಮ ಸುಲ್ತಾನ್, ರೇಖಾ, ವಿಶ್ವ ಭಾರತಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ಉಪನ್ಯಾಸಕರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿದಂತೆ ಇನ್ನಿತರರು ಇದ್ದರು.





