ಯಾದಗಿರಿ | ರೈತರಿಗಾಗಿ ʼಉತ್ತಮ ಬೇಸಾಯ ಕಾರ್ಯಕ್ರಮʼಗಳ ವಾರ್ಷಿಕ ಸಮ್ಮೇಳನ

Date:

ಯಾದಗಿರಿ ಜಿಲ್ಲೆಯ ರೈತರಿಗಾಗಿ ಉತ್ತಮ ಬೇಸಾಯ ಕಾರ್ಯಕ್ರಮಗಳ ವಾರ್ಷಿಕ ಸಮ್ಮೇಳನವನ್ನು ನಗರದ ಎನ್‌.ವಿ.ಎಂ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಉತ್ತಮ  ಬೇಸಾಯ ಕ್ರಮಗಳನ್ನು ಅಳವಡಿಸಿಕೊಂಡ ರೈತರಿಗೆ ಸನ್ಮಾನ ಮಾಡಿ, ಪ್ರಶಸ್ತಿ ವಿತರಿಸಿ ರೈತರನ್ನು ಪ್ರೋತ್ಸಾಹಿಸಲಾಯಿತು.

ಕಲಿಕೆ ಟಾಟಾ ಟ್ರಸ್ಟ್ಸ್, ಟೆಸ್ಕೋ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಕೃಷಿ ವಿಶ್ವವಿದ್ಯಾಲಯ ರಾಯಚೂರು ಹಾಗೂ ಪಶು ಸಂಗೋಪನೆ ಇಲಾಖೆ ಸಹಯೋಗದಲ್ಲಿ, ಜೀವನೋಪಾಯ ಕಾರ್ಯಕ್ರಮ ವತಿಯಿಂದ ಉತ್ತಮ ಬೇಸಾಯ ಕಾರ್ಯಕ್ರಮಗಳ ವಾರ್ಷಿಕ ಸಮ್ಮೇಳನವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಹಾಯಕ ಕೃಷಿ ನಿರ್ದೇಶಕರು ಸುನಿಲ್ ಕುಮಾರ್, ಕೃಷಿ ಇಲಾಖೆಯಲ್ಲಿ  ವಿವಿಧ ಯೋಜನೆಗಳ ಬಗ್ಗೆ ಮತ್ತು ರೈತರು ಕೃಷಿಯಲ್ಲಿ ಹೊಸ ಬೇಸಾಯ ಕ್ರಮಗಳನ್ನು ಅಳವಡಿಸಿಕೊಂಡು ಹೆಚ್ಚಿನ ಇಳುವರಿನ್ನು ಪಡೆಯುವ ಬಗ್ಗೆ ರೈತರಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾದಗಿರಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಅಜ್ಮುದ್ದೀನ್, ತೋಟಗಾರಿಕೆ ಇಲಾಖೆಯಿಂದ ರೈತರಿಗೆ ವಿವಿಧ ಯೋಜನೆಗಳ ಬಗ್ಗೆ  ಹಾಗೂ ತರಹೇವಾರಿ ತರಕಾರಿ ಬೆಳೆಗಳನ್ನು ಬೆಳೆಯುವುದರಿಂದ ರೈತರ ಆದಾಯದಲ್ಲಿ ಬದಲಾವಣೆ ತರುವುದು ಸಾಧ್ಯ ಎಂದು ರೈತರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅತಿಥಿಗಳಾದ ರಾಯಚೂರು ಕೃಷಿ ವಿಶ್ವವಿದ್ಯಾಲಯದ ನಿವೃತ್ತ  ಕೀಟಶಾಸ್ತ್ರಜ್ಞರು ಡಾ. ಸೋಮಶೇಖರ್, ಹಿಂಗಾರು ಹಂಗಾಮಿನ ಶೇಂಗಾ ಬೆಳೆಯಲ್ಲಿ ಕೀಟ ನಿರ್ವಹಣೆ ಮತ್ತು ರೋಗ ನಿರ್ವಹಣೆ ಬಗ್ಗೆ ರೈತರಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಕಲಿಕೆ ಟಾಟಾ ಟ್ರಸ್ಟ್ಸ್, ಟೆಸ್ಕೋ ಕಾರ್ಯಕ್ರಮ ವತಿಯಿಂದ  ವಿವಿಧ ಉತ್ತಮ  ಬೇಸಾಯ ಕ್ರಮಗಳನ್ನು ಅಳವಡಿಸಿಕೊಂಡ ರೈತರಿಗೆ ಸನ್ಮಾನ ಮಾಡಿ ರೈತರಿಗೆ ಪ್ರಶಸ್ತಿಯನ್ನು ವಿತರಣೆ ಮಾಡಲಾಯಿತು.

ಪಶುಪಾಲನಾ ವೈದ್ಯ ಅಧಿಕಾರಿಗಳು ಡಾ.ಪ್ರಜ್ವಲ್ ವಡಗೇರ, ಆಡುಸಾಕಾಣಿಕೆ ಮಾಡುವುದರಿಂದ ರೈತರು ಹೆಚ್ಚಿನ ಲಾಭಪಡೆಯಬಹುದು, ಮತ್ತು ಪಶುಗಳಿಗೆ ಬರುವ ರೋಗಗಳ ಬಗ್ಗೆ ಮತ್ತು ಅದರ ಹತೋಟಿಯ ಬಗ್ಗೆ ಮಾಹಿತಿ ನೀಡಿದರು.

ರಾಜ್ಯ ಗ್ರಾಮಿಣ ಜೀವನೂಪಾಯ ಮಿಷನ್ ಯಾದಗಿರಿ ಜಿಲ್ಲೆಯ ಕಾರ್ಯಕ್ರಮ ವ್ಯವಸ್ಥಾಪಕ ಕಾಶಿನಾಥ, ರೈತ ಮಹಿಳಾ ಗುಂಪುಗಳ ಬಲವರ್ಧನೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಕಾರ್ಯಕ್ರಮ ದಲ್ಲಿ ಕಾರ್ಯಕ್ರಮ ಸಂಯೋಜಕರಾದ ಮಂಜುನಾಥ್, ಶಾಂತುಗೌಡ ಬಿರಾದಾರ, ಸಂಪತ್, ಅನುರಾಧಾ, ಸುಧಾರಾಣಿ, ಹಸನ್, ಅರುಣ್ ಗುಬ್ಬಿ, ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ, ಕುಮಾರ್.ಎಸ್‌, ತುಮಕೂರು, ಕೃಷ್ಣ, ಶಿವರಾಜ, ರಫಿ, ಸ್ಯಾಂಡಿ ಉಳ್ಳೆಸೂಗೂರು, ಮಾಂತೇಶ್, ಹಣಮಂತ, ಬೀರಲಿಂಗ, ಭೀಮಶಂಕರ್, ಸೈದಪ್ಪ, ಮಲ್ಲೇಶ್, ಸಲೀಂ ಬಾಲಪ್ಪ, ಶಂಕರ್ ಇನ್ನೀತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...