ಹೆಗ್ಗಡದೇವನಕೊಟೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Date:

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆಯ ವಿಶ್ವ ಭಾರತಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವಭಾರತಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ, ತಾಲ್ಲೂಕು ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್ ಮಾತನಾಡಿ, “1988 ರಿಂದ ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತದೆ. ಇದು ಹೆಚ್ಐವಿ ಸೋಂಕಿನ ಹರಡುವಿಕೆಯಿಂದ ಉಂಟಾಗುವ ಏಡ್ಸ್ ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ಕಾಯಿಲೆಯಿಂದ ಸಾವನ್ನಪ್ಪಿದವರನ್ನು ಶೋಕಿಸಲು ಮೀಸಲಾಗಿರುವ ಅಂತರರಾಷ್ಟ್ರೀಯ ದಿನವಾಗಿದೆ”.

“ಸ್ವಾಧೀನಪಡಿಸಿಕೊಂಡ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್ (AIDS) ಮಾನವ ಇಮ್ಯುನೊ ಡಿಫಿಷಿಯನ್ಸಿ ವೈರಸ್ (HIV) ನಿಂದ ಉಂಟಾಗುವ ಮಾರಣಾಂತಿಕ ಸ್ಥಿತಿಯಾಗಿದೆ. ಹೆಚ್ಐವಿ ವೈರಸ್ ರೋಗಿಯ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ದಾಳಿ ಮಾಡುತ್ತದೆ ಮತ್ತು ಇತರ ರೋಗಗಳಿಗೆ ಅದರ ಪ್ರತಿರೋಧವನ್ನು ಕಡಿಮೆ ಮಾಡುತ್ತದೆ. ಕೆಂಪು ರಿಬ್ಬನ್ ಎಚ್ಐವಿ-ಪಾಸಿಟಿವ್ ಜನರು ಮತ್ತು ಏಡ್ಸ್ ಪೀಡಿತರೊಂದಿಗೆ ಒಗ್ಗಟ್ಟಿನ ಜಾಗತಿಕ ಸಂಕೇತವಾಗಿದೆ”.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2020ರ ಹೊತ್ತಿಗೆ , ಏಡ್ಸ್ ವಿಶ್ವಾದ್ಯಂತ 27.2 ಮಿಲಿಯನ್ ಮತ್ತು 47.8 ಮಿಲಿಯನ್ ಜನರನ್ನು ಕೊಂದಿದೆ ಮತ್ತು ಅಂದಾಜು 37.7 ಮಿಲಿಯನ್ ಜನರು ಹೆಚ್ಐವಿಯೊಂದಿಗೆ ವಾಸಿಸುತ್ತಿದ್ದಾರೆ. ಇದು ದಾಖಲಾದ ಇತಿಹಾಸದಲ್ಲಿ ಅತ್ಯಂತ ಪ್ರಮುಖ ಜಾಗತಿಕ ಸಾರ್ವಜನಿಕ ಆರೋಗ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ಪ್ರಪಂಚದ ಅನೇಕ ಪ್ರದೇಶಗಳಲ್ಲಿ ಆಂಟಿರೆಟ್ರೋವೈರಲ್ ಚಿಕಿತ್ಸೆಗೆ ಇತ್ತೀಚಿನ ಸುಧಾರಿತವಾಗಿ, 2004ರಲ್ಲಿ ಉತ್ತುಂಗದಲ್ಲಿದ್ದ ಏಡ್ಸ್ ಸಾಂಕ್ರಾಮಿಕ ರೋಗದಿಂದ ಸಾವಿನ ಪ್ರಮಾಣವು ಶೇ.64% ರಷ್ಟು ಕಡಿಮೆಯಾಗಿದೆ (2004 ರಲ್ಲಿ 1.9 ಮಿಲಿಯನ್, 2020ಕ್ಕೆ ಹೋಲಿಸಿದರೆ) ಎಂದು ಹೇಳಿದರು.

ಪ್ಯಾನೆಲ್ ವಕೀಲರಾದ ಪಣಿರಾಜು ಮಾತನಾಡಿ, ಎಚ್ಐವಿ ಸೋಂಕು ಹೇಗೆ ಹರಡುತ್ತದೆ ಮತ್ತು ನಾವು ಹೇಗೆ ಜಾಗರೂಕತೆ ವಹಿಸಬೇಕು ಎಂದು ತಿಳಿಸಿದರು. ವಕೀಲರಾದ ನಾಗಶ್ರೀ ಮಾತನಾಡಿ, ಎಚ್ಐವಿ ಏಡ್ಸ್ ರೋಗಿಯು ಅವರು ಪಡೆಯುವ ಹಕ್ಕುಗಳ ಬಗ್ಗೆ ತಿಳಿಸಿದರು. ಪ್ಯಾನೆಲ್ ವಕೀಲರಾದ ಅಭಿಕುಮಾರ್ ಮಾತನಾಡಿ ರೋಗಿಗಳು ಕಾಲಕಾಲಕ್ಕೆ ಔಷಧಿಗಳನ್ನು ತೆಗೆದುಕೊಳ್ಳಬೇಕು ಮತ್ತು ಮುಂಜಾಗ್ರತೆ ವಹಿಸಬೇಕು ಮತ್ತು ತಮ್ಮ ಆರೋಗ್ಯವನ್ನು ತಾವೇ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ವಕೀಲ ಸಂಘದ ಅಧ್ಯಕ್ಷರಾದ ಗಂಗರಾಜು ಮಾತನಾಡಿ, ಈಗಿನ ಯುವಕರು ಮೋಜು ಮಸ್ತಿಗಾಗಿ ಡ್ರಗ್ಸ್ ಮತ್ತು ಮಾದಕ ವಸ್ತುಗಳನ್ನು ಸೇವನೆ ಮಾಡಿ. ಆ ಸಮಯದಲ್ಲಿ ಅವರಿಗೆ ಗೊತ್ತಾಗದೆ ಹಾಗೆ ದೈಹಿಕ ಸಂಪರ್ಕಿಕವಾಗಿ ಈ ರೀತಿ ರೋಗಗಳಿಗೆ ತುತ್ತಾಗುತ್ತಾರೆ. ಆದ್ದರಿಂದ, ಮೋಜು ಮಸ್ತಿಯನ್ನು ಮಾಡಬಾರದು. ಎಲ್ಲಾ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನವನ್ನು ಹರಿಸಿ ಜೀವನದಲ್ಲಿ ಒಳ್ಳೆ ಉದ್ಯೋಗಕ್ಕೆ ಸೇರಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸೋಮವಾರಪೇಟೆ | ಐಗೂರಿನಲ್ಲಿ ಫೆ.9ರಂದು ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ

ಕಾರ್ಯಕ್ರಮದಲ್ಲಿ ವಿಶ್ವಭಾರತಿ ಪ್ರಥಮ ದರ್ಜೆ ಕಾಲೇಜಿನ ಸಂಯೋಜಕ ಶಿವರಾಜು, ಪ್ರಾಂಶುಪಾಲ ಕಂದಸ್ವಾಮಿ, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ರವಿರಾಜ್ ಶರಣಪ್ಪ, ಅಶೋಕ್, ಅರಲಪ್ಪ, ಅಶೀಮ ಸುಲ್ತಾನ್, ರೇಖಾ, ವಿಶ್ವ ಭಾರತಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ಉಪನ್ಯಾಸಕರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...