ಕರ್ನಾಟಕ ಪ್ರಕಾಶಕರ ಸಂಘದ ಪ್ರಶಸ್ತಿಗಳಿಗೆ ವೈ ಎ ದಂತಿ, ವಿಶಾಲಾಕ್ಷಿ ಶರ್ಮ ಆಯ್ಕೆ

Date:

  • ಪ್ರತಿಯೊಂದು ಪುಸ್ತಕ ಪ್ರಕಟವಾದಾಗಲೂ ಮರ ನೆಡುವ ‘ಭೂಮಿ ಬುಕ್ಸ್‌
  • 15,000 ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡ ಪ್ರಶಸ್ತಿಗಳು

ಕರ್ನಾಟಕ ಪ್ರಕಾಶಕರ ಸಂಘ ಪ್ರತಿ ವರ್ಷವೂ ಕೊಡುಮಾಡುವ ಎಂ ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾರಕ ಪ್ರಶಸ್ತಿ ಮತ್ತು ನಂಜನಗೂಡು ತಿರುಮಲಾಂಬ ವಾರ್ಷಿಕ ಪ್ರಶಸ್ತಿಗೆ ವಿಜೇತರನ್ನು ಘೋಷಿಸಲಾಗಿದೆ.

ಈ ಕುರಿತು ಕರ್ನಾಟಕ ಪ್ರಕಾಶಕರ ಸಂಘದ ಜಂಟಿ ಕಾರ್ಯದರ್ಶಿ ಸೃಷ್ಟಿ ನಾಗೇಶ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ, ವಿಜೇತರನ್ನು ಹೆಸರಿಸಿದ್ದಾರೆ.

ಎಂ ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾರಕ ಪ್ರಶಸ್ತಿಗೆ ಸಾಗರದ ವೈ ಎ ದಂತಿ (ರವೀಂದ್ರ ಪುಸ್ತಕಾಲಯ) ಆಯ್ಕೆ ಮಾಡಲಾಗಿದ್ದು, ಹಾಗೆಯೇ ನಂಜನಗೂಡು ತಿರುಮಲಾಂಬ ಪ್ರಶಸ್ತಿಗೆ ವಿಶಾಲಾಕ್ಷಿ ಶರ್ಮ (ಭೂಮಿ ಬುಕ್ಸ್) ಆಯ್ಕೆಯಾಗಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎರಡು ಪ್ರಶಸ್ತಿಗಳು ಸಹ ತಲಾ 15,000 ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಇದೇ ತಿಂಗಳು 23ನೇ ತಾರೀಕಿಗೆ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ ವಿಶೇಷ | ರಮೇಶ್‌ ಜಾರಕಿಹೊಳಿ ವಿರುದ್ಧ ಬಂಡೆದ್ದ ಪಂಚಮಸಾಲಿ ಸಮುದಾಯ

ಪ್ರಶಸ್ತಿ ವಿಜೇತರ ಪರಿಚಯ

ವೈ ಎ ದಂತಿ : ಇವರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು. 1965ಲ್ಲಿ ಸಾಗರದಲ್ಲಿ ‘ರವೀಂದ್ರ ಪುಸ್ತಕಾಲಯ’ವನ್ನು ಆರಂಭಿಸಿದರು. ಸದಭಿರುಚಿಯ ಪುಸ್ತಕ ಪ್ರಕಟಣೆ, ವಿತರಣೆ, ಮಾರಾಟ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಕನ್ನಡದ ಸಾಂಸ್ಕೃತಿಕ ಚಹರೆಗಳನ್ನು ವಿಸ್ತರಿಸಿದರು.

ಶಿವರಾಮ ಕಾರಂತ, ಎಂ ಕೆ ಇಂದಿರಾ, ಹೊಸ್ತೋಟ ಮಂಜುನಾಥ ಭಾಗವತ, ಹಾ ಮಾ ನಾಯಕ, ನಾ. ಡಿಸೋಜ, ವೀಣಾ ಬನ್ನಂಜೆ ಮುಂತಾದ ಅನೇಕ ಹಿರಿ ಕಿರಿಯ ಲೇಖಕರ ಕೃತಿಗಳನ್ನು ಪ್ರಕಟಿಸಿದ ಹೆಮ್ಮೆ ರವೀಂದ್ರ ಪುಸ್ತಕಾಲಯದ್ದು. ಇವರ ಸೇವೆಯನ್ನು ಸಾಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಿವೆ.

ಈಗ ಕರ್ನಾಟಕ ಪ್ರಕಾಶಕರ ಸಂಘವು 2023ನೆಯ ಸಾಲಿನ ಎಂ. ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾರಕ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ.

ವಿಶಾಲಾಕ್ಷಿ ಶರ್ಮ : ಇವರು 1953ರಂದು ಉತ್ತರ ಕನ್ನಡ ಜಿಲ್ಲೆಯ ಬಕ್ಕೆಮನೆಯಲ್ಲಿ ಜನಿಸಿದ್ದಾರೆ. ಎಸ್‌ಎಸ್‌ಎಲ್‌ಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಓದು, ಕಾವ್ಯರಚನೆ, ಕೃಷಿ, ಅಡುಗೆ, ಹೊಲಿಗೆ ಮುಂತಾದವುಗಳಲ್ಲಿ ಆಸಕ್ತರಾದ ಇವರು ಭೂಮಿ ಬುಕ್ಸ್ ಎಂಬ ಪ್ರಕಾಶನ ಸಂಸ್ಥೆಯನ್ನು ಸ್ಥಾಪಿಸಿ ವಿಜ್ಞಾನ, ಸಮಾಜಶಾಸ್ತ್ರ, ಕೃಷಿ, ಅಭಿವೃದ್ಧಿ ಮೀಮಾಂಸೆ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ 4೦ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

ಪ್ರತಿಯೊಂದು ಪುಸ್ತಕ ಪ್ರಕಟವಾದಾಗಲೂ ಒಂದೊಂದು ಮರ ನೆಟ್ಟು ಪರಿಸರ ಸಂರಕ್ಷಣೆಯ ಪ್ರತಿಜ್ಞೆಯನ್ನು ಕ್ರಿಯಾಶೀಲವಾಗಿ ಪಾಲಿಸುತ್ತಾ ಬಂದಿರುವ ವಿಶಿಷ್ಟ ಪ್ರಕಾಶನ ಸಂಸ್ಥೆ ಇದಾಗಿದೆ. ನಾಗೇಶ್ ಹೆಗಡೆ, ಕೊಳ್ಳೇಗಾಲ ಶರ್ಮ, ಅನಿತಾ ಪೈಲೂರ್, ಮಲ್ಲಿಕಾರ್ಜುನ ಹೊಸಪಾಳ್ಯ, ಆನಂದತೀರ್ಥ ಪ್ಯಾಟಿ, ಗುರುರಾಜ್ ದಾವಣಗೆರೆ, ಅಖಿಲೇಷ್ ಚಿಪ್ಪಳಿ, ಶರಣ ಬಸವೇಶವರ ಅಂಗಡಿ ಮುಂತಾದವರ ಕೃತಿಗಳನ್ನು ಪ್ರಕಟಿಸಿದ್ದಾರೆ.

ಈಗ ಕರ್ನಾಟಕ ಪ್ರಕಾಶಕರ ಸಂಘವು 2023ನೆಯ ಸಾಲಿನ ನಂಜನಗೂಡು ತಿರುಮಲಾಂಬ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...